ಇರಾಕ್: ಕೋವಿಡ್ ಆಸ್ಪತ್ರೆ ಒಂದರಲ್ಲಿ ಅಗ್ನಿ ದುರಂತ ಸಂಭವಿಸಿದ ಘಟನೆ ಇರಾಕ್​ನ ನಾಸಿರಿಯಾ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 50 ಕ್ಕೂ ಹೆಚ್ಚು ಜನ ಸಾವೀಗಿಡಾಗಿದ್ದಾರೆ ಎನ್ನಲಾಗಿದೆ.


ಆಕ್ಸಿಜನ್​ ಟ್ಯಾಂಕ್ ಸ್ಪೋಟಗೊಂಡಿದ್ದು ಅವಘಡಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಆಸ್ಪತ್ರೆಯ ಒಳಗಿದ್ದ ಆಕ್ಸಿಜನ್​ ಟ್ಯಾಂಕ್​ನಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಅದು ಸಿಡಿದು ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ಅಂದಾಜಿಸಿವೆ. ಆದರೆ ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯಲ್ಲಿ ನಿಖರವಾದ ಮಾಹಿತಿ ಲಭ್ಯವಾಗಲಿದೆ.


ತಡರಾತ್ರಿ ವೇಳೆ ಈ ದುರಂತ ನಡೆದಿದೆ. ಆಸ್ಪತ್ರೆಯ ಐಸೋಲೇಶನ್ ವಾರ್ಡ್ ಹತ್ತಿರ ಬೆಂಕಿ ಕಾಣಿಸಿಕೊಂಡು ವ್ಯಾಪಿಸಿದೆ. ಈ ವೇಳೆ ಏಕಾಏಕಿ ಹೊತ್ತಿ ಉರಿಯಲಾರಂಭಿಸಿತು. ಆಸ್ಪತ್ರೆಯಲ್ಲಿದ್ದವರು ಪ್ರಾಣಾಪಾಯದಿಂದ ಹೊರಬರಲು ಪ್ರಯತ್ನಿಸಿದರು. ತಪ್ಪಿಸಿಕೊಳ್ಳಲಾಗದವರು ಅಗ್ನಿಗೆ ಆಹುತಿಯಾಗಿದ್ದಾರೆ. ಘಟನೆಯಲ್ಲಿ ಆರಂಭದಲ್ಲಿ 30 ಕ್ಕೂ ಹೆಚ್ಚು ಜನ ಸಾವೀಗಿಡಾಗಿರುವ ಕುರಿತು ಅಂದಾಜಿಸಲಾಗಿತ್ತು. ಆದರೆ ಇದೀಗ ಸಾವಿನ ಸಂಖ್ಯೆ 50 ಕ್ಕಿಂತ ಹೆಚ್ಚಾಗಿದೆ ಎನ್ನಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದು ಮೃತರ ಸಂಖ್ಯೆ ಇನ್ನು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸೋಣ ಎಂದ ಉಭಯ ದೇಶಗಳು!

ನವದೆಹಲಿ: ಲಡಾಖ್ ಪ್ರದೇಶದ ಗಾಲ್ವಾನ್‌ ಕಣಿವೆಯಲ್ಲಿ ಪೂರ್ವ ನಿಯೋಜಿತರಾಗಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ…

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ!

ಉತ್ತರಪ್ರಭ ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು…

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ ಗದಗ: ಕೊರೊನಾ ನಿಯಂತ್ರಣ ಹಿನ್ನೆಲೆ ಐದು‌ ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ಕಠೀಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಶುಕ್ರವಾರ ವಿನಾಕಾರಣ ರಸ್ತೆಗಿಳಿದವರ ಬೈಕ್ ಸೀಜ್ ಮಾಡಲಾಯಿತು. ಸ್ವತ: ಡಿವೈಎಸ್ಪಿ ಫಿಲ್ಡಿಗಿಳಿದು ಬೈಕ್ ಸವಾರರಿಗೆ ತರಾಟೆಗೆ ತೆಗೆದುಕೊಂಡ ದೃಷ್ಯಗಳು ಕಂಡು ಬಂದವು. ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ, ನಕಲಿ‌ ಪತ್ರಕರ್ತ ಎಂದು ತಿಳಿದ ತಕ್ಷಣ ಬೈಕ್ ವಶಕ್ಕೆ ಪಡೆಯಲಾಯಿತು.

ಇಂಧನ ಬೆಲೆ ಮತ್ತು ಹಣದ ಮೌಲ್ಯ ಒಂದೇ ನಾಣ್ಯದ ಮುಖಗಳು

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಇಂಧನ ದರ ಏರಿಕೆ ಆರಂಭಗೊAಡಿದೆ. ಯಾವುದೇ ಚುನಾವಣೆ ನಂತರ ಇಂಧನ ಬೆಲೆ ಏರಿಸುವದು ಸಾಮಾನ್ಯ. ಈ ಸಂಪ್ರದಾಯ ಇಂದು-ನಿನ್ನೆಯದಲ್ಲ, ಹಲವು ದಶಕಗಳ ಸಂಪ್ರದಾಯ ಈಗಲೂ ಅಷ್ಟೇ ಅಚ್ಚು ಕಟ್ಟಾಗಿ ಎಲ್ಲಾ ಸರ್ಕಾರಗಳು ಪಾಲಿಸುತ್ತಿವೆ.