ಬೆಂಗಳೂರು: ರಾಜ್ಯದ ಕೆಲ ಭಾಗಗಳಲ್ಲಿ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾಗುತ್ತಿದ್ದು, ಜೂ.10 ರಂದು ಸಿಎಂ ಯಡಿಯೂರಪ್ಪ ಲಾಕ್‌ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ.

ಕೋವಿಡ್-19 ತಡೆ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ನೀತಿಯ ಪ್ರಕಾರವಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ ಡೌನ್ ಮುಂದುವರೆಸಿದರೆ, ಉಳಿದ 19 ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ನ್ನು ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಸೋಂಕು ಪ್ರಮಾಣ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಅಂದರೆ ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಗೆ ಸಂಬಂಧಿಸಿದ ನಿಯಮಗಳು ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಉಳಿದ ಜಿಲ್ಲೆಗಳಲ್ಲಿ ಪರಿಷ್ಕೃತ ನಿಯಮಗಳು ಜೂ.14 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಜೂ.21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಸಡಲಿಕೆಯಾದ ಜಿಲ್ಲೆಗಳಲ್ಲಿ ಎಲ್ಲಾ ಕಾರ್ಖಾನೆಗಳನ್ನು ಶೇ.50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಕೈಗಾರಿಕೆಗಳಿಗೆ ಮಾತ್ರ ಶೇ.30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ. ಎಲ್ಲಾ ಅಗತ್ಯ ಪದಾರ್ಥ ಖರೀದಿಸುವುದಕ್ಕೆ ಅನುವು ಮಾಡಿಕೊಡಲು ಅಂಗಡಿಗಳನ್ನು ಈಗಿರುವ ಸಮಯ ಬೆಳಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿರ್ಮಾಣ ಚಟುವಟಿಕೆ ಸಂಬAಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಕೋವಿಡ್ ಕರ್ಫ್ಯೂ ರಾತ್ರಿ 7 ರಿಂದ ಬೆಳಗ್ಗ 5ರ ವರೆಗೆ ಜಾರಿಯಲ್ಲಿರುತ್ತದೆ. ರಾಜ್ಯಾದ್ಯಂತ ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಂಭ್ರಮದ ಯಲಗೂರ ರಥೋತ್ಸವ

ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಎಲ್ಲಡೆ ಜಯಘೋಷದ ಕರತಾಡನ.ಅಪಾರ ಭಕ್ತಾದಿಗಳ ಮೊಗದಲ್ಲಿ ಸಂಭ್ರಮೋಲ್ಲಾಸ.ಕಣಕಣದಲ್ಲೂ ಅಮಿತ್ಯೋತ್ಸಾಹ.…

ಬೆಳಿಗ್ಗೆ ಅಪ್ಪನ ಸಾವಿನ ದುರಂತ: ಗದಗನಲ್ಲಿ ಎಸ್.ಎಸ್.ಎಲ್.ಸಿ ಅಗ್ನಿ ಪರಿಕ್ಷೆ ಎದುರಿಸಿದ ಅನುಷಾ!

ಗದಗ: ಮುಂಜಾನೆ ಮರಳಿ ಬಾರದ ಲೋಕಕ್ಕೆ ಅಪ್ಪ ಹೋಗಿದ್ದಾನೆ. ಮನೆ ತುಂಬ ದು:ಖದ ವಾತಾವರಣ. ನೆರೆಹೊರೆಯವರು, ಸಂಬಂಧಿಕರು ಜಮಾಯಿಸುತ್ತಿದ್ದಾರೆ. ಈ ದುಗೂಡದಲ್ಲಿಯೂ ಗದಗಿನ ಈಶ್ವರ ನಗರದ ನಿವಾಸಿ, ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿನಿ 16ರ ಬಾಲಕಿ ಪಾಲಿಗೆ ಇವತ್ತಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇವಲ ಪರೀಕ್ಷೆ ಆಗಿರಲಿಲ್ಲ. ಇದು ಅಗ್ನಿ ಪರೀಕ್ಷೆ, ಧರ್ಮ ಪರೀಕ್ಷೆ.

ಗದಗನಲ್ಲಿ ಏಳು ಲಕ್ಷದೊಂದಿಗೆ ಕೆಲಸಗಾರ ನಾಪತ್ತೆ ; ಮಾಲಿಕನಿಂದ ದೂರು

ಗದಗ: ಬ್ಯಾಂಕಿಗೆ ಹಣ ಕಟ್ಟಿಬಾ ಅಂತಾ ಕಳಿಸಿದ ಮಾಲಿಕನ ಲಕ್ಷಾಂತರ ರೂಪಾಯಿಯೊಂದಿಗೆ ಕೆಲಸಗಾರ ನಾಪತ್ತೆಯಾಗಿದ್ದಾನೆ ಎನ್ನುವ…

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.