ಬೆಂಗಳೂರು: ಜ್ವರ ಕಾನಿಸಿಕೊಂಡ ಹಿನ್ನಲೆಯಲ್ಲಿ ಈಚೆಗೆ ಮಣಿಪಾಲ ಆಸ್ಪತ್ರೆಗೆ ಧಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ.

ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಕಳೆದ ಮಂಗಳವಾರ ಅವರಿಗೆ ಜ್ವರ ಕಾಣಿಸಿಕೊಂಡಿತ್ತು.

ಜ್ವರ ಕಾಣಿಸಿಕೊಂಡಿದ್ದರಿAದ ಈಚೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಪರೀಕ್ಷೆಯಲ್ಲಿ ಫಲಿತಾಂಶ ನೆಗೆಟಿವ್ ಬಂದಿತ್ತು. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಇನ್ನೂ ಎರಡು ದಿನ ಆಸ್ಪತ್ರೆಯಲ್ಲೇ ಉಳಿಯಲು ವೈದ್ಯರು ಸಲಹೆ ನೀಡಿದರು. ಆದ್ದರಿಂದ ಶನಿವಾರ ಡಿಸ್ಚಾರ್ಚ್ ಆಗಬೇಕಿದ್ದ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಆದರೂ ಸದ್ಯಕ್ಕೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಮತ್ತಷ್ಟು ದಿನ ಮನೆಯಲ್ಲೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.

ಮಹಿಳೆಯರ ಬಟ್ಟೆ ಕದಿಯುತ್ತಿದ್ದ ಕಳ್ಳನಿಗೆ ಥಳಿತ..!

ಹುಬ್ಬಳ್ಳಿ: ಚಿನ್ನಾಭರಣ ಕದ್ದಿರೋ ಕಳ್ಳರನ್ನು ನೋಡಿದ್ದೇವೆ. ಮನೆ ದರೋಡೆ ಮಾಡಿರೋದನ್ನು ನೋಡಿದ್ದೇವೆ. ಆದ್ರೆ ಮಹಿಳೆಯರ ಬಟ್ಟೆ…

ಕೋವಿಡ್ 19 ನಿಯಮ ಉಲ್ಲಂಘನೆ: ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ಧ ದೂರು ದಾಖಲು

ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ…

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು?

ಉತ್ತರಪ್ರಭ ಸುದ್ದಿನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ…