ಗದಗ: ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ ಹೇಳಿದರು.

ಮಾಜಿ ಕೃಷಿ ಸಚಿವ, ಹಾಲಿ ಬೀದರ ದಕ್ಷಿಣ ಕ್ಷೇತ್ರದ ಜನಪ್ರೀಯ ಶಾಸಕ, ರಾಜ್ಯ ಕುರುಬ ಸಮಾಜದ ಮುಖಂಡ, ಜೆಡಿಎಸ್. ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶಂಪೂರ ಅವರ 57ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಜೆಡಿಎಸ್ ವತಿಯಿಂದ ಬೆಟಗೇರಿ ನಗರದ ಕಚೇರಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ಎಂ.ಆರ್ ಸೋಂಪೂರ, ತಾಲೂಕ ಅಧ್ಯಕ್ಷ ರಾಮಣ್ಣ ಹೂವಣ್ಣವರ, ಸಿ.ಎಸ್ ಪಾಟೀಲ, ಎಂ.ಎಸ್ ಪರ್ವತಗೌಡ್ರ, ಆರ್.ಎನ್ ಪಾಟೀಲ, ರೇಣುಕಾ ಕೆಂದೂರ, ರಮೇಶ ಕಲಬುರ್ಗಿ, ಅಬ್ದುಲ್ ನರಸಾಪೂರ, ರಫೀಕ ನರಗುಂದ, ಅಂದಾನಯ್ಯ ಮುವಳ್ಳಿಮಠ, ಅರುಣ ಹಿಡ್ಕಿಮಠ, ಶಿರಾಜ ಕಲೇಬಾಯಿ, ರೇಣುಕಾ ಚಕ್ರಸಾಲಿ, ಸಂತೋಷ ಪಾಟೀಲ ಹಾಗೂ ಪಕ್ಷದ ಅನೇಕ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *

You May Also Like

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು? ಬೆಂಗಳೂರು : ತಬ್ಲಿಘಿ ಪರ…

ಕಾಂಗ್ರೆಸ್ ಹಿರಿಯ ನಾಯಕ ಸಿದ್ನಾಳ ವಿಧಿವಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ್ (85) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಲಕ್ಷ್ಮೇಶ್ವರದಲ್ಲಿ ಜನೌಷಧಿ ಕೇಂದ್ರ ಉದ್ಘಾಟಿಸಿದ ಸುನೀಲ್ ಮಹಾಂತಶೆಟ್ಟರ್

ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಮೂಲಕ ಜನರಿಗೆ ಶೇ.10 ರಿಂದ ಶೇ.90ರವರೆಗೆ ರಿಯಾಯತಿ ದರದಲ್ಲಿ ಔಷಧಿ ವಿತರಿಸಲಾಗುತ್ತಿದೆ ಎಂದು ಕೆಸಿಸಿ ಬ್ಯಾಂಕ ನಿರ್ದೇಶಕ ಸುನೀಲ ಮಹಾಂತಶೆಟ್ಟರ ಹೇಳಿದರು.

ರಾಜ್ಯದಲ್ಲಿಂದು 445 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 445 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11,005 ಕ್ಕೆ ಏರಿಕೆಯಾದಂತಾಗಿದೆ.