ಬೆಂಗಳೂರು: ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಜನರು ಗುಂಪು ಗುಂಪು ಸೇರದಂತೆ ಮಾಲ್, ಹೋಟೆಲ್, ಇನ್ನಿತರ ಆರ್ಥಿಕ ಚಟುವಟಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆ ನೀಡಿದೆ.

ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್ಗಳನ್ನು ಜೂ.21 ರಿಂದ ಪುನರಾರಂಭಿಸಬಹುದು ಎಂದು ಸಲಹಾ ಸಮಿತಿ ಹೇಳಿದೆ.

ಲಾಕ್‌ಡೌನ್ ತೆರವು 3.0ಗೆ ಮೊದಲೂ ಆಕ್ಸಿಜನ್ ಹಾಸಿಗೆಗಳು ಶೇ.60ಕ್ಕಿಂತಲೂ ಕಡಿಮೆ ಇರುವ ಜಿಲ್ಲೆಗಳನ್ನು ಪರಿಶೀಲನೆ ನಡೆಸಬೇಕು. ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಅನ್‌ಲಾಕ್ 2ನೇ ಹಂತದಲ್ಲಿ ಶೇ.50ರಷ್ಟು ಜನರೊಂದಿಗೆ ರೆಸ್ಟೋರೆಂಟ್, ಮಾಲ್, ಸಲೂನ್, ಸ್ಪಾ, ಮದುವೆ ಮಂಟಪಗಳನ್ನು ತೆರೆಯಬಹುದು ಎಂದು ಸೂಚಿಸಿದೆ.

ಈ ಪ್ರದೇಶಗಳಲ್ಲಿ ಹೆಚ್ಚೆಚ್ಚು ಜನರು ಸೇರುವುದರಿಂದ ಸೋಂಕು ಹೆಚ್ಚಾಗಿ ಹರಡಲಿದ್ದು, ಅಲ್ಲದೆ, ಲಾಕ್‌ಡೌನ್ ತೆರವು 2.0 ಮತ್ತು 3.0 ರ ನಡುವೆ ಎರಡು ವಾರಗಳ ಅಂತರ ಇರುವಂತೆಯೂ ಸೂಚಿಸಿದೆ.

ರಾಜ್ಯದಲ್ಲಿ 1.5 ಲಕ್ಷಕ್ಕಿಂತ ಕೆಳಗಿಳಿದ ಸಕ್ರಿಯ ಪ್ರಕರಣ, ಮೈಸೂರಿನಲ್ಲಿ ಮುಂದುವರಿದ ಸಾವಿನ ಸರಣಿ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸದೇ ಹೋದಲ್ಲಿ ಮತ್ತೆ ಹಿಂದಿನ ಪರಿಸ್ಥಿತಿ ಮರುಕಳಿಸಲಿದೆ. ಆಗ ಮಾಲ್, ಶಾಪಿಂಗ್ ಮಾಲ್ ಹಾಗೂ ಮಾರುಕಟ್ಟೆಗಳನ್ನು ತೆರೆಯುವ ಕುರಿತು ಮರುಚಿಂತನೆ ನಡೆಸಬೇಕು. ಬೆಂಗಳೂರಿನಲ್ಲಿ ಸೋಂಕು ಪ್ರಕರಣ ಇಳಿಕೆಯಾಗುತ್ತಿರುವುದು ಕಂಡು ಬರುತ್ತಿದ್ದರೆ ಮಾತ್ರ ಇವುಗಳಿಗೆ ಅವಕಾಶ ನೀಡಬೇಕು ಎಂದು ತಾಂತ್ರಿಕ ಸಮಿತಿಯ ಸದಸ್ಯ ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಪ್ರಮುಖ ಸಲಹೆಗಳು

ಜೂನ್ ಅಂತ್ಯದವರೆಗೂ ರಾತ್ರಿ ಕರ್ಫ್ಯೂ ಮುಂದುವರಿಸಿ

ಸಾರ್ವಜನಿಕ ಸಭೆ, ಧರಣಿ, ಜಾತ್ರೆ ಹಾಗೂ ಹಬ್ಬಗಳ ಮೇಲೆ ನಿರ್ಬಂಧ ಹೇರಿ

ಜೂ.21 ರಿಂದ 2ನೇ ಹಂತದ ಲಾಕ್‌ಡೌನ್ ತೆರವು ಆರಂಭವಾಗಲಿ

ಜು.5 ರಿಂದ ಮೂರನೇ ಹಂತದ ಲಾಕ್‌ಡೌನ್ ತೆರವು ಆರಂಭವಾಗಲಿ

ಪರಿಸ್ಥಿತಿ ಅನುಸರಿಸಿ ಜನರ ಓಡಾಟಕ್ಕೆ ಅವಕಾಶ ನೀಡಿ

3ನೇ ಹಂತದ ಲಾಕ್‌ಡೌನ್ ತೆರವಿನಲ್ಲಿ ಜಿಮ್ (ವ್ಯಾಯಾಮ ಶಾಲೆ), ಯೋಗ, ಧಾರ್ಮಿಕ ಕೇಂದ್ರಗಳು, ಚಿತ್ರಮಂದಿರ, ಕ್ರೀಡಾ ಕ್ಲಬ್, ಕ್ಲಬ್ ಹೌಸ್, ಸಾರ್ವಜನಿಕ ಶೌಚಾಲಯ ಆರಂಭಿಸಿ

Leave a Reply

Your email address will not be published. Required fields are marked *

You May Also Like

ಅಡಕೆ ನುಂಗಿದ ಮಗು ಉಸಿರುಗಟ್ಟಿ ಸಾವು

ತಾಲೂಕು ಹೆದ್ದೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. 1 ವರ್ಷ ಒಂದು ತಿಂಗಳ ಮಗು ನಿಶಾನ್ ಮೃತಪಟ್ಟಿದೆ. ಸಂದೇಶ ಮತ್ತು ಅರ್ಚನಾ ದಂಪತಿಗಳ ಮಗು ನಿಶಾನ್ ಆರೋಗ್ಯವಾಗಿತ್ತು. ಆಟವಾಡುವಾಗ ಅಡಕೆ ನುಂಗಿದ್ದರಿಂದ, ಉಸಿರುರಾಡಲು ಕಷ್ಟವಾಗಿದೆ. ತಕ್ಷಣವೇ ಮಗುವನ್ನು ಕಟ್ಟೆಹಕ್ಕಲುವಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅಲ್ಲಿಂದ ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಗಿದೆ. ಆದರೆ, ಉಸಿರಾಡಲು ಕಷ್ಟವಾಗಿ ಮಗು ಮೃತಪಟ್ಟಿದೆ.

ಮುಂಬಯಿನಲ್ಲಿ ಮನೆ ಮಾಡುತ್ತಿರುವ ಆತಂಕ!

ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಕೃಷ್ಣಾ ನದಿತೀರದ ಪ್ರವಾಹಪೀಡಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ ಆಲಟ್೯ರಾಗಿರಲು ಸೂಚನೆ

ಉತ್ತರಪ್ರಭಆಲಮಟ್ಟ: ಕೃಷ್ಣಾ ನದಿ ತೀರದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಧಾರಾಕಾರ ಮಳೆ ಸುರಿಯುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ…

ಜಾನಪದ ಕಲಾವಿದ ಪಾಗದ ನಿಧನ

ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.