ಉತ್ತರಪ್ರಭ ಸುದ್ದಿ

ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಜಿಟಿಜಿಟಿ ಮಳೆಯಾಗಲಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು – ಸಿಡಿಲು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗುವ ಸಾಧ್ಯತೆಗಳಿವೆ. ಇತ್ತ ರಾಜ್ಯದ ಬಹುತೇಕ ನದಿಗಳು, ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದು, ನೀರು ಹರಿಯುತ್ತಿದೆ. ಇತ್ತ ನಿರಂತರ ಮಳೆ ಹಿನ್ನೆಲೆ ಕೃಷಿ ಭೂಮಿಯಲ್ಲಿ ನೀರು ಶೇಖರಣೆಯಾಗುತ್ತಿರುವ ಕಾರಣ ರೈತರು ಸಂಕಷ್ಟದಲ್ಲಿ ಸಿಲುಕಿದ್ದು, ಬೆಳೆದ ಬೆಳೆಗಳು ನೀರು ಪಾಲಾಗಿವೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Leave a Reply

Your email address will not be published. Required fields are marked *

You May Also Like

ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಹಿಂಪಡೆದ ಆಯೋಗ!

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ವಿಶಾಖಪಟ್ಟಣ ಘಟನೆ: ಕನ್ನಡಿಗರಿಗಾಗಿ ಸಹಾಯವಾಣಿ

ವಿಶಾಖಪಟ್ಟಣದಲ್ಲಿ ಸಂಭವಿಸಿದ ವಿಷಾನೀಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.

ಅರಳದಿನ್ನಿ : ಮಹಿಳಾ ಶೌಚಾಲಯ ಗೋಡೆ ಎತ್ತರಕ್ಕೆ ಆಗ್ರಹ

ಆಲಮಟ್ಟಿ : ಸಮೀಪದ ಅರಳದಿನ್ನಿ ಗ್ರಾಮದಲ್ಲಿನ ಸಾರ್ವಜನಿಕ ಮಹಿಳಾ ಶೌಚಾಲಯದ ಗೋಡೆಯನ್ನು ಎತ್ತರಿಸಬೇಕು ಹಾಗು ಹೊಸದೊಂದು…

ಗುಣಮುಖರಾಗಿ ಆಸ್ಪತ್ರೆಯಿಂದ ತೆರಳಿದ್ದ ವ್ಯಕ್ತಿಯಲ್ಲಿ ಕಂಡು ಬಂದ ಕೊರೊನಾ!

ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದ ವೃದ್ಧರೊಬ್ಬರಲ್ಲಿ ಮತ್ತೆ ಕೊರೊನಾ ವೈರಸ್ ಕಂಡು ಬಂದಿದೆ. 60…