ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನಲ್ಲಿ 3 ಮತ್ತು   4ನೇ ಡಿಸೆಂಬರ್ 2021 ರಂದು ರಾಷ್ಟ್ರಮಟ್ಟದ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು. ಈ ಸ್ಪರ್ಧೆ ವಿಶೆಷವಾಗಿ 24 ತಾಸು ಕೊಡಿಂಗ್ ಮಾಡಿ ತಮ್ಮದೆ ಆದ ರೀತಿಯಲ್ಲಿ ಯಾರು ಕೊಡಿಂಗ್ ಮಾಡಿರುತ್ತಾರೋ ಅವರಿಗೆ ಬಹುಮಾನವನ್ನು ನೀಡಲಾಗುತ್ತದೆ. ರಾಷ್ಟ್ರಮಟ್ಟದ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆಯನ್ನು ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ ವಿಭಾಗ , ಇನ್ನೋವೇಶನ್ ಸೆಲ್ ಮತ್ತು ಹುಬ್ಬಳ್ಳಿಯ ನೆಕ್ಸಎನ್ಸಿಯಲ್ ಸೋಲ್ಯುಸನ್ ಪಾರ್ ನೆಕ್ಷ್ಟ ಜೆನರೇಶನ್, ಹುಬ್ಬಳ್ಳಿ ಇವರುಗಳ ಸಹಯೋಗದೊಂದಗೆ ನಡೆಯಲ್ಲಿದ್ದು, ಆಸಕ್ತ ಇಂಜಿನೀಯರಿಂಗ್ ಕಾಲೇಜುಗಳ  ಎಲ್ಲ ವಿಭಾಗದ ವಿದ್ಯಾರ್ಥಿಗಳು , ಡಿಪ್ಲೋಮಾ ಕಾಲೇಜಿನ  ಎಲ್ಲ ವಿಭಾಗದ ವಿದ್ಯಾರ್ಥಿಗಳು ಮತ್ತು ಬಿಸಿಎ,ಎಮ್ ಸಿ ಎ ವಿದ್ಯಾರ್ಥಿಗಳು  ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಒಂದು ತಂಡಕ್ಕೆ 2-4 ವಿದ್ಯಾರ್ಥಿಗಳು ಮಾತ್ರ.

ಇದನ್ನೂ ಓದಿ:ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

 ವಿಜೇತ ತಂಡಕ್ಕೆ ಪ್ರಥಮ 20000=00, ದ್ವಿತೀಯ 15000=00 ಮತ್ತು ತೃತೀಯ 10000=00 ನಗದು ಬಹುಮಾನ ನೀಡಲಾಗುವುದು ಎಂದು ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಮಂಜುನಾಥ ಕಮ್ಮಾರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ : www.tce.ac.in  ಲಾಗಿನ್ ಆಗಿ  ನೊಂದಣಿ ಮಾಡಬಹುದು  ಮೋಬೈಲ್ ಸಂಖ್ಯೆ:8095101442 ಸಂಪರ್ಕಿಸಬಹುದು.

ನೊಂದಣಿಗಾಗಿ  ಕ್ಲಿಕ್ ಮಾಡಿ:

ಇದನ್ನೂ ಓದಿ: ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

Leave a Reply

Your email address will not be published. Required fields are marked *

You May Also Like

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲಕ್ಷ್ಮೇಶ್ವರದಲ್ಲಿ ಆಹಾರ ಕಿಟ್ ವಿತರಿಸಿದ ಶಾಸಕ ಲಮಾಣಿ

ಲಕ್ಷ್ಮೇಶ್ವರ: ಶಾಸಕ ರಾಮಣ್ಣ ಲಮಾಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರು ಬೇಗ ಗುಣಮುಖರಾಗಲೆಂದು ಪೌಷ್ಟಿಕ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಣೆ ಮಾಡಿದರು.

ಜೂ.14ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆ!

ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.