ಮಾನವ ಸಂಘ ಜೀವಿ ಸಮಾಜದಲ್ಲಿದ್ದುಕೊಂಡು ಹೊಂದಿಕೊAಡು ಜೀವನ ಸಾಗಿಸುತ್ತಿದ್ದಾನೆ. ಈ ಜೀವನ ಸಾಗಿಸುವುದಕ್ಕಾಗಿ ದಿನಂಪ್ರತಿ ದೇಹ ಮತ್ತು ಬುದ್ಧಿಯನ್ನು ದಂಡಿಸಿ ದುಡಿಯುತ್ತಲೇ ಇದ್ದಾನೆ. ಈ ದಣಿದ ದೇಹ ಮತ್ತು ಬುದ್ಧಿಗೆ ವಿಶ್ರಾಂತಿ ನೀಡಲು ಅವನು ಮೊರೆ ಹೋಗುವುದು ಮನರಂಜನೆಯನ್ನು.
ಈ ಮನರಂಜನೆಗಳಲ್ಲಿ ಸಂಗೀತವು ಒಂದು. ಸಂಗೀತವು ಪ್ರತಿ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವೆAದರೆ ತಪ್ಪಾಗಲಾರದು. ಜನನದಿಂದ ಮರಣದವರೆಗು ಸಂಗೀತ ಮಾನವನೊಂದಿಗೆ ಅವಿನಾಭಾವ ಸಂಬAಧ ಹೊಂದಿದೆ. ಮಗು ಗರ್ಭದಲ್ಲಿರುವಾಗಲೇ ಅದು ಸಂಗೀತದೊAದಿಗೆ ಸಂಬAಧ ಹೊಂದುತ್ತದೆ. ಮುಂದೆ ಅದು ಮಣ್ಣಲ್ಲಿ ಮಣ್ಣಾಗುವವರೆಗು ಸಾಗುತ್ತದೆ.
ಸೀಮಂತ, ನಾಮಕಣ, ಉಪನಯನ, ಮದುವೆ, ಜಾತ್ರೆ, ಹಬ್ಬ ಹರಿದಿನಗಳು, ಸಾವು ಹೀಗೆ ಮನುಷ್ಯನ ಜೀವನದಲ್ಲಿ ನಡೆಯುವ ಅತಿ ಮುಖ್ಯ ಕಾರ್ಯಕ್ರಮಗಳಲ್ಲಿ ಸಂಗೀತ ಇದ್ದೆ ಇರುತ್ತದೆ. ಜಾಗತೀಕರಣ ಮತ್ತು ತಂತ್ರಜ್ಞಾನದ ಯುಗದಲ್ಲಿ ಜೀವಿಸುತ್ತಿರುವ ಮಾನವನಿಗೆ ಕೆಲಸದಿಂದ ಸಿಗುವ ತೃಪ್ತಿಗಿಂತ ಒತ್ತಡವೇ ಹೆಚ್ಚು. ಹೀಗೆ ಎಷ್ಟೇ ಒತ್ತಡವಿದ್ದರು ಒಮ್ಮೆ ತಮಗಿಷ್ಟವಾದ ಸಂಗೀತವನ್ನು ಆಲಿಸಿದಾಗ ಆ ವ್ಯಕ್ತಿಗೆ ಹೊಸ ಚೈತನ್ಯ ಮೂಡುತ್ತದೆ. ಕೆಲಸದ ಕಡೆಗೆ ಹೆಚ್ಚು ಗಮನ ಕೊಡಲು ಸಾಧ್ಯವಾಗುತ್ತದೆ. ಇದರಿಂದ ಆರೋಗ್ಯವು ಸಹ ಉತ್ತಮವಾಗುತ್ತದೆ.


ಮಾನವನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಅಷ್ಟೇ ಮಾನಸಿಕ ಆರೋಗ್ಯವು ಮುಖ್ಯ. ಹೀಗಾಗಿಯೇ ಮಾನಸಿಕ ಆರೋಗ್ಯ ಸುಧಾರಿಸಲು ಸಂಗೀತ ಚಿಕಿತ್ಸೆಯನ್ನು ನೀಡುತ್ತಾರೆ. ಇದರಿಂದ ಆತಂಕ, ಖಿನ್ನತೆ, ನಿದ್ರಾಹೀನತೆ, ಒತ್ತಡವು ಕಡಿಮೆಯಾಗುತ್ತದೆ. ಬೌದ್ಧಿಕ ಮಟ್ಟ, ಸಂತೋಷ, ಆತ್ಮತೃಪ್ತಿ ಹೆಚ್ಚಾಗುತ್ತದೆ.
ಈ ಎಲ್ಲ ಅಂಶಗಳನ್ನು ಗಮನಿಸಿದಾಗ ಸಂಗೀತವು ವ್ಯಕ್ತಿಯ ಜೀವನಕ್ಕೆ ಬಹುಮುಖ್ಯವಾಗಿದೆ. ಸಂಗೀತವನ್ನು ಕೇವಲ ಮನರಂಜನೆಗೆ ಬಳಸದೆ, ಅದರಲ್ಲಿರುವ ಚಿಕಿತ್ಸಕ ಗುಣಗಳನ್ನು ಅರಿತುಕೊಂಡು ಸಂಗೀತ ಆಲಿಸಿದರೇ ಹೆಚ್ಚು ಪರಿಣಾಮಕಾರಿಯಾಗುತ್ತದೆ.

