ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್‌ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ(ಜೂನ್ 7)ಒಂದು ವರ್ಷವಾಗಿದೆ. ಕಳೆದ ವರ್ಷ ಇದೇ ದಿನ ಇದ್ದಕ್ಕಿದ್ದಂತೆ ಅವರು ಹೃದಯಾಘಾತದಿಂದ ನಿಧನರಾಗಿ ಅವರ ಕುಟುಂಬದವರನ್ನು, ಅಭಿಮಾನಿಗಳನ್ನು ದುಃಖದ ಸಾಗರದಲ್ಲಿ ಮುಳುಗಿಸಿದ್ದರು.

ಅವರ ಪತ್ನಿ ನಟಿ ಮೇಘನಾ ಸರ್ಜಾ, ತಮ್ಮ ನಟ ಧ್ರುವ ಸರ್ಜಾ ಸೇರಿದಂತೆ ಹಲವರು ಭಾವುಕ ಪತ್ರ ಬರೆದು ಸ್ಮರಿಸಿಕೊಂಡಿದ್ದಾರೆ. ನೀನು ದೇವರ ಮನೆಗೆ ಹೋಗಿ ಒಂದು ವರುಷವಾಯಿತು. ಎಷ್ಟು ಬೇಗ ಒಂದು ವರ್ಷ, ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ ಉದಾರಗುಣ ಮತ್ತು ಅಜಾತ ಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದಿಗೂ ನಿನ್ನ ನೆನಪಿನಲ್ಲೇ, ನಿನ್ನ ಪ್ರೀತಿಯ ಕುಟುಂಬ ಎಂದು ಇಡೀ ಕುಟುಂಬ ಭಾವುಕ ಪತ್ರವನ್ನು ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಭಾರತ ಮನು ಕುಲದ ಒಳಿತಿಗಾಗಿ ಶ್ರಮಿಸುತ್ತಿದೆ – ಮೋದಿ

ಇಂದು ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.

ಆರು ತಿಂಗಳ ನ್ಯಾಯ ನೀಡಿ ಮೋದಿಜೀ ಎಂದ ಸಿದ್ದು

20 ಲಕ್ಷ ಕೋಟಿ ಮೊತ್ತದಲ್ಲಿ ಇರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಪ್ವಾರದಾನಿ ನರೇಂದ್ಗಿರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ

ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…

ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ತಿಳಿಸಿದರು.