ನವದೆಹಲಿ: ನಮ್ಮೆಲ್ಲರ ನೆಚ್ಚಿನ ಭಾರತದ ಮಾಜಿ ಕ್ಯಾಪ್ಟನ್ ಹಾಗೂ ದಾದಾ ಎಂದಲೆ ಹೆಸರಾದಂತ ಈಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು ಬಾಲಿವುಡ್ ನಲ್ಲಿ ತಮ್ಮ ಜೀವನ ಚರಿತ್ರೆ ಮೇಲೊಂದು ಚಿತ್ರದ ಚಿತ್ರೀಕರಣಕ್ಕೆ ಒಪ್ಪಿಕೊಂಡಿದ್ದಾರೆ.

ಈ ಹಿಂದೆ ಬಾಲಿವುಡ್ನಲ್ಲಿ ಕ್ರಿಕೆಟಿಗರ ಜೀವನ ಚಿತ್ರಗಳು ಬಾಕ್ಸಾಫೀಸಿನಲ್ಲಿ ಹೆಸರು ಮಾಡಿದ್ದು, ಈಗ ಬಾಲಿವುಡ್ ನಲ್ಲಿ ಮಾಜಿ ಭಾರತದ ಕ್ಯಾಪ್ಟನ್ ಗಂಗೂಲಿಯವರ ಬಯೋಪಿಕ್ ಮಾಡಲು ಮುಂದಾಗಿದ್ದಾರೆ.

ಈ ಚಿತ್ರ ಮಾಡಲು ಸೌರವ್ ಗಂಗೂಲಿ ಅವರು ಒಪ್ಪಿಗೆ ನೀಡಿದ್ದು ನಾನು ಚಿತ್ರದ ನಿರ್ದೇಶಕರ ಹೆಸರು ಹೇಳಲಾರೆ ಹಾಗೂ ಈ ಚಿತ್ರವು ಹಿಂದಿ ಭಾಷೆಯಲ್ಲಿ ಮೂಡಿಬರಲಿದೆ, ಇನ್ನು ಕೆಲ ದಿನಗಳಲ್ಲಿ ಚಿತ್ರಕ್ಕೆ ಬೇಕಾದ ಕೆಲಸ ಶುರು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಈ ಚಿತ್ರವು ಬಹು ನಿರೀಕ್ಷಿತ ಹಾಗೂ ಬಹುದೊಡ್ಡ ಚಿತ್ರವಾಗಲಿದ್ದು ಚಿತ್ರಕ್ಕೆ ಕನಿಷ್ಠ 200 ರಿಂದ 250 ಕೋಟಿ ಬಂಡವಾಳದ್ದಾಗಿದೆ, ಕೊನೆಯದಾಗಿ ಅಭಿಮಾನಿಗಳ ಬಯಕೆಗೆ ನಾಯಕನಾಗಿ ಬಾಲಿವುಡ್ ನಟ ರಣಬೀರ್ ಕಪೂರ್ ಗಂಗೂಲಿಯವರ ಪಾತ್ರಕ್ಕೆ ಅಭಿನಯಿಸುವಂತೆ ಕೇಳಿಬರುತ್ತಿದೆ,

ಈಗ ಸದ್ಯಕ್ಕೆ ಚಿತ್ರಕಥೆಯನ್ನು ಬರೆಯಲು ಆರಂಭಿಸಿದ್ದೇವೆ ಎಂದು ಸೌರವ್ ಗಂಗೂಲಿಯವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬುಧವಾರ ಭಾರತಕ್ಕೆ ಬರಲಿವೆ ರಫೇಲ್ ಯುದ್ಧ ವಿಮಾನ: ಸದ್ಯ ಫ್ರಾನ್ಸ್ ಬಿಟ್ಟಿವೆ ಫೈಟರ್ ಜೆಟ್ಸ್

ಸೋಮವಾರ ಫ್ರಾನ್ಸ್ ನಿಂದ ಹೊರಟಿರುವ ಮೊದಲ ಬ್ಯಾಚಿನ ರಫೇಲ್ ಯುದ್ಧ ಫ್ರಾನ್ಸ್ ಬಿಟ್ಟಿರುವ 5 ರಫೇಲ್ ಯುದ್ಧ ವಿಮಾನಗಳು 7 ಸಾವಿರ ಕಿಮೀ ದೂರ ಕ್ರಮಿಸಿ ಬುಧವಾರ ಭಾರತವನ್ನು ತಲುಪಲಿವೆ. ಯುಎಇನಲ್ಲಿರುವ ಫ್ರಾನ್ಸ್ ಏರ್ ಬೇಸ್ ನಲ್ಲಿ ಇಳಿದು ನಂತರ ಭಾರತ ತಲುಪಲಿವೆ. ಎವಿಯೇಷನ್ ಕಂಪನಿ ಡಸಾಲ್ಟ್ ನಿರ್ಮಿಸಿರುವ ಈ ಅತ್ಯಾಧುನಿಕ ಫೈಟರ್ ಜೆಟ್ಸ್ ದಕ್ಷಿಣ ಫ್ರಾನ್ಸಿನ ಬ್ರೊಡಾಕ್ಸ್ ನಗರದಿಂದ ಪ್ರಯಾಣ ಬೆಳೆಸಿವೆ. 2016ರಲ್ಲಿ ಭಾರತವು ಫ್ರಾನ್ಸ್ ಕಂಪನಿ ಡಸಾಲ್ಟ್ ಕಂಪನಿಯಿಂದ ಇಂತಹ 36 ವಿಮಾನಗಳನ್ನು ಖರೀದಿಸಲು 59 ಸಾವಿರ ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಅದರ ಮೊದಲ ಭಾಗವಾಗಿ ಈಗ 5 ವಿಮಾನಗಳು ದೇಶದ ಸೇನೆಯ ಭಾಗವಾಗಲಿವೆ.

ಗವಾಸ್ಕರ್ ವಿರುದ್ಧ ಕೊಹ್ಲಿ ಹೆಂಡತಿಯ ಆಕ್ರೋಶ!

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಮಾಜಿ ಕ್ರಿಕೆಟರ್ ಸುನಿಲ್ ಗವಾಸ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರ ಚುನಾವಣೆ – ಪ್ರಣಾಳಿಕೆ ಬಿಡುಗಡೆ ಮಾಡಿದ ಆರ್ ಜೆಡಿ!

ಪಾಟ್ನಾ : ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನತಾ ದಳ ( ಆರ್ ಜೆಡಿ) ಶನಿವಾರ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಹಾರದಲ್ಲಿನ ಲಕ್ಷಾಂತರ ಯುವಕರಿಗೆ ಉದ್ಯೋಗವಕಾಶ ಒದಗಿಸಲು ಬದ್ಧವಾಗಿರುವುದಾಗಿ ಪುನರ್ ಉಚ್ಛರಿಸಿದೆ.

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.