ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್‌ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ(ಜೂನ್ 7)ಒಂದು ವರ್ಷವಾಗಿದೆ. ಕಳೆದ ವರ್ಷ ಇದೇ ದಿನ ಇದ್ದಕ್ಕಿದ್ದಂತೆ ಅವರು ಹೃದಯಾಘಾತದಿಂದ ನಿಧನರಾಗಿ ಅವರ ಕುಟುಂಬದವರನ್ನು, ಅಭಿಮಾನಿಗಳನ್ನು ದುಃಖದ ಸಾಗರದಲ್ಲಿ ಮುಳುಗಿಸಿದ್ದರು.

ಅವರ ಪತ್ನಿ ನಟಿ ಮೇಘನಾ ಸರ್ಜಾ, ತಮ್ಮ ನಟ ಧ್ರುವ ಸರ್ಜಾ ಸೇರಿದಂತೆ ಹಲವರು ಭಾವುಕ ಪತ್ರ ಬರೆದು ಸ್ಮರಿಸಿಕೊಂಡಿದ್ದಾರೆ. ನೀನು ದೇವರ ಮನೆಗೆ ಹೋಗಿ ಒಂದು ವರುಷವಾಯಿತು. ಎಷ್ಟು ಬೇಗ ಒಂದು ವರ್ಷ, ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ ಉದಾರಗುಣ ಮತ್ತು ಅಜಾತ ಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದಿಗೂ ನಿನ್ನ ನೆನಪಿನಲ್ಲೇ, ನಿನ್ನ ಪ್ರೀತಿಯ ಕುಟುಂಬ ಎಂದು ಇಡೀ ಕುಟುಂಬ ಭಾವುಕ ಪತ್ರವನ್ನು ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಎಸ್‌ವೈ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲ ವಜುಭಾಯಿ ವಾಲಾ

ಮಹಾಮಾರಿ ಕರೊನಾ ವೈರಸ್‌ನಿಂದ ಉಂಟಾದ ಕಠಿಣ ಪರಿಸ್ಥಿತಿನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶ್ವಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.

ಕೊರ್ಲಹಳ್ಳಿ: ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲು!

ಗದಗ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ಕೊರ್ಲಹಳ್ಳಿ ಸಮೀಪದಲ್ಲಿ ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಅಭಿನಂದನೆಗಳು-ಸಿದ್ದಲಿಂಗಯ್ಯ ಹೊಂಬಾಳಿ ಮಠ

ಶಿರಹಟ್ಟಿ: ಹಿಂದೂ ಮುಸ್ಲಿಮ್ ಭಾವೈಕ್ಯತೆಗೆ ಹಾಗೂ ಕೋಮು ಸೌಹಾರ್ದತೆಗೆ ಹೆಸರಾಗಿರುವ ಶಿರಹಟ್ಟಿ ಪಕೀರೇಶ್ವರ ಸಂಸ್ಥಾನ ಮಠಕ್ಕೆ…

ನಾಗಾವಿ ಬಿಕೆ ಗ್ರಾಮದಲ್ಲಿ ಶ್ರೀ ಶ್ರೀಶೈಲ ಮಲ್ಲಿಕಾರ್ಜುನ ನೂತನ ರಥೋತ್ಸವ

ಉತ್ತರಪ್ರಭ ವರದಿ: ಇಸ್ಲಾಯಿಲ್ ಎಮ್ ಶೇಖ.    ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ನಾಗಾವಿ ಬಿಕೆ…