ಬೆಂಗಳೂರು: ಜ್ವರ ಕಾನಿಸಿಕೊಂಡ ಹಿನ್ನಲೆಯಲ್ಲಿ ಈಚೆಗೆ ಮಣಿಪಾಲ ಆಸ್ಪತ್ರೆಗೆ ಧಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ.

ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಕಳೆದ ಮಂಗಳವಾರ ಅವರಿಗೆ ಜ್ವರ ಕಾಣಿಸಿಕೊಂಡಿತ್ತು.

ಜ್ವರ ಕಾಣಿಸಿಕೊಂಡಿದ್ದರಿAದ ಈಚೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಪರೀಕ್ಷೆಯಲ್ಲಿ ಫಲಿತಾಂಶ ನೆಗೆಟಿವ್ ಬಂದಿತ್ತು. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಇನ್ನೂ ಎರಡು ದಿನ ಆಸ್ಪತ್ರೆಯಲ್ಲೇ ಉಳಿಯಲು ವೈದ್ಯರು ಸಲಹೆ ನೀಡಿದರು. ಆದ್ದರಿಂದ ಶನಿವಾರ ಡಿಸ್ಚಾರ್ಚ್ ಆಗಬೇಕಿದ್ದ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಆದರೂ ಸದ್ಯಕ್ಕೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಮತ್ತಷ್ಟು ದಿನ ಮನೆಯಲ್ಲೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 88…

ಸರ್ಕಾರದ ಸಪ್ತಪದಿ ಯೋಜನೆಯಡಿ ಮದುವೆ ಆಗ್ಬೇಕಾ..? ಇಲ್ಲಿದೆ ಪೂರ್ಣ ಮಾಹಿತಿ

2019-20 ನೇ ಸಾಲಿನಿಂದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಲು ಸೂತ್ತೋಲೆಗಳನ್ನು ಹೊರಡಿಸಲಾಗಿದೆ.

ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಗಜೇಂದ್ರಗಡ ತಾಲೂಕು ಅಮರಗಟ್ಟಿ ತಾಂಡಾದಲ್ಲಿ ಆಚರಿಸಲಾಯಿತು

ಗದಗ: ಸೇವಾಲಾಲ್ ಮಹಾರಾಜರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಹಾಗೂ ತೇರನ್ನು ಎಳೆಯುವ ಮುಖಾಂತರ ವಿಶೇಷ ಸೇವಾಲಾಲ…