ಬೆಂಗಳೂರು: ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಂದು ಲಸಿಕೆಗೋಸ್ಕರ ಬಿಕ್ಷೆ ಬೇಡುತ್ತಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ರಾಮದಾಸ್ ಡೀಕಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಂದು ಲಸಿಕೆ ಬಗ್ಗೆ ತಪ್ಪು ಕಲ್ಪನೆ ಬರುವ ರೀತಿಯಲ್ಲಿ ಮಾತನಾಡಿದ ನೀವು ಇಂದು ಲಸಿಕೆಗೋಸ್ಕರ ಭಿಕ್ಷೆ ಬೇಡ್ತಿವಿ ಎಂದು ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಹಾಗೂ ಇವೆಲ್ಲವನ್ನು ರಾಜ್ಯದ ಜನ ವೀಕ್ಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಡಿ.ಕೆ ಶಿವಕುಮಾರ್ ಅವರೇ ಒಂದು ಲಸಿಕೆ ಬರುತ್ತದೆ ಎಂದರೆ ಅದನ್ನು ಹಲವು ಬಾರಿ ಪರೀಕ್ಷೆ ಮಾಡಿರುತ್ತಾರೆ, ಆ ಪರೀಕ್ಷೆಗಳಲ್ಲಿ ಯಶಸ್ವಿಯಾದಾಗ ಮಾತ್ರ ಮಾನವ ಪ್ರಯೋಗ ಮಾಡುತ್ತಾರೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ನೀಡಿದಕ್ಕಾಗಿಯೇ ಇಂದು ಅವರು ಕೊರೊನಾ ಸೋಂಕಿಗೆ ತುತ್ತಾಗದೆ ಲಕ್ಷಾಂತರ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, ನಿಮ್ಮ ಹೇಳಿಕೆಗಳನ್ನು ರಾಜ್ಯದ ಜನರು ವೀಕ್ಷಿಸುತ್ತಿದ್ದಾರೆ ಎಂದು ನೋಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಶಾಸಕರು ಹೇಳಿದರೆ ಅಕ್ರಮ ಮರಳು ಗಣಿಗಾರಿಕೆಗೆ ಅನುಮತಿ ಕೊಡ್ತಾರಾ ಅಧಿಕಾರಿಗಳು?

ಮರಳು ನೀತಿ ಅನ್ವಯ ಮರಳು ಗಣಿಗಾರಿಕೆಗೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ನೀಡಲಾಗಿದೆ. ಆದರೆ ಮರಳು ಗುತ್ತಿಗೆ ಪಡೆದ ಗುತ್ತಿಗೆದಾರರು ಎಗ್ಗಿಲ್ಲದೇ ಸಕ್ರಮದ ಹೆಸರಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಅವರ ಪೋಷಣೆಯೂ ಇದೆ ಎನ್ನುವ ಮಾತುಗಳು ಕೇಳಲಾರಂಭಿಸಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೊಕ್ಕರಗುಂದಿ ಬೂದಿಹಾಳ ಗ್ರಾಮದಲ್ಲಿರುವ ಕಲ್ಪವೃಕ್ಷ ಮರಳು ಗುತ್ತಿಗೆ ಪಾಯಿಂಟ್ ಇದಕ್ಕೆ ತಾಜಾ ಉದಾಹರಣೆಯಾಗಿದೆ.

ಪ್ರವಾಸಿಗರಿಗೆ ಮಡಿಕೇರಿ ಮುಕ್ತ

ಮಡಿಕೇರಿ : ಕೊರೊನಾ ಸೋಂಕಿನ ಮಧ್ಯೆಯೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.…

ಬೈಕ ಕಳ್ಳನನ್ನು ಬಂದನ ಮಾಡಿದ ಪೊಲೀಸರು

ಲಕ್ಷ್ಮೇಶ್ವರ.ಬೈಕ್ ಕಳ್ಳನನ್ನು ಪತ್ತೆ ಹಚ್ಚುವಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಠಾಣೆ ಪೊಲೀಸರು ಯಶಸ್ಸಿಯಾಗಿದ್ದಾರೆ.ನಾಲ್ಕು ಬೈಕಗಳನ್ನು ಕಳ್ಳತನ…

ಪಿಯು ಪರೀಕ್ಷೆಗೆ ನಿಯಮವೇನು?

ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ‌ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.