ಗದಗ: ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಬುಧವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿ 24 ಗಂಟೆ ಕಳೆದರು ಇನ್ನೂ ಅರೋಪಿಗಳ ಪತ್ತೆಯಾಗಿಲ್ಲ.

ಇತ್ತಿಚಿಗೆ ಇಂತಹ ಪ್ರಕರಣಗಳೂ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದು ದುರದುಷ್ಟಕರ ಅದರಲ್ಲೂ ಗದಗ ಜಿಲ್ಲೆಯ ಅಸುಂಡಿ ಗ್ರಾಮದ ಬಾಲಕಿಯ ಕೊಲೆ ಪ್ರಕರಣ ಜನರಲ್ಲಿ ಬಯಭೀತಿಯನ್ನು ಹುಟ್ಟಿಸಿದೆ, ಇದರಿಂದ ಮಕ್ಕಳನ್ನು ಶಾಲೆಗೆ ಕಳಿಸಲು ಪಾಲಕರು ಹಿಂದೆಟು ಹಾಕುತ್ತಿದ್ದಾರೆ. ಪ್ರಕರಣ ಕುರಿತು ಉತ್ತರಪ್ರಭದೊಂದಿಗೆ ಗದಗ ಗ್ರಾಮೀಣ ಸಿಪಿಐ ಅವರಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿದಾಗ ಮೇಲ್ನೋಟಕ್ಕೆ ಬಾಲಕಿಯ ಮೇಲೆ ಅತ್ಯಾಚಾರದ ಶಂಕೆ ಇಲ್ಲ ಇನ್ನೂ ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದಿರುವುದಿಲ್ಲ,ವರದಿ ಬಂದ ನಂತರ ಸತ್ಯಾಸತ್ತತೆ ಗೊತ್ತಾಗುತ್ತದೆ, ಇನ್ನೂ ಆರೋಪಿಗಳ ಪತ್ತೆಯಾಗಿಲ್ಲ ಎಂದು ಪ್ರತಿಕ್ರಿಯಿಸಿದರು. ಈ ಪ್ರಕರಣ ಸಾಕಷ್ಟು ಅನುಮಾನವನ್ನು ಹುಟ್ಟಿಸಿದೆ. ಮಕ್ಕಳ ರಕ್ಷಣಾ ಸಮಿತಿ ಈ ಪ್ರಕರಣವನ್ನು ವಿಶೇಷವೆಂದು ಪರಿಗಣಿಸಿ ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಮದ್ಯಪ್ರವೇಶ ಮಾಡಬೇಂಬುದು ಅಲ್ಲಿನ ಸಾರ್ವಜನಿಕರ ಒತ್ತಾಯ.ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟಬೇಕಾಗಿದೆ.

ಪ್ರಕರಣ ಕುರಿತು ಉತ್ತರಪ್ರಭದೊಂದಿಗೆ ಗದಗ ಗ್ರಾಮೀಣ ಸಿಪಿಐ ಅವರಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿದಾಗ ಮೇಲ್ನೋಟಕ್ಕೆ ಬಾಲಕಿಯ ಮೇಲೆ ಅತ್ಯಾಚಾರದ ಶಂಕೆ ಇಲ್ಲ ಇನ್ನೂ ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದಿರುವುದಿಲ್ಲ,ವರದಿ ಬಂದ ನಂತರ ಸತ್ಯಾಸತ್ತತೆ ಗೊತ್ತಾಗುತ್ತದೆ, ಇನ್ನೂ ಆರೋಪಿಗಳ ಪತ್ತೆಯಾಗಿಲ್ಲ ಎಂದು ಪ್ರತಿಕ್ರಿಯಿಸಿದರು

Leave a Reply

Your email address will not be published. Required fields are marked *

You May Also Like

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನ ಶ್ರೀರಕ್ಷೆ ಇದೆ – ಹೊರಟ್ಟಿ!

ಚಿಕ್ಕಬಳ್ಳಾಪುರ : ಬಿಜೆಪಿಯ ಹೈಕಮಾಂಡ್ ತಮ್ಮ ಅಭಿಪ್ರಾಯವನ್ನು ಯತ್ನಾಳ್ ಅವರ ಮೂಲಕ ಹೇಳಿಸುತ್ತಿದೆ ಎಂದು ಶಾಸಕ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಜೈಲಿನ ಸಿಬ್ಬಂದಿಗೂ ಅಂಟಿಕೊಂಡ ಕೊರೊನಾ!

ನವದೆಹಲಿ: ಇಲ್ಲಿಯ ರೋಹಿಣಿ ಜೈಲಿನ ಕೈದಿಯಲ್ಲಿ ಮತ್ತೆ ಕೊರೊನಾ ಸೋಂಕು ಕಂಡು ಬಂದಿದೆ. ಒಬ್ಬ ವ್ಯಕ್ತಿಯಲ್ಲಿ…

ಮುಂಡರಗಿಗೆ ಬಿಇಓ ನೇಮಕ, ಶಿರಹಟ್ಟಿ ಬಿಇಓ ವರ್ಗಾವಣೆ

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿಗೆ ಖಾಲಿ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಯುವರಾಜ್ ನಾಯ್ಕ್ ಅವರನ್ನು…

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…