ಬೆಂಗಳೂರು: ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಂದು ಲಸಿಕೆಗೋಸ್ಕರ ಬಿಕ್ಷೆ ಬೇಡುತ್ತಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ರಾಮದಾಸ್ ಡೀಕಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಂದು ಲಸಿಕೆ ಬಗ್ಗೆ ತಪ್ಪು ಕಲ್ಪನೆ ಬರುವ ರೀತಿಯಲ್ಲಿ ಮಾತನಾಡಿದ ನೀವು ಇಂದು ಲಸಿಕೆಗೋಸ್ಕರ ಭಿಕ್ಷೆ ಬೇಡ್ತಿವಿ ಎಂದು ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಹಾಗೂ ಇವೆಲ್ಲವನ್ನು ರಾಜ್ಯದ ಜನ ವೀಕ್ಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಡಿ.ಕೆ ಶಿವಕುಮಾರ್ ಅವರೇ ಒಂದು ಲಸಿಕೆ ಬರುತ್ತದೆ ಎಂದರೆ ಅದನ್ನು ಹಲವು ಬಾರಿ ಪರೀಕ್ಷೆ ಮಾಡಿರುತ್ತಾರೆ, ಆ ಪರೀಕ್ಷೆಗಳಲ್ಲಿ ಯಶಸ್ವಿಯಾದಾಗ ಮಾತ್ರ ಮಾನವ ಪ್ರಯೋಗ ಮಾಡುತ್ತಾರೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ನೀಡಿದಕ್ಕಾಗಿಯೇ ಇಂದು ಅವರು ಕೊರೊನಾ ಸೋಂಕಿಗೆ ತುತ್ತಾಗದೆ ಲಕ್ಷಾಂತರ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, ನಿಮ್ಮ ಹೇಳಿಕೆಗಳನ್ನು ರಾಜ್ಯದ ಜನರು ವೀಕ್ಷಿಸುತ್ತಿದ್ದಾರೆ ಎಂದು ನೋಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕು ಹರಡುತ್ತಿರುವುದರ ಹಿಂದಿನ ಕ್ವಾರಂಟೈನ್ ಕಥೆ ಏನು ಗೊತ್ತಾ..!

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚತ್ತಲಿದ್ದು ಜನರಲ್ಲಿ ಸಹಜವಾಗಿಯೇ ಆತಂಕ ಮನೆಮಾಡಿದೆ. ಆದರೆ ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬರುತ್ತದೆ ಎನ್ನುವಷ್ಟರಲ್ಲಿ ವಲಸಿಗರಿಗೆ ವಿನಾಯಿತಿ ನೀಡಲಾಯಿತು. ಇದು ಒಂದು ರೀತಿಯಿಂದ ಸೋಂಕು ಮತ್ತಷ್ಟು ಹರಡಲು ಕಾರಣವಾಯಿತು ಎನ್ನಬಹುದು.

ರೈತರ ಹೋರಾಟಕ್ಕೆ ಸ್ಪಂದಿಸಿ ಶೀರ್ಘದಲ್ಲೆ ರೈತರ ಬೇಡಿಕೆಗಳನ್ನ ಈಡೇರಿಸಲು ಭರವಸೆ

ಉತ್ತರಪ್ರಭ ಸುದ್ದಿ ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ರೈತರು ಶಿಂಗಟಾಲೂರ ಏತ ನೀರಾವರಿ ಎಡದಂಡೆ…

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ರದ್ದು

ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇತ್ತೀಚೆಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾಗಿದ್ದವರಿಗೆ ಬಿಗ್ ಶಾಕ್ ನೀಡಿದೆ.