ಉತ್ತರಪ್ರಭ ಸುದ್ದಿ

ಗದಗ: ಕನ್ನಡ ಸಾಹಿತ್ಯ ಪರಿಷತ್ ಗದಗ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೆನ್ನೆ (ಭಾನುವಾರ ದಿನಾಂಕ 21-11-2021) ರಂದು ನಡೆದ ಮತದಾನ, ಜಿಲ್ಲೆಯ 10 ಮತಗಟ್ಟೆಗಳಲ್ಲಿ 4052 ಮತದಾರರು ತಮ್ಮ ಮತ ಚಲಾಯಿಸಿದ್ದು, ಅದರಲ್ಲಿ 28 ಮತಗಳು ತಿರಸ್ಕೃತಗೊಂಡಿವೆ. ಶೇ.67ರಷ್ಟು ಮತದಾನ ನಡೆದಿದೆ ಎಂದು ಚುನಾವಣಾಧಿಕಾರಿ ಕಿಶನ್ ಕಲಾಲ್ ಅವರು ಘೋಷಿಸಿದ್ದಾರೆ.

ಈ ಚುಣಾವಣಾ ಸ್ಪರ್ಧೆಯಲ್ಲಿ ಇದೆ ಮೊದಲ ಬಾರಿಗೆ ಒಟ್ಟು 2231 ಮತಗಳನ್ನು ಪಡೆಯುವದರ ಮುಲಕ ಗದಗ ಜಿಲ್ಲೆಯ ನರಗುಂದ, ನರೇಗಲ್ , ಲಕ್ಷ್ಮೇಶ್ವರ, ರೋಣ, ಗಜೇಂದ್ರಗಡ, ಮುಂಡರಗಿಯಲ್ಲಿ ಕೊನೆಯ ಹಂತದವರೆಗೂ ಮುನ್ನಡೆ ಕಾಯ್ದುಕೊಂಡಿದ್ದ  ವಿವೇಕಾನಂದಗೌಡ  ಪಾಟೀಲರು, ಹೊಳೆಆಲೂರ, ಶಿರಹಟ್ಟಿಯಲ್ಲಿ ಅಲ್ಪ ಹಿನ್ನಡೆ ಅನುಭವಿಸಿ, ಕ ಸಾ ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಒಟ್ಟು ಮತ ಪಡೆದವರ ವಿವರ:

  • ವಿವೇಕಾನಂದಗೌಡ ಪಾಟೀಲ್ – 2231
  • ಡಾ.ಶರಣು ಗೋಗೇರಿ – 1666
  • ಡಾ.ಸಂಗಮೇಶ ತಮ್ಮನಗೌಡರ – 67
  • ಐ.ಕೆ.ಕಮ್ಮಾರ  – 60
ವಿವೇಕಾನಂದಗೌಡ ಪಾಟೀಲ
ನೂತನ ಅಧ್ಯಕ್ಷ, ಗದಗ ಜಿಲ್ಲಾ ಕಸಾಪ
ಇಡೀ ಜಿಲ್ಲೆಯ ಸಾಂಸ್ಕೃತಿಕ ಲೋಕದ ಗೆಲುವು ಇದಾಗಿದೆ. ಜಿಲ್ಲೆಯ ಎಲ್ಲಾ ಸಾಹಿತಿಗಳು, ಗುರು, ಹಿರಿಯರು ಬಹಿರಂಗವಾಗಿ ಮತ ಯಾಚಿಸಿದ್ದು ನನ್ನ ಗೆಲುವಿಗೆ ಪ್ರಮುಖ ಕಾರಣ. ಜಾತ್ಯತೀತ, ಪಕ್ಷಾತೀತ, ಧರ್ಮಾತೀತ ವಿಜಯ ಇದಾಗಿದೆ. ಕಳೆದ ವರ್ಷದಿಂದ ಅನೇಕ ಹಿರಿಯ ಮನಸುಗಳ ಹಗಲಿರುಳು ಹೋರಾಟಕ್ಕೆ ಸಂದ ಜಯ ಇದಾಗಿದೆ. ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೆ, ಸಾಹಿತಿಗಳಿಗೆ, ಕಲಾವಿದರಿಗೆ ಮತ್ತು ಮಾಧ್ಯಮ ಸ್ನೇಹಿತರಿಗೆ ಋಣಿಯಾಗಿದ್ದೆನೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ರೂಪಿಸಲಾಗುವುದು.

Leave a Reply

Your email address will not be published. Required fields are marked *

You May Also Like

ಗ್ರಾಪಂ ಮಾಜಿ ಅಧ್ಯಕ್ಷನ ದರ್ಪ!: ಮರಳು ಟಿಪ್ಪರ್ ನಿಧಾನವಾಗಿ ಓಡಿಸಿ ಅಂದಿದ್ದಕ್ಕೆ ಹಲ್ಲೆ ಮಾಡಿದ ಆರೋಪ

ಹೇಳೋದು ವೇದಾಂತ, ತಿನ್ನೋದು ಬದನೆಕಾಯಿ ಎನ್ನುತ್ತಾರಲ್ಲ, ಆ ರೀತಿಯ ಕಥೆಯಿದು. ಇಲ್ಲೊಬ್ಬ ವ್ಯಕ್ತಿ ಊರಿನ ಮುಖಂಡ. ಪ್ರತಿ ದಿನ ನಾಲ್ಕಾರು ಜನಕ್ಕೆ ಬುದ್ಧಿ ಹೇಳುತ್ತಿದ್ದ. ಸದ್ಯ ಈ ವ್ಯಕ್ತಿಯೇ ಕುಟುಂಬವೊಂದರ ಮೇಲೆ ದರ್ಪ ಮೆರೆದಿದ್ದಾನೆ.

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

1xbet вход: Актуальное Зеркало 1хбет Денга

Онлайн Казино 1xbet официальному Сайт Зеркало: Регистрация И Вход, Скачать 1хбет Что…

ನಮ್ಮದು ಬೆಂಕಿ ಆರಿಸುವ ಸಂಸ್ಕೃತಿ

ಸಮಾಜವನ್ನು ಒಡೆಯುವ ಸಂಸ್ಕೃತಿ ತಮ್ಮದಲ್ಲ. ನಾವು ಬೆಂಕಿ ಹಚ್ಚುವವರಲ್ಲ. ಹಚ್ಚಿದ ಬೆಂಕಿಯನ್ನು ಆರಿಸುವವರು ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.