ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ.

ಇಂದು ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬAದಿದ್ದು, ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು,ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವಿಕ್ರಂ ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ,ಮಾಜಿ ಮುಖ್ಯಮಂತ್ರಿ ಕುಮಾರ ಸಾಮಿ, ನಟ ಯಶ್, ದರ್ಶನ್, ಗಣೇಶ್ ,ನಿಖಿಲ್ ಕುಮಾರಸ್ವಾಮಿ, ನಿನಾಸಂ ಸತೀಸ್ ಗಣ್ಯಾತಿಗಣ್ಯರು ಸೇರಿದಂತೆ ಅಪಾರ ಅಭಿಮಾನಿಗಳು ಆಗಮಿಸುತ್ತಿದ್ದು, ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ.

ಪುನೀತ್ ರಾಜ್ ಕುಮಾರ್ ಬೇಗ ಗುಣಮುಖ ಗುಣಮುಖರಾಗಲಿ ಎಂಬುದು ಉತ್ತರಪ್ರಭ ಮತ್ತು ಅಭಿಮಾನಿಗಳ ಪ್ರಾರ್ಥನೆ

Leave a Reply

Your email address will not be published. Required fields are marked *

You May Also Like

ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ವೈರಸ್ ಪತ್ತೆ

ಕೊರೊನಾ ವೈರಸ್ ಬೆನ್ನಲ್ಲೇ ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಪ್ರಕರಣವೊಂದು ದೃಢಪಟ್ಟಿದೆ.

ಕೊರೊನಾ ನಿಯಂತ್ರಣಕ್ಕೆ ಆಯುರ್ವೇದದಲ್ಲಿರುವ ಪರಿಹಾರ, ಚಳಿಗಾಲದಲ್ಲಿ ಕೊರೊನಾ ಮುಂಜಾಗೃತೆ ಹೇಗಿರಬೇಕು?

ಕೊರೊನಾ ನಿಯಂತ್ರಣಕ್ಕೆ ಆಯುರ್ವೇದದಲ್ಲಿರುವ ಪರಿಹಾರ, ಚಳಿಗಾಲದಲ್ಲಿ ಕೊರೊನಾ ಮುಂಜಾಗೃತೆ ಹೇಗಿರಬೇಕು? ಡಾ.ಮಹೇಶ್ ಬುಜರಿ ಅವರ ಜೊತೆಗೆ ಡಾ. ಬಸವರಾಜ್ ಡಿ. ತಳವಾರ ಅವರು ಉತ್ತರಪ್ರಭಕ್ಕೆ ನಡೆಸಿದ ವಿಶೇಷ ಸಂದರ್ಶನ ಇಲ್ಲಿದೆ..

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.

ರಷ್ಯಾ ಪ್ರಧಾನಿಯನ್ನೂ ಬಿಡಲಿಲ್ಲ ಕೊರೊನಾ!

ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.