ಇರಾಕ್: ಕೋವಿಡ್ ಆಸ್ಪತ್ರೆ ಒಂದರಲ್ಲಿ ಅಗ್ನಿ ದುರಂತ ಸಂಭವಿಸಿದ ಘಟನೆ ಇರಾಕ್​ನ ನಾಸಿರಿಯಾ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 50 ಕ್ಕೂ ಹೆಚ್ಚು ಜನ ಸಾವೀಗಿಡಾಗಿದ್ದಾರೆ ಎನ್ನಲಾಗಿದೆ.


ಆಕ್ಸಿಜನ್​ ಟ್ಯಾಂಕ್ ಸ್ಪೋಟಗೊಂಡಿದ್ದು ಅವಘಡಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಆಸ್ಪತ್ರೆಯ ಒಳಗಿದ್ದ ಆಕ್ಸಿಜನ್​ ಟ್ಯಾಂಕ್​ನಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಅದು ಸಿಡಿದು ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ಅಂದಾಜಿಸಿವೆ. ಆದರೆ ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯಲ್ಲಿ ನಿಖರವಾದ ಮಾಹಿತಿ ಲಭ್ಯವಾಗಲಿದೆ.


ತಡರಾತ್ರಿ ವೇಳೆ ಈ ದುರಂತ ನಡೆದಿದೆ. ಆಸ್ಪತ್ರೆಯ ಐಸೋಲೇಶನ್ ವಾರ್ಡ್ ಹತ್ತಿರ ಬೆಂಕಿ ಕಾಣಿಸಿಕೊಂಡು ವ್ಯಾಪಿಸಿದೆ. ಈ ವೇಳೆ ಏಕಾಏಕಿ ಹೊತ್ತಿ ಉರಿಯಲಾರಂಭಿಸಿತು. ಆಸ್ಪತ್ರೆಯಲ್ಲಿದ್ದವರು ಪ್ರಾಣಾಪಾಯದಿಂದ ಹೊರಬರಲು ಪ್ರಯತ್ನಿಸಿದರು. ತಪ್ಪಿಸಿಕೊಳ್ಳಲಾಗದವರು ಅಗ್ನಿಗೆ ಆಹುತಿಯಾಗಿದ್ದಾರೆ. ಘಟನೆಯಲ್ಲಿ ಆರಂಭದಲ್ಲಿ 30 ಕ್ಕೂ ಹೆಚ್ಚು ಜನ ಸಾವೀಗಿಡಾಗಿರುವ ಕುರಿತು ಅಂದಾಜಿಸಲಾಗಿತ್ತು. ಆದರೆ ಇದೀಗ ಸಾವಿನ ಸಂಖ್ಯೆ 50 ಕ್ಕಿಂತ ಹೆಚ್ಚಾಗಿದೆ ಎನ್ನಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದು ಮೃತರ ಸಂಖ್ಯೆ ಇನ್ನು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜೂನ್ 14ರ ವರೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಜಾರಿ

ಗದಗ: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿoದ ಜೂನ್ 14ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡoತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುoದರೇಶ್ ಬಾಬು ತಿಳಿಸಿದ್ದಾರೆ.

ಚೀನಾ ಟೆನ್ಷನ್: ಸೇನಾಧಿಕಾರಿ, ಇಬ್ಬರು ಸೈನಿಕರು ಬಲಿ!

ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ…

ಹಠಯೋಗಿ ಶ್ರೀ ಕೋಡಿಕೊಪ್ಪದ ಹುಚ್ಚೀರಪ್ಪಜ್ಜನವರು

ಕನ್ನಡ ನಾಡಿನ ಪುಣ್ಯವೋ ಏನೋ ಅನೇಕ ಜನ ತಪಸ್ವಿಗಳು, ಯೋಗಿಗಳು, ಶರಣರು, ಸಿದ್ಧರು, ಹಠಯೋಗಿಗಳು ಮೊದಲಾದ ಮಹಾಮಹಿಮರು ಉದಯಿಸಿ

ಕೊರೊನಾ ವಾರಿಯರ್ಸ್ ಗೆ ಉಪಹಾರ ವ್ಯವಸ್ಥೆ

ರೋಣ: ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಇಲ್ಲಿನ ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಇಂತಹ ಸಂಕಷ್ಟದ ದಿನಗಳಲ್ಲಿಯೂ ಜನರ ರೋಗ್ಯ ಹಾಗೂ ಪ್ರಾಣ ಕಾಪಾಡಲು ಕೊರೊನಾ ವಾರಿಯರ್ಸ್ ಗಳು ಇನ್ನಿಲ್ಲದೇ ಶ್ರಮಿಸುತ್ತಿದ್ದಾರೆ. ಆಶಾ, ಅಂಗನವಾಡಿ, ನರ್ಸ್ ಹಾಗೂ ವೈದ್ಯರು, ಶಿಕ್ಷಕರು ಇತರ ಎಲ್ಲ ವಿಭಾಗದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.