ಉತ್ತರಪ್ರಭ ಸುದ್ದಿ
ಶಿರಹಟ್ಟಿ:
ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ಹೋಗಲು ಬಸ್ ಸರಿಯಾದ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದು, ಸಮಪರ್ಕಕ ಸಾರಿಗೆ ಕಲ್ಪಿಸುವಂತೆ‌ ಒತ್ತಾಯಿಸಿ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಮುಂಜಾನೆ ಬಸ್ ಗಳನ್ನು ತಡೆದು ದಿಢೀರ್ ಪ್ರತಿಭಟನೆ ಕೈಗೊಂಡ ಘಟನೆ ನಡೆಯಿತು.

ಗದಗ ಮತ್ತು ಶಿರಹಟ್ಟಿಯ ಶಾಲಾ ಕಾಲೇಜುಗಳಿಗೆ ಬರಲು‌ ಮುಂಜಾನೆ ಸಮಯಕ್ಕೆ ಸರಿಯಾದ ಬಸ್ ಇಲ್ಲದೆ ತುಂಬಾ ತೊಂದರೆ ಅನುಭವಿಸುತ್ತಿದ್ಧೇವೆ. ತಾಲೂಕಿನ ಬಹುತೇಕ ಗ್ರಾಮದ ರಸ್ತೆಗಳು ದುರಸ್ಥಿ ಹಂತದಲ್ಲಿದ್ದು, ದೊಡ್ಡ ದೊಡ್ಡ ತೆಗ್ಗುಳಿಂದ ಆವೃತವಾಗಿವೆ. ಅದರಿಂದ ಸಮಯಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಬಂದರೂ ಬ್ರೇಕ್ ಇಲ್ಲದೆ, ಟಾಯರ್ ಬ್ಲಾಸ್ಟ್ ನಂತಹ ಹಲವಾರು ರೋಗಗಳನ್ನು ಹೊಂದಿದ ಡಕೋಟಾ ಬಸ್ ಗಳು ಮಾರ್ಗ ಮಧ್ಯದಲ್ಲಿ ಕೆಟ್ಟುನಿಂತರೆ ನಮ್ಮ ಅಂದಿನ ಕಲಿಕೆ ಮುಕ್ತಾಯವಾದ ಹಾಗೆ. ಇದಕ್ಕೆ ಸಂಬಂಧಿಸಿದಂತೆ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಕ್ಯಾರೆ‌ ಎನ್ನುತ್ತಿಲ್ಲ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ಉತ್ತರಪ್ರಭದೊಂದಿಗೆ ತೊಡಿಕೊಂಡರು.

ವಿದ್ಯಾರ್ಥಿಗಳ ಪ್ರತಿಭಟನೆಗೆ ಸಾಥ್‌ ನೀಡಿದ ಪಪಂ ಸದಸ್ಯ ಮಂಜುನಾಥ ಘಂಟಿ ಮಾತನಾಡಿ, ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳು ಬಸ್ ಗಳ ಸಮಸ್ಯೆ ಎದುರಿಸುತ್ತಿದ್ದಾರೆ. ಹೊಸಳ್ಳಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ, ಹೊಳೆಇಟಗಿ, ತಂಗೊಡ ಸೇರಿದಂತೆ ವಿವಿಧ ಗ್ರಾಮಗಳಿಂದ ಶಿರಹಟ್ಟಿ ಹಾಗೂ ಗದಗ ನಗರಕ್ಕೆ ತೆರಳುವ ಪ್ರೌಢಶಾಲಾ, ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ಬಸ್ ಇಲ್ಲದೆ ತುಂಬಾ ತೊಂದರೆಯಾಗುತ್ತಿದೆ. ಈ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಮನ್ನಣೆ ದೊರೆಯದೆ ಇರುವುದು ವಿದ್ಯಾರ್ಥಿಗಳ ದೌರ್ಬಾಗ್ಯವೇ ಸರಿ. ಸರಿಯಾದ ಶಿಕ್ಷಣ ಪಡೆದು ಉನ್ನತ ಹುದ್ದಗೇರಬೇಕೆಂಬ ಹಲವಾರು ಹಳ್ಳಿಗಳ ಪ್ರತಿಭಾವಂತ ವಿದ್ಯಾರ್ಥಿಗಳ ಆಸಕ್ತಿ ಸರ್ಕಾರದ ಅಸಮರ್ಪಕ ಬಸ್ ಸೌಲಭ್ಯದಿಂದ ಕಮರುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಭರವಸೆ ನೀಡಿದ ಸಿಎಸ್ಐ
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಿಎಸ್ಐ ನವೀನ ಜಕ್ಕಲಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಸರಿಯಾದ ಬಸ್ ಸೌಲಭ್ಯ ಕೇಳುವುದು ತಪ್ಪಲ್ಲ. ಆದರೆ ಹೀಗೆ ದಿಢೀರ್ ಪ್ರತಿಭಟನೆ ಕೈಗೊಂಡರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ನಾನು ಬಸ್ ಸಂಚಾರ ಮಾಡಿ ವಿದ್ಯಾಭ್ಯಾಸ ಮುಗಿಸಿದ ಕಾರಣ ನಿಮ್ಮ ಸಮಸ್ಯೆ ಅರ್ಥವಾಗುತ್ತದೆ. ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಇರುವ ಪ್ರತಿಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಕಲ್ಪಿಸಲು ಕ್ರಮ ತೆಗೆದುಕೊಳ್ಳುವಂತೆ ತಿಳಿಸುತ್ತೇನೆ ಎಂಬ ಭರವಸೆ ನೀಡಿದರು.

