ಉತ್ತರಪ್ರಭ ಸುದ್ದಿ

ನರೆಗಲ್: ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಹಾಲಕೆರೆ ಗ್ರಾಮದ ನಡೆದಾಡುವ ದೇವರು ಅಭಿನವ ಅನ್ನದಾನ ಶ್ರೀ ಗಳು (85) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಶ್ರೀಗಳ ಅಗಲಿಕೆಯಿಂದ ಅಪಾರ ಭಕ್ತ ಸಮೂಹ ಶೋಕ ಸಾಗರದಲ್ಲಿ ಮುಳುಗಿದೆ, ತ್ರಿವಿಧ ದಾಸೋಹದ ಮೂಲಕ ಬೆಳಕಾಗಿ ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಲವಾರು ಶಾಖಾಮಠವನ್ನು ಹೋಂದಿದ ಹಾಗೂ ಅನ್ನ ಅಕ್ಷರ ನೀಡಿ ಸಾವಿರಾರು ಮಕ್ಕಳ ಬಾಳಿಗೆ ಬೆಳೆಕಾಗಿ, ನಡೆದಾಡುವ ದೇವರು ಲಕ್ಷಾಂತರ ಭಕ್ತರ ಆರಾಧ್ಯ ದೇವರು ಶಿವಯೋಗ ಮಂದಿರದ ಅಧ್ಯಕ್ಷರಾದ ಹಾಗೂ ಹಾಲಕೆರೆ ಸಿಂಹಾಸನಾಧೀಶ್ವರ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಕೊಟ್ಟುರುಸ್ವಾಮಿ ಸಂಸ್ಥಾನಮಠ ಹೊಸಪೇಟೆ, ಬಳ್ಳಾರಿ, ಹಂಪಿ. ಅಧ್ಯಕ್ಷರು ಲಕ್ಷಾಂತರ ಭಕ್ತ ಸಮೂಹವನ್ನು ಇಂದು ಬೆಳಿಗ್ಗೆ 5:30 ಲಿಂಗೈಕ್ಯರಾದರರು.

ಲಿಂಗೈಕ್ಯ ಶ್ರೀ ಗಳ ಅಗಲಿಕೆ ರೋಣ ಕ್ಷೇತ್ರದ ಶಾಸಕ ಕಳಕಪ್ಪ ಜಿ,ಬಂಡಿ ಹಾಗೂ ಮಾಜಿ ಶಾಸಕ ಜಿ,ಎಸ್,ಪಾಟೀಲ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದರು.

ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ನರೆಗಲ್ ಹೋಬಳಿಯ ಎಲ್ಲಾ ಗ್ರಾಮದಲ್ಲಿ ಶೋಕ ಮಡುಗಟ್ಡಿದ್ದು ಕೆಲಸ ಕಾರ್ಯಗಳನ್ನು ಹಾಗೂ ಅಂಗಡಿಗಳನ್ನು ಸ್ವಯಂ ಪ್ರೇರಿತರಾಗಿ ಬಂದು ಮಾಡುವ ಮೂಲಕ ಗೌರವ ಸೂಚಿಸಿದರು.ಮಂಗಳವಾರ ಮಧ್ಯಾಹ್ನ 2 ಗಂಟೆಗೆ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಭಕ್ತರು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಹೆಚ್ಚಿದ ಕೊರೊನಾ ಆತಂಕ – ವಿದ್ಯಾಗಮಕ್ಕೆ

ಬೆಂಗಳೂರು : ಹಲವು ತೊಂದರೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾಗಮಕ್ಕೆ ಬ್ರೇಕ್ ಹಾಕಿ ಆದೇಶ ಹೊರಡಿಸಿದೆ.

ಲಕ್ಷ್ಮೇಶ್ವರ: ಕಾಮಗಾರಿ ಮುಗಿದರೂ ಹಸ್ತಾಂತರವಾಗದ ಅಂಗನವಾಡಿ

ಬಡ ಮಕ್ಕಳ ಬದುಕಿನಲ್ಲಿ ಶಿಕ್ಷಣ ದಿವಿಗೆಯನ್ನು ಹಚ್ಚಬೇಕಾದ ಅಂಗನವಾಡಿ ಕೇಂದ್ರ ಇದ್ದು ಇಲ್ಲದಂತಾಗಿ ತಾಲೂಕಿನ ಆದರಹಳ್ಳಿ ಗ್ರಾಮದ 2ನೇ ವಾರ್ಡಿನ ಅಂಗನವಾಡಿ ಕೇಂದ್ರ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣ ಕೊಡುತ್ತಾ ಬಂದಿದ್ದಾರೆ. ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗಿ ಸುಮಾರು ವರ್ಷಗಳು ಕಳೆದರೂ ಇದುವರೆಗೆ ಅಂಗನವಾಡಿ ಕೇಂದ್ರವನ್ನು ಗುತ್ತಿಗೆದಾರರು ಹಸ್ತಾಂತರ ಮಾಡಿಲ್ಲ ಹಾಗೂ ಗ್ರಾ.ಪಂ.ಚುನಾವಣೆ ನಡೆದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೂ ಆಗಿದೆ. ಆದರೆ ಅಂಗನವಾಡಿ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ ಎಂದು 2 ವಾರ್ಡಿನ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೋರ ಹಾಕುತ್ತಿದ್ದಾರೆ.

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ : 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Two Day Heavy Rains in the State: Yellow Alert in 6 Districts

ಇಂಧನ ಬೆಲೆ ಏರಿಕೆ ಖಂಡಿಸಿ ಕರವೇಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ದೇಶದಲ್ಲಿ ಇಂಧನ ಬೆಲೆ, ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ, ಶೀಘ್ರವಾಗಿ ಬೆಲೆ ಏರಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ) ಬಣದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.