ಬೆಂಗಳೂರು: ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಂದು ಲಸಿಕೆಗೋಸ್ಕರ ಬಿಕ್ಷೆ ಬೇಡುತ್ತಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ರಾಮದಾಸ್ ಡೀಕಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಂದು ಲಸಿಕೆ ಬಗ್ಗೆ ತಪ್ಪು ಕಲ್ಪನೆ ಬರುವ ರೀತಿಯಲ್ಲಿ ಮಾತನಾಡಿದ ನೀವು ಇಂದು ಲಸಿಕೆಗೋಸ್ಕರ ಭಿಕ್ಷೆ ಬೇಡ್ತಿವಿ ಎಂದು ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಹಾಗೂ ಇವೆಲ್ಲವನ್ನು ರಾಜ್ಯದ ಜನ ವೀಕ್ಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಡಿ.ಕೆ ಶಿವಕುಮಾರ್ ಅವರೇ ಒಂದು ಲಸಿಕೆ ಬರುತ್ತದೆ ಎಂದರೆ ಅದನ್ನು ಹಲವು ಬಾರಿ ಪರೀಕ್ಷೆ ಮಾಡಿರುತ್ತಾರೆ, ಆ ಪರೀಕ್ಷೆಗಳಲ್ಲಿ ಯಶಸ್ವಿಯಾದಾಗ ಮಾತ್ರ ಮಾನವ ಪ್ರಯೋಗ ಮಾಡುತ್ತಾರೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ನೀಡಿದಕ್ಕಾಗಿಯೇ ಇಂದು ಅವರು ಕೊರೊನಾ ಸೋಂಕಿಗೆ ತುತ್ತಾಗದೆ ಲಕ್ಷಾಂತರ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, ನಿಮ್ಮ ಹೇಳಿಕೆಗಳನ್ನು ರಾಜ್ಯದ ಜನರು ವೀಕ್ಷಿಸುತ್ತಿದ್ದಾರೆ ಎಂದು ನೋಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಸರ್ಕಾರದ ಆದೇಶದಲ್ಲಿ ಗೊಂದಲ ಗೂಡು ಸೇರಲು ಗದಗ ಜಿಲ್ಲೆಯ ಕಾರ್ಮಿಕರ ಪರದಾಟ..!

ಕಾರ್ಮಿಕರಿಗೆ ನಿಗದಿತ ದರದಲ್ಲಿ ಊರು ಸೇರಿಸಬೇಕು ಎನ್ನುವ ನಿಯಮವಿದೆ. ಆದರೆ ಉಡುಪಿಯಲ್ಲಿ ಮಾತ್ರ ಗದಗ ಜಿಲ್ಲೆಯ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ. ಈಗಾಗಲೇ ಒಂದುವರೆ ತಿಂಗಳಿಂದ ಕೆಲಸವಿಲ್ಲದೇ ಕಾರ್ಮಿಕರು ಒಪ್ಪತ್ತಿನೂಟಕ್ಕೂ ಪರದಾಡಿದ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ.

ಸರ್ಕಾರ ಗಂಭೀರ ನಿರ್ಧಾರ ತೆಗೆದುಕೊಳ್ಳದಿದ್ರೆ ಜನ ಆಸ್ಪತ್ರೆಗಳಲ್ಲಿ ಸಾವೀಗೀಡಾಗಬೇಕಾದೀತು : ಶಾಸಕ ಎಚ್.ಕೆ.ಪಾಟೀಲ್

ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ನ ಅಭಾವಿದೆ. ಆಕ್ಸಿಜನ್ ಕುರಿತಂತೆ ಗಂಭೀರವಾದ, ದೃಢವಾದ ತಕ್ಷಣದ ಹೆಜ್ಜೆಗಳನ್ನಿಡದೇ ಹೋದರೆ ಜನ ಆಸ್ಪತ್ರೆಗಳಲ್ಲಿ ಬಾರೀ ಸಂಖ್ಯೆಯಲ್ಲಿ ಸಾವೀಗೀಡಾಗಬೇಕಾದ ಪ್ರಸಂಗ ಬಂದೀತು ಎಂದು ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸರ್ಕಾರವನ್ನು ಎಚ್ಚರಿಸಿದ್ದಾರೆ.

ದೋತರಾ ಹರಿದು ಮಾಸ್ಕ್ ಮಾಡಿನಿ: ಎಸ್.ಎಸ್.ಪಾಟೀಲ್

ನಾನು ನನ್ನ ಧೋತರ ಹರಿದು ಮಾಸ್ಕ್ ಮಾಡಿಕೊಂಡಿದ್ದೇನೆ. ಇವುಗಳನ್ನೆ ನಮ್ಮ ಹೊಲದಲ್ಲಿ ಕೆಲಸ ಮಡುವ ಕಾರ್ಮಿಕರಿಗೂ ನೀಡಿದ್ದೇನೆ ಎಂದು ಮಾಜಿ ಸಚಿವ ಎಸ್.ಎಸ್.ಪಾಟೀಲ್

ರಾಜ್ಯದಲ್ಲಿಂದು ಕೊರೊನಾ ಮರಣ ಮೃದಂಗ: ಒಂದೇ ದಿನಕ್ಕೆ 42 ಸಾವು, 1839 ಸೋಂಕಿತರು!

ಬೆಂಗಳೂರು: ರಾಜ್ಯದಲ್ಲಿಂದು 1839 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…