ಅಸುಂಡಿ ಗ್ರಾಮದಲ್ಲಿ 9ನೆ ತರಗತಿ ವಿಧ್ಯಾರ್ಥಿನಿಯನ್ನು ಕೊಲೆ ಮಾಡಿ ಬಿಸಾಡಿರುವ ದುಶ್ಕರ್ಮಿಗಳು.


ಉತ್ತರಪ್ರಭ ಸುದ್ದಿ
ಗದಗ:
ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿಯು ಕಾಣೆಯಾಗಿದ್ದಾಳೆ ಎಂದು 2ದಿನಗಳ ಹಿಂದೆ ವಿದ್ಯಾರ್ಥಿನಿಯ ಪೋಷಕರು ಗದಗ ಗ್ರಾಮಿಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು ಎನ್ನಲಾಗಿದೆ. ಆದರೆ ಬುಧವಾರ ಸಂಜೆ ವಿದ್ಯಾರ್ಥಿನಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿದ್ದು. ಶವ ಕೊಳೆತು ವಾಸನೆ ಬಂದದ್ದನ್ನು ಸಮೀಪದಲ್ಲಿಯೇ ಇದ್ದ ಚಿಕನ್ ಅಂಗಡಿಯವರು ಪೊಲೀಸರಿಗೆ ತಿಳಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿದಾಗ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿ ಬಿಸಾಡಿರುವ ಶಂಕೆಯ ಮೇರೆಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಮತ್ತು ಕೊಲೆ ಪ್ರಕರಣ ದಾಖಲಿಸಿ ಕೊಂಡು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ. 5ರಿಂದ6 ಯುವಕರು ಕೃತ್ಯ ದಲ್ಲಿ ಭಾಗಿಯಾಗಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

Exit mobile version