ಉತ್ತರಪ್ರಭ ಸುದ್ದಿ
ಬೆಂಗಳೂರು:
ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ.ಪುನೀತ್ ರಾಜ್‌ಕುಮಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಕಾನೂನು ಅಡ್ಡಿಗಳು ಇವೆಯೆಂಬ ಕಾರಣಕ್ಕೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿರಲಿಲ್ಲ.

ಹಾಗಾಗಿ ಇದೀಗ ‘ಕರ್ನಾಟಕ ರತ್ನ’ ಘೋಷಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿವರು ಪ್ರಶಸ್ತಿ ಘೋಷಣೆ ಮಾಡುತ್ತಿದ್ದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದವರೆಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.ಕರ್ನಾಟಕ ರತ್ನ’ ಮಾತ್ರವೇ ಅಲ್ಲ ಇನ್ನೂ ಹಲವು ಗೌರವಗಳನ್ನು ಪುನೀತ್‌ಗೆ ನೀಡಬೇಕೆಂಬ ಅಭಿಲಾಷೆ ಅಭಿಮಾನಿಗಳಿಗೆ ಇದೆ, ಅದೇ ಅಭಿಲಾಷೆ ಸರ್ಕಾರಕ್ಕೂ ಇದೆ ಎಂದು ಸಿಎಂ ಹೇಳಿದರು. ಕೇಂದ್ರ ಸರ್ಕಾರದ ಪ್ರಶಸ್ತಿಗಳೂ ಸಹ ಪುನೀತ್‌ಗೆ ಸಲ್ಲಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದು ಸಿಎಂ ಹೇಳಿದರು.

Leave a Reply

Your email address will not be published. Required fields are marked *

You May Also Like

ಕುಂದ್ರಳ್ಳಿ ವಿದ್ಯಾರ್ಥಿಗಳು ಶಾಲಿಗ್ಹೋಗಾಕ್ 3ಕಿಮಿ ನಡಿಬೇಕಂತ!

ಕೊರೊನಾದಿಂದಾಗಿ ಲಾಕ್‌ಡೌನ್ ಮಾಡಲಾಗಿತ್ತು. ಇದಾದ ನಂತರ ಇತ್ತಿಚೆಗಷ್ಟೆ ಶಾಲೆಗಳು ಆರಂಭಿಸಲಾಗಿದೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿದೆ. ಇದಕ್ಕೆ ಕಾರಣ ಬಸ್ ಸೌಲಭ್ಯ ಕೊರತೆ.

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…

ಒಂದೇ ಜೈಲಿನ 60 ಕೈದಿಗಳ ಬೆನ್ನು ಬಿದ್ದ ಮಹಾಮಾರಿ!

ಸೊಲ್ಲಾಪುರ ಜೈಲಿನಲ್ಲಿನ ಸುಮಾರು 60 ಜನ ಸಿಬ್ಬಂದಿಯಲ್ಲಿ ಕೊರೊನಾ ಕಂಡು ಬಂದಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಮಿಲಿಂದ್ ಶಂಭಾರ್ಕರ್, ಜೈಲಿನಲ್ಲಿ ಒಟ್ಟು 300 ಕೈದಿಗಳಿದ್ದಾರೆ. ಆದರೆ, 60 ಜನರಿಗೆ ಸೋಂಕು ತಗುಲಿದೆ.

ಕೊರೋನಾ ಕಾವ್ಯ-6

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಸಾಹಿತಿ ಎ.ಎಸ್.ಮಕಾನದಾರ್ ಕರಕಲಾದ ಕಾನನದಲ್ಲಿಯೂ ಕೊಸ ಗರಿಕೆಯನ್ನು ಕಾಣುವ ಕನಸುಗಾರನ ಭಾವ ಈ ಕಾವ್ಯದಲ್ಲಿ ಮೂಡಿದೆ.