ಗದಗ: ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ ಹೇಳಿದರು.

ಮಾಜಿ ಕೃಷಿ ಸಚಿವ, ಹಾಲಿ ಬೀದರ ದಕ್ಷಿಣ ಕ್ಷೇತ್ರದ ಜನಪ್ರೀಯ ಶಾಸಕ, ರಾಜ್ಯ ಕುರುಬ ಸಮಾಜದ ಮುಖಂಡ, ಜೆಡಿಎಸ್. ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶಂಪೂರ ಅವರ 57ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಜೆಡಿಎಸ್ ವತಿಯಿಂದ ಬೆಟಗೇರಿ ನಗರದ ಕಚೇರಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ಎಂ.ಆರ್ ಸೋಂಪೂರ, ತಾಲೂಕ ಅಧ್ಯಕ್ಷ ರಾಮಣ್ಣ ಹೂವಣ್ಣವರ, ಸಿ.ಎಸ್ ಪಾಟೀಲ, ಎಂ.ಎಸ್ ಪರ್ವತಗೌಡ್ರ, ಆರ್.ಎನ್ ಪಾಟೀಲ, ರೇಣುಕಾ ಕೆಂದೂರ, ರಮೇಶ ಕಲಬುರ್ಗಿ, ಅಬ್ದುಲ್ ನರಸಾಪೂರ, ರಫೀಕ ನರಗುಂದ, ಅಂದಾನಯ್ಯ ಮುವಳ್ಳಿಮಠ, ಅರುಣ ಹಿಡ್ಕಿಮಠ, ಶಿರಾಜ ಕಲೇಬಾಯಿ, ರೇಣುಕಾ ಚಕ್ರಸಾಲಿ, ಸಂತೋಷ ಪಾಟೀಲ ಹಾಗೂ ಪಕ್ಷದ ಅನೇಕ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ನಲ್ಲೂ ನಿಮಗೆ ಬರ್ತಡೇ ಆಚರಣೆ ಬೇಕಿತ್ತಾ ಸಿಪಿಐ ಸಾಹೇಬರೇ??

ದೇಶದಲ್ಲಿ ಲಾಕ್ ಡೌನ್ ಇದ್ದಾಗಲೂ ನಮ್ಮ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ್ ಸಗರಿ ಲಾಕ್ ಡೌನ್ ಮದ್ಯದಲ್ಲೂ ಜನರ ಗುಂಪಿನ ಮದ್ಯೆ ನಿಂತು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ? ಎಂದು ಜಿಲ್ಲೆಯಲ್ಲೀಗ ಜನ ಮಾತಾಡಿಕೊಳ್ಳುತ್ತಿದ್ದಾರೆ.

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್! ಗದಗ: ಜಿಲ್ಲೆಯಲ್ಲಿಂದು 14…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

ಕರವೇ ಗ್ರಾಮ ಘಟಕದ ಪದಾಧಿಕಾರಿಗಳ ಆಯ್ಕೆ

ತಾಲೂಕಿನ ಸಾಸರವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ಪದಾಧಿಕಾರಿಗಳನ್ನು ತಾಲೂಕಾಧ್ಯಕ್ಷ ಬಸವರಾಜ ವಡವಿ ಅವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.