ಉತ್ತರಪ್ರಭ ಸುದ್ದಿ
ಗದಗ:
ಮಹಿಳೆಯೊಬ್ಬರು ಮೃತ ಪಟ್ಟರೂ ಸಹ ಅತ್ಯಂತ ಕಾಳಜಿಯಿಂದ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ ಅವರ ಉದರದಲ್ಲಿ ಶಿಶುವನ್ನು ಬದುಕಿಸಿ ಮಾನವೀಯತೆ ಮೆರೆದ ಗದಗ ಜಿಲ್ಲೆಯ ದಂಡಪ್ಪ ಮಾನೆ ಸರ್ಕಾರಿ ಆಸ್ಪತ್ರೆಯ ವೈದ್ಯರ ಸೇವೆ ನಿಜಕ್ಕೂ ಶ್ಲಾಘನೀಯ. ಈ ವೈದ್ಯರ ತಂಡಕ್ಕೆ ನನ್ನ ಹಾರ್ದಿಕ ಅಭಿನಂದನೆಗಳು.

ಗದಗ ಜಿಲ್ಲೆಯ ರೋಣ ತಾಲೂಕಿನ ಮುಶಿಗೇರಿ ಗ್ರಾಮದ ಅನ್ನಪೂರ್ಣ ಎಂಬವರು ಇತ್ತೀಚೆಗೆ ಹೆರಿಗೆ ನಿಮಿತ್ತ ಆಸ್ಪತ್ರೆಗೆ ಬರುವ ಸಂದರ್ಭದಲ್ಲಿ ಆರೋಗ್ಯ ಕ್ಷೀಣಿಸಿ ಮೃತಪಟ್ಟರೂ ಸಹ ಅವರ ಗರ್ಭದಲ್ಲಿರುವ ಮಗು ಜೀವಂತವಾಗಿರುವುದನ್ನು ವೈದ್ಯರು ಪತ್ತೆಹಚ್ಚಿ ತಕ್ಷಣ ಸಂಕೀರ್ಣವಾದ ಶಸ್ತ್ರಚಿಕಿತ್ಸೆ ನಡೆಸಿ ಮಗುವಿನ ಪ್ರಾಣ ಉಳಿಸಿರುವುದು ಪ್ರಶಂಸನೀಯವಾಗಿದೆ. ಇದೊ0ದು ಅಪರೂಪದ ಮತ್ತು ಸೂಕ್ಷ್ಮ ಶಸ್ತ್ರಚಿಕಿತ್ಸೆಯಾಗಿದ್ದು, ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ವೈದ್ಯರ ತಂಡದಲ್ಲಿದ್ದ ಬಸನಗೌಡ ಕರಿಗೌಡರ್, ಡಾ. ಶೃತಿ, ಡಾ. ವಿನೋದ್, ಡಾ. ಜಯರಾಜ್, ಡಾ. ಅಜಯ್, ಡಾ. ಕೀರ್ತನ್ ಅವರನ್ನು ಈ ಬಗ್ಗೆ ಅಭಿನಂದಿಸುತ್ತೇನೆ. ಇ0ತಹ ವಿಶಿಷ್ಟ ಮಾನವೀಯ ಸೇವೆಯಿಂದ ನಮ್ಮ ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚುವುದಲ್ಲದೆ, ಸಾರ್ವಜನಿಕರಲ್ಲಿ ಸರ್ಕಾರಿ ವೈದ್ಯರುಗಳ ಕುರಿತು ವಿಶ್ವಾಸಾರ್ಹತೆಯೂ ವೃದ್ಧಿಸಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಇದೊಂದು ನಿಜಕ್ಕೂ ಮಾದರಿ ಸೇವೆಯಾಗಿದೆ. ಸಿ.ಸಿ.ಪಾಟೀಲ, ಲೋಕೋಪಯೋಗಿ ಸಚಿವರು ಕರ್ನಾಟಕ ಸರ್ಕಾರ

2 comments
  1. Publicity goskara.

    Ivana ಹಿಂದೆ. Nalayaku ವಸಂತ್ ಮೇಟಿ . ಗ್ರಾಮೀಣ ಎಲೆಕ್ಷನ್ ಸೋತಾವ

Leave a Reply

Your email address will not be published. Required fields are marked *

You May Also Like

ಯೋಗಿಶ್ ಗೌಡ ಹತ್ಯೆ ಪ್ರಕರಣ: ಬೆಂಗಳೂರಿಗೆ ಶಿಫ್ಟ್

ಜಿಲ್ಲಾ ಪಂಚಾಯತಿ ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲಿನ ಸಾಕ್ಷನಾಶ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟಗೆ ಶಿಫ್ಟ್ ಮಾಡಲಾಗಿದೆ.

ಪಾಪನಾಶಿ: ಟೋಲ್ ಗೇಟ್ ತೆರುವುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಇಲ್ಲಿನ ಪಾಪನಾಶಿ ಹತ್ತಿರದಲ್ಲಿರುವ ಟೋಲ್ ಗೇಟ್ ಅವೈಜ್ಞಾನಿಕವಾಗಿ ಸ್ಥಾಪಿಸಲಾಗಿದೆ. ಸಂಪೂರ್ಣ ಎತ್ತರ ಹಾಗೂ ತಿರುವಿನಲ್ಲಿ ಟೋಲ್ ಗೇಟ್ ಇದೆ.

ಸುಕ್ಕಾ ಹೊಡದ್ ಒಂಚೂರು ಉಪ್ಪಿನಕಾಯಿ ಒಳಗೋದ ಕೂಡ್ಲೆ ಏನಾತಂತೀರಿ…!

ಹೊಗ್ಗೋ ನಿನ್ನ ತಲಿ ದಿಮ್ ಹಿಡದಂಗಾಗಿ ಹ್ಯಂಗ್ಯಂಗರ ಮಾತಾಡಾಕತ್ತಿನಿ ಅನಸಾಕತ್ತೈತಿ ನಂಗ. ಅಯ್ಯೋ ನಂಗು ಹಂಗಾ ಅನಾಸಾಕತ್ತೈತಿ. ತಲಿ ದಿಮ್ಮಿನ ವಿಷಯ ಹೋಗ್ಲಿ ಹ್ಯಾಂಗಿತ್ತು ಮೊದಲ ದಿನದ ಅನುಭವ….!

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.