  • ಶ್ರೇಯಾ ಜೋರಾಪೂರ, ಸಂಗೀತ ವಿಭಾಗ
    ಕರಾಅವಿವಿ, ವಿಜಯಪುರ
Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-1

ಕೊರೋನಾ ಕಾವ್ಯ ಸರಣಿಗೆ ಕವನ ಬರೆದವರು ಮುತ್ತು.ಹೆಚ್.ಬಿ(ಶಿಕ್ಷಕರು), ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುತ್ತು, ಭವಿಷ್ಯದ ಭರವಸೆಯ ಶಿಕ್ಷಕ ಮತ್ತು ಬರಹಗಾರ. ಅವರಲ್ಲಿನ ಜನಪರ ಮತ್ತು ಜೀವಪರ ಕಾಳಜಿಯೇ ಈ ಕಾವ್ಯದಲ್ಲಿ ಅಕ್ಷರ ರೂಪದಲ್ಲಿ ಹೊರಹೊಮ್ಮಿದೆ.

ಜೀವ, ಜೀವನ ಮತ್ತು ಆರ್ಥಿಕತೆ ಮೇಲೆ ಕರೋನಾ ಪರಿಣಾಮ

ಕರೋನಾ ಮಾನವನ ಮೇಲೆ ಬೀರುವ ಪ್ರಭಾವವನ್ನು ವಿಶ್ವ ಕಣ್ಣಾರೆ ಕಂಡಿದೆ. ಇನ್ನು ರೂಪಾಂತರಿ ಕೊರೋನಾ ವೈರಸ್ ಕೊಡುತ್ತಿರುವ ಕಾಟವೂ ಅಷ್ಟಿಷ್ಟಲ್ಲ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದು ಸರಕಾರಕ್ಕೆ ಆತಂಕ ಸೃಷ್ಟಿಸಿದೆ.ಮತ್ತೊಂದೆಡೆ ಕೊರೋನಾ ವೈರಸ್ ಮನುಷ್ಯನ ದೇಹದ ಮೇಲೆ ಅದರಲ್ಲಿಯೂ ಮಕ್ಕಳು, ಯುವಕರ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮತ್ತೊಂದಿಷ್ಟು ಅಧ್ಯಯನಗಳು ನಡೆದಿವೆ.

ಬಿಡುವೆನೆಂದರೂ ಬಿಡದಂತೆ ಕಾಡುತ್ತಿರುವ ಆಕೆ ಹೋಗಿದ್ದಾರೂ ಎಲ್ಲಿಗೆ..?

ಅದ್ಯಾಕೋ ಗೊತ್ತಿಲ್ಲ ನಾನು ಅವಳಿಗೆ ಫಿದಾ ಆಗಿಬಿಟ್ಟಿದ್ದೆ. ಕ್ಷಣವೂ ಬಿಟ್ಟಿರದಷ್ಟು ಗಾಢ ಪ್ರೀತಿ ಬೆಳೆದಿತ್ತು. ನಮ್ಮಿಬ್ಬರ ಪ್ರೀತಿಯ ಬೆಸುಗೆಗೆ ಮೂರು ವರ್ಷವಾಗಿತ್ತು. ನನ್ನ ಹೃದಯದ ಭಾಷೆ ಅವಳಿಗೆ ಗೊತ್ತು.

ಅಮ್ಮನ ಮೃತದೇಹದ ಎದುರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರ

ತೆಲಂಗಾಣ: ವಿಧಿ ಎಂಥ ಕ್ರೂರಿ ಅಲ್ಲವೇ..? ಯಾರ ಬಾಳಲ್ಲಿ ಹೇಗೆಲ್ಲಾ ಆಟ ಆಡುತ್ತೋ ಗೊತ್ತೇ ಆಗುವುದಿಲ್ಲ. ಅದರಲ್ಲೂ ಕೊರೊನಾದ ಈ ದಿನಗಳಲ್ಲಿ ಇಂದು ಮಾತಾಡಿದವರು ನಾಳೆ ಇಲ್ಲವಾಗುತ್ತಿದ್ದಾರೆ. ಈಗ ಮಾತಾಡಿದವರು ಆ ಕ್ಷಣಕ್ಕೆ ಇಲ್ಲವಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಯುವಕನೋರ್ವ ತಾಯಿಯ ಮೃತದೇಹದ ದುರಿಗೆ ದಾಂಪತ್ಯಕ್ಕೆ ಕಾಲಿಟ್ಟು ಸಪ್ತಪದಿ ತುಳಿದ ಘಟನೆ ನಡೆದಿದೆ. ಈ ಮನಕಲಕುವ ಘಟನೆ ಕಂಡ ಗ್ರಾಮಸ್ಥರು ದೂರದಿಂದಲೇ ಕಣ್ಣೀರಿಟ್ಟಿದ್ದಾರೆ.