ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆಯಾಗಿದ್ದು. ಪ್ರತಿಷ್ಠಿತ ಬಹುರಾಷ್ಟಿಯ ಟಿಸಿಎಸ್ ಕಂಪನಿಯು ಆನ್ ಲೈನ್ ಮುಖಾಂತರ 07ನೇ ಸೇಮಿಸ್ಟರನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ನಡೆಸಿ ಕಂಪ್ಯೂಟರ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ನವೀನ ದಾಸಪಳ್ಳಿ, ಸುಜಾತಾ ಅಸುಂಡಿ ಇಲೇಕ್ಟಾನಿಕ್ಸ್ ಮತ್ತು ಕಮ್ಯೂನಿಕೆಶನ್ ವಿಭಾಗದ ಪೂರ್ಣಿಮಾ ನಾಯ್ಕ, ಐಶ್ರ‍್ಯ ಜಿ ಎಸ್, ಪ್ರತೀಕ ಜೋಗಿನ, ರಷ್ಮಿ ಜೋಶಿ ಮೆಕ್ಯಾನಿಕಲ್ ಇಂಜಿನೀಯರಿಂಗ್ ವಿಭಾಗದ ಇಶಾನ ಅಹ್ಮದ ದುಂದೂರ ಅವರನ್ನು ಆಯ್ಕೆಮಾಡಿದ್ದಾರೆ.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರಾದ ಡಾ.ಎಮ್.ಎಮ್ ಅವಟಿ,ಉದ್ಯೋಗ ಮತ್ತು ತರಬೇತಿ ಅಧಿಕಾರಿಗಳಾದ ಪ್ರೋ.ವಿಜಯಕುಮಾರ ಮಾಲಗಿತ್ತಿ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿ,ಶುಭಹಾರೈಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಓದಿ: ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 12 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೊರೋನಾ ಸೋಂಕಿಗೆ ಸಂಬಂಧಪಟ್ಟಂತೆ ಇವತ್ತಿನ ಅಂಕಿಸಂಖ್ಯೆಯನ್ನು ಗಮನಿಸಿದರೆ ತುಸು ಸಮಾಧಾನವೇ ಸರಿ.

ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ

ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ/ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.