ಉತ್ತರಪ್ರಭ ಸುದ್ದಿ

ಗದಗ: ಕನ್ನಡ ಸಾಹಿತ್ಯ ಪರಿಷತ್ ಗದಗ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೆನ್ನೆ (ಭಾನುವಾರ ದಿನಾಂಕ 21-11-2021) ರಂದು ನಡೆದ ಮತದಾನ, ಜಿಲ್ಲೆಯ 10 ಮತಗಟ್ಟೆಗಳಲ್ಲಿ 4052 ಮತದಾರರು ತಮ್ಮ ಮತ ಚಲಾಯಿಸಿದ್ದು, ಅದರಲ್ಲಿ 28 ಮತಗಳು ತಿರಸ್ಕೃತಗೊಂಡಿವೆ. ಶೇ.67ರಷ್ಟು ಮತದಾನ ನಡೆದಿದೆ ಎಂದು ಚುನಾವಣಾಧಿಕಾರಿ ಕಿಶನ್ ಕಲಾಲ್ ಅವರು ಘೋಷಿಸಿದ್ದಾರೆ.

ಈ ಚುಣಾವಣಾ ಸ್ಪರ್ಧೆಯಲ್ಲಿ ಇದೆ ಮೊದಲ ಬಾರಿಗೆ ಒಟ್ಟು 2231 ಮತಗಳನ್ನು ಪಡೆಯುವದರ ಮುಲಕ ಗದಗ ಜಿಲ್ಲೆಯ ನರಗುಂದ, ನರೇಗಲ್ , ಲಕ್ಷ್ಮೇಶ್ವರ, ರೋಣ, ಗಜೇಂದ್ರಗಡ, ಮುಂಡರಗಿಯಲ್ಲಿ ಕೊನೆಯ ಹಂತದವರೆಗೂ ಮುನ್ನಡೆ ಕಾಯ್ದುಕೊಂಡಿದ್ದ  ವಿವೇಕಾನಂದಗೌಡ  ಪಾಟೀಲರು, ಹೊಳೆಆಲೂರ, ಶಿರಹಟ್ಟಿಯಲ್ಲಿ ಅಲ್ಪ ಹಿನ್ನಡೆ ಅನುಭವಿಸಿ, ಕ ಸಾ ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಒಟ್ಟು ಮತ ಪಡೆದವರ ವಿವರ:

  • ವಿವೇಕಾನಂದಗೌಡ ಪಾಟೀಲ್ – 2231
  • ಡಾ.ಶರಣು ಗೋಗೇರಿ – 1666
  • ಡಾ.ಸಂಗಮೇಶ ತಮ್ಮನಗೌಡರ – 67
  • ಐ.ಕೆ.ಕಮ್ಮಾರ  – 60
ವಿವೇಕಾನಂದಗೌಡ ಪಾಟೀಲ
ನೂತನ ಅಧ್ಯಕ್ಷ, ಗದಗ ಜಿಲ್ಲಾ ಕಸಾಪ
ಇಡೀ ಜಿಲ್ಲೆಯ ಸಾಂಸ್ಕೃತಿಕ ಲೋಕದ ಗೆಲುವು ಇದಾಗಿದೆ. ಜಿಲ್ಲೆಯ ಎಲ್ಲಾ ಸಾಹಿತಿಗಳು, ಗುರು, ಹಿರಿಯರು ಬಹಿರಂಗವಾಗಿ ಮತ ಯಾಚಿಸಿದ್ದು ನನ್ನ ಗೆಲುವಿಗೆ ಪ್ರಮುಖ ಕಾರಣ. ಜಾತ್ಯತೀತ, ಪಕ್ಷಾತೀತ, ಧರ್ಮಾತೀತ ವಿಜಯ ಇದಾಗಿದೆ. ಕಳೆದ ವರ್ಷದಿಂದ ಅನೇಕ ಹಿರಿಯ ಮನಸುಗಳ ಹಗಲಿರುಳು ಹೋರಾಟಕ್ಕೆ ಸಂದ ಜಯ ಇದಾಗಿದೆ. ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೆ, ಸಾಹಿತಿಗಳಿಗೆ, ಕಲಾವಿದರಿಗೆ ಮತ್ತು ಮಾಧ್ಯಮ ಸ್ನೇಹಿತರಿಗೆ ಋಣಿಯಾಗಿದ್ದೆನೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ರೂಪಿಸಲಾಗುವುದು.

Leave a Reply

Your email address will not be published. Required fields are marked *

You May Also Like

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…

ಚಿತ್ರಮಂದಿರಗಳಿಗೆ ನಿರ್ಬಂಧ ಬೇಡ : ಪುನೀತ್ ಮನವಿ

ಚಲನಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬಿಸಿಯೂಟದ ಬದಲು ಅಹಾರ ನೀಡಿ : ಹೈಕೋರ್ಟ್ ಸೂಚನೆ

ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.