ಉತ್ತರಪ್ರಭ ಸುದ್ದಿ
ಗದಗ:
ಮಹಿಳೆಯೊಬ್ಬರು ಮೃತ ಪಟ್ಟರೂ ಸಹ ಅತ್ಯಂತ ಕಾಳಜಿಯಿಂದ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ ಅವರ ಉದರದಲ್ಲಿ ಶಿಶುವನ್ನು ಬದುಕಿಸಿ ಮಾನವೀಯತೆ ಮೆರೆದ ಗದಗ ಜಿಲ್ಲೆಯ ದಂಡಪ್ಪ ಮಾನೆ ಸರ್ಕಾರಿ ಆಸ್ಪತ್ರೆಯ ವೈದ್ಯರ ಸೇವೆ ನಿಜಕ್ಕೂ ಶ್ಲಾಘನೀಯ. ಈ ವೈದ್ಯರ ತಂಡಕ್ಕೆ ನನ್ನ ಹಾರ್ದಿಕ ಅಭಿನಂದನೆಗಳು.

ಗದಗ ಜಿಲ್ಲೆಯ ರೋಣ ತಾಲೂಕಿನ ಮುಶಿಗೇರಿ ಗ್ರಾಮದ ಅನ್ನಪೂರ್ಣ ಎಂಬವರು ಇತ್ತೀಚೆಗೆ ಹೆರಿಗೆ ನಿಮಿತ್ತ ಆಸ್ಪತ್ರೆಗೆ ಬರುವ ಸಂದರ್ಭದಲ್ಲಿ ಆರೋಗ್ಯ ಕ್ಷೀಣಿಸಿ ಮೃತಪಟ್ಟರೂ ಸಹ ಅವರ ಗರ್ಭದಲ್ಲಿರುವ ಮಗು ಜೀವಂತವಾಗಿರುವುದನ್ನು ವೈದ್ಯರು ಪತ್ತೆಹಚ್ಚಿ ತಕ್ಷಣ ಸಂಕೀರ್ಣವಾದ ಶಸ್ತ್ರಚಿಕಿತ್ಸೆ ನಡೆಸಿ ಮಗುವಿನ ಪ್ರಾಣ ಉಳಿಸಿರುವುದು ಪ್ರಶಂಸನೀಯವಾಗಿದೆ. ಇದೊ0ದು ಅಪರೂಪದ ಮತ್ತು ಸೂಕ್ಷ್ಮ ಶಸ್ತ್ರಚಿಕಿತ್ಸೆಯಾಗಿದ್ದು, ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ವೈದ್ಯರ ತಂಡದಲ್ಲಿದ್ದ ಬಸನಗೌಡ ಕರಿಗೌಡರ್, ಡಾ. ಶೃತಿ, ಡಾ. ವಿನೋದ್, ಡಾ. ಜಯರಾಜ್, ಡಾ. ಅಜಯ್, ಡಾ. ಕೀರ್ತನ್ ಅವರನ್ನು ಈ ಬಗ್ಗೆ ಅಭಿನಂದಿಸುತ್ತೇನೆ. ಇ0ತಹ ವಿಶಿಷ್ಟ ಮಾನವೀಯ ಸೇವೆಯಿಂದ ನಮ್ಮ ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚುವುದಲ್ಲದೆ, ಸಾರ್ವಜನಿಕರಲ್ಲಿ ಸರ್ಕಾರಿ ವೈದ್ಯರುಗಳ ಕುರಿತು ವಿಶ್ವಾಸಾರ್ಹತೆಯೂ ವೃದ್ಧಿಸಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಇದೊಂದು ನಿಜಕ್ಕೂ ಮಾದರಿ ಸೇವೆಯಾಗಿದೆ. ಸಿ.ಸಿ.ಪಾಟೀಲ, ಲೋಕೋಪಯೋಗಿ ಸಚಿವರು ಕರ್ನಾಟಕ ಸರ್ಕಾರ

2 comments
  1. Publicity goskara.

    Ivana ಹಿಂದೆ. Nalayaku ವಸಂತ್ ಮೇಟಿ . ಗ್ರಾಮೀಣ ಎಲೆಕ್ಷನ್ ಸೋತಾವ

Leave a Reply

Your email address will not be published. Required fields are marked *

You May Also Like

ಡಂಬಳ : ಪಶು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ

ಜಾನುವಾರುಗಳಿಗೆ ಚಿಕಿತ್ಸೆ ನೀಡುವುದಕ್ಕೆ ಪಶು ಆಸ್ಪತ್ರೆ ಇದ್ದರೂ ಕೂಡ ಜಾನುವಾರುಗಳಿಗೆ ಚಿಕಿತ್ಸೆ ಸಿಗದೇ ಜಾನುವಾರಗಳು ನರಳಾಡುವಂತಹ ಪರಸ್ಥಿತಿ ಎದುರಾಗಿದೆ.

ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!

ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.

ಎರಡು ಯುವಕರ ಗುಂಪುಗಳ ಮದ್ಯೆ ಗಲಾಟೆ..!

ಉತ್ತರಪ್ರಭ ಸುದ್ದಿರೋಣ: ಪಟ್ಟಣದಲ್ಲಿ ಬಿಸಿ ರಕ್ತದ ಯುವಕರ ಗುಂಪುಗಳ ಗಲಾಟೆ ಮಾಡಿಕೊಂಡು, ರೋಣ ಪೊಲೀಸ್ ಠಾಣೆ…

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು