ಉತ್ತರಪ್ರಭ ಸುದ್ದಿ

ಗದಗ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಗದಗ ವತಿಯಿಂದ ನವಂಬರ್ 28ರಂದು ರವಿವಾರ ಸಾಯಂಕಾಲ 5:30ಘಂಟೆಗೆ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನ, .ಎಸ್. ಎಸ್ ಕಾಮರ್ಸ್ ಕಾಲೇಜ್ ಹತ್ತಿರ ಗದಗದಲ್ಲಿ “,ಜಾನಪದ ಸಂಭ್ರಮ ಹಾಗೂ ಕಲಾವಿದರಿಗೆ ಪುರಸ್ಕಾರಸಮಾರಂಭ ಏರ್ಪಡಿಸಲಾಗಿದೆ ಕಾರ್ಯಕ್ರಮವನ್ನು ಡಾ. ಎಸ್.ಬಾಲಾಜಿ, ರಾಜ್ಯಾಧ್ಯಕ್ಷರು ಕನ್ನಡ ಜಾನಪದ ಪರಿಷತ್ ಬೆಂಗಳೂರು ಉದ್ಘಾಟಿಸುವರು. ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ. ಶಾಂತಕುಮಾರ್ ಬಿ ಭಜಂತ್ರಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರವಿಕಾಂತ್ ಅಂಗಡಿ ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಗದಗ, ಡಾ. ಬಿ ಹಿತ್ತಲಮನಿ, ಪ್ರಾಚಾರ್ಯರು ಪಿ ಪಿ ಜಿ ಶಿಕ್ಷಣ ಮಹಾವಿದ್ಯಾಲಯ ಗದಗ, ವಿಜಯ ಕಿರೇಸೂರ ಜಿಲ್ಲಾಧ್ಯಕ್ಷರು, ಚಿತ್ರ ಕಲಾ ಶಿಕ್ಷಕರ ಸಂಘ, ಗದಗ, ಪ್ರೊ. ರೇಖಾ ನೀರಲಗಿ, ಪ್ರೊ. ಶಕುಂತಲಾ..ಸಿಂಧೂರ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಬಸವರಾಜ ಈರಣ್ಣವರ, ಗೌಡಪ್ಪ.ಬಮ್ಮಪ್ಪಣ್ಣವರ, ಶರಣಪ್ಪ ಕುಬಸದ, ಸಂಗಮೇಶ ಹಾದಿಮನಿ ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಜಿಲ್ಲಾ ಘಟಕದ ವತಿಯಿಂದ ಸುರೇಶ್ ಬಣಗಾರ ಜನಪದ ಕಲಾವಿದರು ಮುಂಡರಗಿ, ಮಲ್ಲಪ್ಪ ಬಸಪ್ಪ ಹೊನಗಣ್ಣವರ, ಗೀ ಗೀ ಪದ ಕಲಾವಿದರು ಜಂತ್ಲಿಶಿರೂರ, ಕಲ್ಲಪ್ಪ ಬಣವಿ ಜನಪದ ಕಲಾವಿದರು ಲಕ್ಕುಂಡಿ ಇವರನ್ನು ಗೌರವಿಸಿ ಸನ್ಮಾನಿಸಲಾಗುವುದು. ಸಣ್ಣಪ್ಪ ಧರಣಿ ಹಾಗೂ ತಂಡದವರು ಜಂತ್ಲಿಶಿರೂರ, ಕರ್ನಾಟಕ ಜಾನಪದ ಕಲಾತಂಡ ಮುಂಡರಗಿ, ರಮೇಶ್ ಹಕ್ಕಿ ಹಾಗೂ ಶರಣಪ್ಪ ಜಗ್ಗಲ್ ತಂಡ ಕೋಟುಮಚಗಿ, ಜ್ಞಾನ ಪರಂಪರೆ ಜನಪದ ಕಲಾತಂಡ ಲಕ್ಕುಂಡಿ, ಶ್ರೀ ಪುಟ್ಟರಾಜ ಕ್ರೀಡಾ ಮತ್ತು ಸಾಂಸ್ಕೃತಿಕ ತಂಡ ಅಸುಂಡಿಯವರಿಂದ ಹಾಗೂ ಜಾನಪದ ಕಲಾವಿದರಾದ ಶ್ರೀಮತಿ ಸಾವಿತ್ರಿ ಲಮಾಣಿ ಹಾಗೂ ಶಿಕ್ಷಕ ಕಲಾವಿದರಾದ ಡಿ.ಸಿ.ನದಾಫ ಅವರಿಂದ ಜನಪದ ಸಂಭ್ರಮ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾ ಕಜಾಪ ಕಾರ್ಯದರ್ಶಿ ಪ್ರೊ.ಎನ್.ಎನ್.ಕಿಂದ್ರಿ ಮತ್ತು ಜಿಲ್ಲಾ ಪತ್ರಿಕಾ ಕಾರ್ಯದರ್ಶಿ ಪ್ರೊ.ನಿಂಗಪ್ಪ.ಟಿ.ಪೂಜಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

