ಹನಮಪ್ಪ @ ಹನುಮಂತಪ್ಪ ಸಿದ್ದಪ್ಪ ಮೇವುಂಡಿ ಸಾ: ಅಸುಂಡಿ ತಾ:ಜಿ:ಗದಗ ಇವನು ಆಸ್ತಿ ವಿಷಯದ ಬಗ್ಗೆ ತನ್ನ ಹೆಂಡತಿ ವಿನೋದಾ ಇವಳನ್ನು ದಿನಾಂಕ: 10-08-2018 ರಂದು ಮುಂಜಾನೆ 10-30 ಗಂಟೆ ಸುಮಾರಿಗೆ ಗದಗ ಗ್ರಾಮೀಣ ಪೋಲೀಸ್ ಠಾಣಾ ಹದ್ದಿ ಪೈಕಿ ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದ ಹದ್ದಿಯಲ್ಲಿ ಆರೋಪಿತನು ಟ್ರಾö್ಯಕ್ಟರ್ ಟ್ರೇಲರ್‌ಕ್ಕೆ ಸಿಕ್ಕಿಸಿದ ಕಟ್ಟಿಗೆಯಿಂದ ತನ್ನ ಪತ್ನಿ ವಿನೋದಾ ಇವಳ ತಲೆಗೆ, ಮುಖಕ್ಕೆ, ಕೈಕಾಲುಗಳಿಗೆ ಬಲವಾಗಿ ಹೊಡೆದು ಭಾರೀ ಗಾಯ ಪಡಿಸಿ ಕೋಲೆ ಮಾಡಿದ ಅಪರಾಧ ಕುರಿತು ಕಲಂ: 302 ಭಾ.ದಂ.ಸ ರಡಿಯಲ್ಲಿ ಅಪರಾಧ ಮಾಡಿದ್ದಕ್ಕೆ ಗದಗ ಗ್ರಾಮೀಣ ಸಿ.ಪಿ.ಐ ಸಿದ್ದಲಿಂಗಪ್ಪಗೌಡ ಪಾಟೀಲ ಇವರು ತನಿಖೆ ಮಾಡಿ ಆರೋಪಿ ವಿರುದ್ದ ಆರೋಪಣಾ ಪತ್ರವನ್ನು ನ್ಯಾಯಾಲಯದಲ್ಲಿ ಸಲ್ಲಿಸಲಾಗಿತ್ತು.

ಸಾಕ್ಷಿ ವಿಚಾರಣೆ ನಡೆಸಿದ ಗದಗಿನ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಎಸ್ ಮಹಾಲಕ್ಷಿ ನೇರಳೆ ಇವರು ಸದರ ಪ್ರಕರಣದಲ್ಲಿ ಆರೋಪ ರುಜುವಾತು ಆಗಿದ್ದರಿಂದ ಆರೋಪಿತನಾದ ಹನಮಪ್ಪ @ ಹನುಮಂತಪ್ಪ ಸಿದ್ದಪ್ಪ ಮೇವುಂಡಿ ಇತನಿಗೆೆ ದಿನಾಂಕ-29-10-2021 ರಂದು ಭಾ.ದಂ.ಸA 302 ರಡಿ ಜೀವಾವಧಿ ಶಿಕ್ಷೆ ಹಾಗೂ 5,000/- ರೂ ದಂಡ, ದಂಡ ತುಂಬಲು ತಪ್ಪಿದ್ದಲ್ಲಿ 03 ತಿಂಗಳ ಸಾದಾ ಶೀಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಶ್ರೀಮತಿ ಸವಿತಾ ಎಂ ಶಿಗ್ಲಿ ಸರಕಾರಿ ಅಭಿಯೋಜಕರು, ಗದಗ ಇವರು ಸಾಕ್ಷಿ ವಿಚಾರಣೆ ಮಾಡಿ ವಾದವನ್ನು ಮಂಡಿಸಿದರು.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಮೂವರಿಗೆ ಸೋಂಕು ದೃಢ

ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೊರೊನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿದ್ದು, ನಾಲ್ವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸದ್ಯದ ಆಸ್ತಿ ಎಷ್ಟು ಗೊತ್ತಾ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷಕ್ಕಿಂತಲೂ ಈ ವರ್ಷ ಶ್ರೀಮಂತರಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯ ಮೌಲ್ಯ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಾಗಿದೆ. ಈ ವರ್ಷ ಅವರ ಆಸ್ತಿಯ ಮೌಲ್ಯ ರೂ. 36 ಲಕ್ಷ ಹೆಚ್ಚಳವಾಗಿದೆ.

ಲವ್ ಜಿಹಾದ್ ಪ್ರಕರಣ ಕ್ರಮಕ್ಕೆ ಒತ್ತಾಯಿಸಿ ಲಕ್ಷ್ಮೇಶ್ವರದಲ್ಲಿ ಮನವಿ

ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ.

5 ರಂದು ನಡೆಯುವ ಯುವಜನ ಸಂಕಲ್ಪ ನಡಿಗೆ ಯಾತ್ರೆ ಯಶಸ್ವಿಗೆ ಮನವಿ

ಆಲಮಟ್ಟಿ: 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂಗವಾಗಿ ಸದೃಢ, ಸಶಕ್ತ ಭಾರತಕ್ಕಾಗಿ ಅಗಷ್ಟ 5 ರಂದು…