ಗದಗ: ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ ಹೇಳಿದರು.

ಮಾಜಿ ಕೃಷಿ ಸಚಿವ, ಹಾಲಿ ಬೀದರ ದಕ್ಷಿಣ ಕ್ಷೇತ್ರದ ಜನಪ್ರೀಯ ಶಾಸಕ, ರಾಜ್ಯ ಕುರುಬ ಸಮಾಜದ ಮುಖಂಡ, ಜೆಡಿಎಸ್. ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶಂಪೂರ ಅವರ 57ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಜೆಡಿಎಸ್ ವತಿಯಿಂದ ಬೆಟಗೇರಿ ನಗರದ ಕಚೇರಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ಎಂ.ಆರ್ ಸೋಂಪೂರ, ತಾಲೂಕ ಅಧ್ಯಕ್ಷ ರಾಮಣ್ಣ ಹೂವಣ್ಣವರ, ಸಿ.ಎಸ್ ಪಾಟೀಲ, ಎಂ.ಎಸ್ ಪರ್ವತಗೌಡ್ರ, ಆರ್.ಎನ್ ಪಾಟೀಲ, ರೇಣುಕಾ ಕೆಂದೂರ, ರಮೇಶ ಕಲಬುರ್ಗಿ, ಅಬ್ದುಲ್ ನರಸಾಪೂರ, ರಫೀಕ ನರಗುಂದ, ಅಂದಾನಯ್ಯ ಮುವಳ್ಳಿಮಠ, ಅರುಣ ಹಿಡ್ಕಿಮಠ, ಶಿರಾಜ ಕಲೇಬಾಯಿ, ರೇಣುಕಾ ಚಕ್ರಸಾಲಿ, ಸಂತೋಷ ಪಾಟೀಲ ಹಾಗೂ ಪಕ್ಷದ ಅನೇಕ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *

You May Also Like

ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನಿಯಮಕ್ಕೆ ಆಕ್ಷೇಪಣೆ

ಶಿಕ್ಷಕರ ವರ್ಗಾವಣಾ ಕಾಯ್ದೆಯನ್ನು ಸಂಪೂರ್ಣ ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯಾಗಿ ರೂಪಗೊಳ್ಳಬೇಕಾದರೆ ಕೆಲವು ಅಂಶಗಳನ್ನು ಅಳವಡಿಸಿಕೊಂಡು ಅಂತಿಮ ನಿಯಮಗಳನ್ನು ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಈ ಕುರಿತು ಇಂದು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಅರಣ್ಯಾಧಿಕಾರಿ ವರ್ಗಾವಣೆಯಲ್ಲಿ ರಾಜಕೀಯ?

ಜಿಲ್ಲೆಯಲ್ಲೀಗ ಮತ್ತೆ ಮರಗಳ್ಳ ಮಾಫಿಯಾಕ್ಕೆ ರೆಕ್ಕೆ ಪುಕ್ಕ ಬರಲಿದೆಯಾ? ಎಂಬ ಅನುಮಾನ ಉಡುಪಿ ಜಿಲ್ಲೆಯ ಜನರಲ್ಲಿ ಶುರುವಾಗಿದೆ. ಇದರ ಹಿಂರುವುದು ರಾಜಕೀಯ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.

ಲಾಕ್ ಡೌನ್ ಅವಧಿ ವಿಸ್ತರಣೆ: ಜೂ.7ರವರೆಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ

ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರಿಸಲಾಗುವುದು. ಕೆಲ ಸಡಿಲಿಕೆಯೊಂದಿಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.