1ನೇ ಮತ್ತು 20ನೇ ವಾರ್ಡ ಕಾಂಗ್ರೇಸ್ 31ನೇ ವಾರ್ಡ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 1, 20, 31ನೇ ವಾರ್ಡನ ಮತ ಎಣಿಕೆ ಮುಕ್ತಾಯವಾಗಿದ್ದು , 1ನೇ…

ಮೊಸಳೆ ಬಂತು.. ಮೊಸಳೆ..! ಹೊಳೆಯಾಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಪತ್ತೆ!

ಮಲಪ್ರಭಾ ನದಿಯಲ್ಲಿ ಮೊಸಳೆ ಪತ್ತೆಯಾಗಿದ್ದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಗದಗ ಜಿಲ್ಲೆ ರೊಣ ತಾಲೂಕಿನ ಹೊಳೆಆಲೂರ ಗ್ರಾಮದ ಮಲಪ್ರಭಾ ನದಿಯಲ್ಲಿ ಬುಧುವಾರ ಸಂಜೆ ಮೊಸಳೆ ಪ್ರತ್ಯಕ್ಷವಾಗಿಜe. ಮೊಸಳೆ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಶಾಲೆ ಹಾಗೂ ವಸತಿ ಶಾಲೆಗಳ ಮಕ್ಕಳ ಆರೋಗ್ಯದ ಕುರಿತು ಹೆಚ್ಚಿನ ನಿಗಾ ವಹಿಸಿ -ಜಿಲ್ಲಾಧಿಕಾರಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲೆಯಲ್ಲಿ ಶಾಲೆ ಹಾಗೂ ವಸತಿ ಶಾಲೆಗಳಲ್ಲಿರುವ ಮಕ್ಕಳ ಆರೋಗ್ಯದ ಕುರಿತು ಹೆಚ್ಚಿನ ನಿಗಾ…

ಗದಗ ಜಿಲ್ಲೆಯಲ್ಲಿಂದು 302 ಕೊರೊನಾ ಪಾಸಿಟಿವ್: ಐವರು ಮೃತ

ಗದಗ: ಜಿಲ್ಲೆಯಲ್ಲಿ ಇಂದು 307 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಒಟ್ಟು 22730 ಆಗಿದೆ. ಇದುವರೆಗೆ 372520 ಜನರು ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ 381761ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ 358843 ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾಗಿದ್ದು, 188 ಕೇಸ್ ಗಳ ವರದಿ ಬರಲು ಬಾಕಿ ಇದೆ. ಇಂದು ಐದು ಜನ ಸೇರಿ 236 ಜನರು ಈವರೆಗೆ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಇಂದು 405 ಜನರು ಸೇರಿ ಒಟ್ಟು 19598 ಜನ ಗುಣಮುಖರಾಗಿದ್ದಾರೆ. ಸದ್ಯ 2896 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ.