ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ.

ಇಂದು ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬAದಿದ್ದು, ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು,ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವಿಕ್ರಂ ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ,ಮಾಜಿ ಮುಖ್ಯಮಂತ್ರಿ ಕುಮಾರ ಸಾಮಿ, ನಟ ಯಶ್, ದರ್ಶನ್, ಗಣೇಶ್ ,ನಿಖಿಲ್ ಕುಮಾರಸ್ವಾಮಿ, ನಿನಾಸಂ ಸತೀಸ್ ಗಣ್ಯಾತಿಗಣ್ಯರು ಸೇರಿದಂತೆ ಅಪಾರ ಅಭಿಮಾನಿಗಳು ಆಗಮಿಸುತ್ತಿದ್ದು, ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ.

ಪುನೀತ್ ರಾಜ್ ಕುಮಾರ್ ಬೇಗ ಗುಣಮುಖ ಗುಣಮುಖರಾಗಲಿ ಎಂಬುದು ಉತ್ತರಪ್ರಭ ಮತ್ತು ಅಭಿಮಾನಿಗಳ ಪ್ರಾರ್ಥನೆ

Leave a Reply

Your email address will not be published. Required fields are marked *

You May Also Like

ಮೊಮ್ಮಗನಿಗೆ ಕೊರೊನಾ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಜ್ಜಿ!

ಕಾರವಾರ: ಕೊರೊನಾ ಸೋಂಕಿತನ ಸಂಪರ್ಕ ಹೊಂದುವ ಮೂಲಕ ಕ್ವಾರಂಟೈನ್ ಆಗಿದ್ದ ವೃದ್ಧೆಯೊಬ್ಬರು ತಮಗೂ ಕೊರೊನಾ ಬಂದಿದೆ…

ಗದಗ ಜಿಲ್ಲೆಯಲ್ಲಿಂದು 99 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಕೂಡ 99 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ…

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.