ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ

ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ

ಗದಗ: ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ ಹೇಳಿದರು.

ಮಾಜಿ ಕೃಷಿ ಸಚಿವ, ಹಾಲಿ ಬೀದರ ದಕ್ಷಿಣ ಕ್ಷೇತ್ರದ ಜನಪ್ರೀಯ ಶಾಸಕ, ರಾಜ್ಯ ಕುರುಬ ಸಮಾಜದ ಮುಖಂಡ, ಜೆಡಿಎಸ್. ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶಂಪೂರ ಅವರ 57ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಜೆಡಿಎಸ್ ವತಿಯಿಂದ ಬೆಟಗೇರಿ ನಗರದ ಕಚೇರಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ಎಂ.ಆರ್ ಸೋಂಪೂರ, ತಾಲೂಕ ಅಧ್ಯಕ್ಷ ರಾಮಣ್ಣ ಹೂವಣ್ಣವರ, ಸಿ.ಎಸ್ ಪಾಟೀಲ, ಎಂ.ಎಸ್ ಪರ್ವತಗೌಡ್ರ, ಆರ್.ಎನ್ ಪಾಟೀಲ, ರೇಣುಕಾ ಕೆಂದೂರ, ರಮೇಶ ಕಲಬುರ್ಗಿ, ಅಬ್ದುಲ್ ನರಸಾಪೂರ, ರಫೀಕ ನರಗುಂದ, ಅಂದಾನಯ್ಯ ಮುವಳ್ಳಿಮಠ, ಅರುಣ ಹಿಡ್ಕಿಮಠ, ಶಿರಾಜ ಕಲೇಬಾಯಿ, ರೇಣುಕಾ ಚಕ್ರಸಾಲಿ, ಸಂತೋಷ ಪಾಟೀಲ ಹಾಗೂ ಪಕ್ಷದ ಅನೇಕ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.

Exit mobile version