ಉತ್ತರಪ್ರಭ ಸುದ್ದಿ
ಬೆಂಗಳೂರು:
ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ.ಪುನೀತ್ ರಾಜ್‌ಕುಮಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಕಾನೂನು ಅಡ್ಡಿಗಳು ಇವೆಯೆಂಬ ಕಾರಣಕ್ಕೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿರಲಿಲ್ಲ.

ಹಾಗಾಗಿ ಇದೀಗ ‘ಕರ್ನಾಟಕ ರತ್ನ’ ಘೋಷಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿವರು ಪ್ರಶಸ್ತಿ ಘೋಷಣೆ ಮಾಡುತ್ತಿದ್ದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದವರೆಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.ಕರ್ನಾಟಕ ರತ್ನ’ ಮಾತ್ರವೇ ಅಲ್ಲ ಇನ್ನೂ ಹಲವು ಗೌರವಗಳನ್ನು ಪುನೀತ್‌ಗೆ ನೀಡಬೇಕೆಂಬ ಅಭಿಲಾಷೆ ಅಭಿಮಾನಿಗಳಿಗೆ ಇದೆ, ಅದೇ ಅಭಿಲಾಷೆ ಸರ್ಕಾರಕ್ಕೂ ಇದೆ ಎಂದು ಸಿಎಂ ಹೇಳಿದರು. ಕೇಂದ್ರ ಸರ್ಕಾರದ ಪ್ರಶಸ್ತಿಗಳೂ ಸಹ ಪುನೀತ್‌ಗೆ ಸಲ್ಲಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದು ಸಿಎಂ ಹೇಳಿದರು.

Leave a Reply

Your email address will not be published. Required fields are marked *

You May Also Like

ಹರ್ಷ ಕೊಲೆ ಖಂಡಿಸಿ ನಿಡಗುಂದಿಯಲ್ಲಿ ಪ್ರತಿಭಟನೆ: ಮನವಿ ಅರ್ಪಣೆ

ನಿಡಗುಂದಿ (ವಿಜಯಪುರ ಜಿಲ್ಲೆ): ಶಿವಮೊಗ್ಗದಲ್ಲಿ ನಡೆದ ಹರ್ಷ ಝಿಂಗಾಡೆ ಕೊಲೆ ಖಂಡಿಸಿ ಭಾವಸಾರ ಕ್ಷತ್ರೀಯ ಸಮಾಜದ…

ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?

ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.

ಸಂತ್ರಸ್ತರಿಗೆ ನ್ಯಾಯ ದೊರಕುವುದೇ…?

ನೌಶಾದ್ ಜನ್ನತ್ತ ಮೂಲತಃ ಕೊಡಗಿನವರು. ನೆರೆ ಸಂದರ್ಭದಿಂದ ಈವರೆಗೆ ಕೊಡುಗಿನ ನೋವಿಗೆ ತಮ್ಮ ತಂಡದೊಂದಿದೆ ಧ್ವನಿಯಾಗುತ್ತಿದ್ದಾರೆ. ನೌಶಾದ್ ಬರೆದ ಸಂತ್ರಸ್ತರಿಗೆ ನ್ಯಾಯ ದೊರಕುವುದೇ..? ಎನ್ನುವ ಲೇಖನ ನಿಮ್ಮ ಉತ್ತರಪ್ರಭದ, ಉತ್ತರ ವಿಶೇಷದಲ್ಲಿ….

ನೆಲೋಗಿ ಠಾಣೆ ಪೊಲೀಸರ ಭರ್ಜರಿ ಬೇಟೆ 41.8 ಕೆಜಿ ಗಾಂಜಾ ಜಪ್ತಿ

ಉತ್ತರಪ್ರಭ ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ…