ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಸಿದ್ದರಾಮಯ್ಯ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಸಿದ್ದರಾಮಯ್ಯ

ಬೆಂಗಳೂರು: ಜ್ವರ ಕಾನಿಸಿಕೊಂಡ ಹಿನ್ನಲೆಯಲ್ಲಿ ಈಚೆಗೆ ಮಣಿಪಾಲ ಆಸ್ಪತ್ರೆಗೆ ಧಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ.

ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಕಳೆದ ಮಂಗಳವಾರ ಅವರಿಗೆ ಜ್ವರ ಕಾಣಿಸಿಕೊಂಡಿತ್ತು.

ಜ್ವರ ಕಾಣಿಸಿಕೊಂಡಿದ್ದರಿAದ ಈಚೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಪರೀಕ್ಷೆಯಲ್ಲಿ ಫಲಿತಾಂಶ ನೆಗೆಟಿವ್ ಬಂದಿತ್ತು. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಇನ್ನೂ ಎರಡು ದಿನ ಆಸ್ಪತ್ರೆಯಲ್ಲೇ ಉಳಿಯಲು ವೈದ್ಯರು ಸಲಹೆ ನೀಡಿದರು. ಆದ್ದರಿಂದ ಶನಿವಾರ ಡಿಸ್ಚಾರ್ಚ್ ಆಗಬೇಕಿದ್ದ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಆದರೂ ಸದ್ಯಕ್ಕೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಮತ್ತಷ್ಟು ದಿನ ಮನೆಯಲ್ಲೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Exit mobile version