ಗದಗ: ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ ಹೇಳಿದರು.

ಮಾಜಿ ಕೃಷಿ ಸಚಿವ, ಹಾಲಿ ಬೀದರ ದಕ್ಷಿಣ ಕ್ಷೇತ್ರದ ಜನಪ್ರೀಯ ಶಾಸಕ, ರಾಜ್ಯ ಕುರುಬ ಸಮಾಜದ ಮುಖಂಡ, ಜೆಡಿಎಸ್. ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶಂಪೂರ ಅವರ 57ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಜೆಡಿಎಸ್ ವತಿಯಿಂದ ಬೆಟಗೇರಿ ನಗರದ ಕಚೇರಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ಎಂ.ಆರ್ ಸೋಂಪೂರ, ತಾಲೂಕ ಅಧ್ಯಕ್ಷ ರಾಮಣ್ಣ ಹೂವಣ್ಣವರ, ಸಿ.ಎಸ್ ಪಾಟೀಲ, ಎಂ.ಎಸ್ ಪರ್ವತಗೌಡ್ರ, ಆರ್.ಎನ್ ಪಾಟೀಲ, ರೇಣುಕಾ ಕೆಂದೂರ, ರಮೇಶ ಕಲಬುರ್ಗಿ, ಅಬ್ದುಲ್ ನರಸಾಪೂರ, ರಫೀಕ ನರಗುಂದ, ಅಂದಾನಯ್ಯ ಮುವಳ್ಳಿಮಠ, ಅರುಣ ಹಿಡ್ಕಿಮಠ, ಶಿರಾಜ ಕಲೇಬಾಯಿ, ರೇಣುಕಾ ಚಕ್ರಸಾಲಿ, ಸಂತೋಷ ಪಾಟೀಲ ಹಾಗೂ ಪಕ್ಷದ ಅನೇಕ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 11ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 11  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 11ನೇ ವಾರ್ಡನಲ್ಲಿ…

ಸಿಎಂ ಸಭೆಯ ಸಂಪೂರ್ಣ ಮಾಹಿತಿ: ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ಸೂಚನೆ

ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಇನ್ನು ಈ ಸಭೆಯಲ್ಲಿ ನಡೆದ ಮಹತ್ವದ ಚರ್ಚಿತ ವಿಷಯಗಳ ಮುಖ್ಯಾಂಶೆಗಳು ಇಲ್ಲಿವೆ ನೋಡಿ.

ರೋಣ ಪಟ್ಟಣದಲ್ಲಿ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಆಹಾರ ವ್ಯವಸ್ಥೆ ಮಾಡಿದ ಹೂವು ಹಣ್ಣು ವ್ಯಾಪಾರಸ್ಥರು

ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಹೂವು ಹಣ್ಣು ವ್ಯಾಪಾರಸ್ಥರು ಇಂದು ಬೆಳಿಗ್ಗೆ ಶನಿವಾರ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಬೆಳಗ್ಗಿನ ಉಪಾಹಾರ ವಿತರಣೆ ಮಾಡಲಾಯಿತು.

ಮೌಲಾನಾ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಉತ್ತರಪ್ರಭಗದಗ: ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರತಿಷ್ಠಿತ ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಶಾಲೆಯ ಮೊಟ್ಟ…