ಉತ್ತರಪ್ರಭ ಸುದ್ದಿ

ಮುಳಗುಂದ: ಪಟ್ಟಣ ಸೇರಿದಂತೆ ಬಸಾಪೂರ, ಶೀತಾಲಹರಿ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರವೂ ಸಹ ಸಂಜೆ ಜೋರಾದ ಗಾಳಿ, ಗುಡುಗು ಸಹಿತ ಭಾರಿ ಮಳೆ ಸುರಿತು.


ಮಂಗಳವಾರವು ಮಳೆ ಆಗಿದ್ದು ಮುಂಜಾನೆ ಬಿಸಿಲು ಇತ್ತು ಮದ್ಯಾಹ್ನದಿಂದ ಮೋಡಕವಿದು ಸಂಜೆ ವೇಳೆಗೆ ಧೀಡಿರನೆ ಮಳೆ ಸುರಿದಿದ್ದರಿಂದ ವಾರದ ಸಂತೆಗೆ ಬಂದಿದ್ದ ಹಳ್ಳಿ ಜನರು, ತರಕಾರಿ ವ್ಯಾಪಾರಸ್ಥರು ಪರದಾಡಿದರು. ಅರ್ಧಗಂಟೆಗೂ ಹೆಚ್ಚುಕಾಲ ಭಾರಿ ಮಳೆ ಸುರಿದು ಚರಂಡಿಗಳು ತುಂಬಿಹರಿದವು. ಕಟಾವು ಮಾಡಿದ್ದ ಬಳ್ಳಿ ಶೇಂಗಾ ಬಣವಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಿ ರಕ್ಷಣೆ ಮಾಡಿದ್ದು ಇನ್ನೂ ಮಳೆ ಮಂದು ವರೆದರೆ ಕಟಾವು ಮಾಡದೇ ಇರುವ ಗೋವಿನ ಜೋಳ, ಶೇಂಗಾ, ಮೆಣಸಿನಕಾಯಿ ಫಸಲು ಕೊಳೆಯುವ ಆತಂಕ ರೈತರಿಗೆ ಎದುರಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ: ರಾಜ್ಯದಲ್ಲಿ ಸಾವಿನ ಸಂಖ್ಯೆ 38 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ‌. ಈ ಮೂಲಕ…

ಕಂಟೈನ್ಮೆಂಟ್ ಪ್ರದೇಶ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ

ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು…

ಸರ್ಕಾರದ ರೈತ ವಿರೋಧಿ ನೀತಿ ಕುರಿತು ರೈತ ಸಂಘದಿಂದ ಜಾಗೃತಿ

ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 88…