ಸರ್ ನಿಮ್ಮ ಮಾತಿಗೆ ನಾವು ಬೆಲೆ ಕೊಡುತ್ತೇವೆ. ಒಂದುವೇಳೆ ಇದೇ ಸಮಸ್ಯೆ ಮರುಕಳಿಸಿದರೆ ವ್ಯವಸ್ಥಿತವಾಗಿ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಒಕ್ಕೊರಲಿನ ಧ್ವನಿಯಲ್ಲಿ ಎಚ್ಚರಿಕೆ ನೀಡಿದರು.

ಪಪಂ ಉಪಾಧ್ಯಕ್ಷ ಇಸಾಕ ಆದ್ರಳ್ಳಿ, ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ನೀರಿನ ಕರ ಹೆಚ್ಚಳಕ್ಕೆ ಕನ್ನಡ ಕ್ರಾಂತಿ ಸೇನೆ ವಿರೋಧ

ವರ್ಷಕ್ಕೆ 950 ರೂ ನೀರಿನ ಕರವನ್ನು ಪುರಸಭೆ ನಿಗದಿ ಮಾಡಿತ್ತು. ಆದರೆ ಇದೀಗ ಏಕಾಏಕಿ 1550 ರೂ, ಏಕಾಏಕಿ ಹೆಚ್ಚಿಗೆ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಸರಕಾರಿ ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಅನಿರ್ಧಿಷ್ಟಾವಧಿ ಧರಣಿ

ಉತ್ತರಪ್ರಭ ಸುದ್ದಿ ಮಸ್ಕಿ: ತಾಲೂಕಿನ ಉಸ್ಕಿಹಾಳ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಗ್ರಾಮಸ್ತರು ಮತ್ತು ವಿದ್ಯಾರ್ಥಿಗಳು…

ಲಕ್ಷ್ಮೇಶ್ವರ: ಗೋಡೆ ಕುಸಿತ, ತಪ್ಪಿದ ಅನಾಹುತ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದಕೆರೆ ಓಣಿಯಲ್ಲಿ ಮನೆಗಳ ಗೋಡೆ ಕುಸಿದಿವೆ. ಲಕ್ಷ್ಮೇಶ್ವರ: ಬೆಂಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.

ರೈತರ ಹೋರಾಟಕ್ಕೆ ಸ್ಪಂದಿಸಿ ಶೀರ್ಘದಲ್ಲೆ ರೈತರ ಬೇಡಿಕೆಗಳನ್ನ ಈಡೇರಿಸಲು ಭರವಸೆ

ಉತ್ತರಪ್ರಭ ಸುದ್ದಿ ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ರೈತರು ಶಿಂಗಟಾಲೂರ ಏತ ನೀರಾವರಿ ಎಡದಂಡೆ…