ಉತ್ತರಪ್ರಭ ಸುದ್ದಿ
ಗದಗ
: ದಿ 7-03-2013 ರಂದು ಚಿಕ್ಕಮಗಳೂರು, ಗದಗ – ಬೆಟಗೇರಿ, ಹೊಸಪೇಟೆ ಮತ್ತು ಶಿರಾ ನಗರಸಭೆಗಳು ಹಾಗೂ ಅಥಣಿ, ಅಣ್ಣಿಗೇರಿ ಮತ್ತು ಬಂಕಾಪುರ ಪುರಸಭೆಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲಾಗಿರುತ್ತದೆ. ಸದರಿ ನಗರ ಸ್ಥಳೀಯ ಸಂಸ್ಥೆಗಳ ಅವಧಿಯು 2019 ನೇ ಸಾಲಿನ ಮಾರ್ಚ್ ಮಾಹೆಯ ವಿವಿಧ ದಿನಾಂಕಗಳಲ್ಲಿ ಮುಕ್ತಾಯವಾಗಿರುತ್ತದೆ. ಸದರಿ 7 ನಗರ ಸ್ಥಳೀಯ ಸಂಸ್ಥೆಗಳಿಗೆ 2011ರ ಜನಗಣತಿಯಂತ ಸರ್ಕಾರವು ಕ್ಷೇತ್ರ ಪುನರ್ವಿಂಗಡಣೆ ಮಾಡಿ, ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಅಧಿಸೂಚಿಸಿ ರಾಜ್ಯಪತ್ರದಲ್ಲಿ ಪುಕಟಿಸಿದ. ಸರ್ಕಾರವು ನಿಗದಿಪಡಿಸಿದ ಕ್ಷೇತ್ರವಿಂಗಡಣ ಮತ್ತು ವಾರ್ಡುವಾರು ಮೀಸಲಾತಿ ಅಧಿಸೂಚನೆಗಳನ್ನು ಪ್ರಶ್ನಿಸಿ ಮಾನ್ಯ ಉಚ್ಚನ್ಯಾಯಾಲಯದ ವಿವಿಧ ಪೀಠಗಳಲ್ಲಿ ಪಕರಣಗಳು ದಾಖಲಾಗಿರುತ್ತವೆ. ಪ್ರಸ್ತುತ ಬೆಂಗಳೂರು, ಮಾನ್ಯ ಉಚ್ಚ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ದಾಖಲು ಮಾಡಿಕೊಂಡಿದ್ದ ಪ್ರಕರಣ ಸಂಖ್ಯೆ: 14925/2020 (SUO – MOTU) ರಲ್ಲಿ ನೀಡಲಾದ ಮಧ್ಯಂತರ ಆದೇಶದಂತೆ ಸರ್ಕಾರವು ಪರಿಷ್ಕೃತ ವಾರ್ಡುವಾರು ಮೀಸಲಾತಿಯನ್ನು ಆಯೋಗಕ್ಕೆ ದಿನಾಂಕ: 26.11.2021 ರೊಳಗೆ ಒದಗಿಸುವಂತೆ ಹಾಗೂ ದಿನಾಂಕ: 30.12.2021 ರ ಒಳಗೆ ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವು ಆದೇಶಿಸಿದೆ. ಅದರಂತೆ, ಸರ್ಕಾರವು ವಾರ್ಡುವಾರು ಅಂತಿಮ ಮೀಸಲಾತಿಯನ್ನು ನಿಗದಪಡಿಸಿ ಅಧಿಸೂಚಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.ಸದರಿ ಒಟ್ಟು 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದು, ವಾರ್ಡುವಾರು ಮತದಾರರ ಪಟ್ಟಿಯನ್ನು ಸಂಬAಧಪಟ್ಟ ಜಿಲ್ಲಾಧಿಕಾರಿಗಳು ಈಗಾಗಲೇ ಪ್ರಕಟಪಡಿಸಿರುತ್ತಾರೆ. ಅಂತಿಮ ವಾರ್ಡುವಾರು ಮೀಸಲಾತಿಯನ್ನು ಆಯೋಗದ ವೆಬ್‌ಸೈಟ್ www.karsec.gov.in ಪ್ರಚುರ ಪಡಿಸಲಾಗಿದೆ.

ಚುನಾವಣಾ ವೇಳಾಪಟ್ಟಿ:

1) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನ 08.12.2021 (ಬುಧವಾರ),
2) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ 15.12.2021 (ಬುಧವಾರ),
3) ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ 16.12.2021 (ಗುರುವಾರ),
4) ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ 18.12.2021 (ಶನಿವಾರ),
5) ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ 7.00 ಗಂಟೆಯಿAದ ಸಾಯಂಕಾಲ 5.00 ಗಂಟೆಯವರೆಗೆ), 27.12.2021 (ಸೋಮವಾರ),
6) ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ 7.00 ಗಂಟೆಯಿAದ ಸಾಯಂಕಾಲ 5.00 ಗಂಟೆವರೆಗೆ) 29.12.2021 (ಬುಧವಾರ),
7) ಮತಗಳ ಎಣಿಕೆಯ ದಿನಾಂಕ ಮತ್ತು ದಿನ (ಬೆಳಿಗ್ಗೆ 8.00 ಗಂಟೆಯಿAದ) (ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ) 30.12.2021 (ಗುರುವಾರ),
8) ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ 30.12.2021 (ಗುರುವಾರ).
ಸದಾಚಾರ ಸಂಹಿತೆಯು ದಿನಾಂಕ: 08.12.2021 ರಿಂದ ದಿನಾಂಕ: 30.12.2021 ರವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮತ್ತು ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ.

Leave a Reply

Your email address will not be published. Required fields are marked *

You May Also Like

ಗದಗ ನಗರ ಸಭೆ ಚುನಾವಣೆ: ವ್ಹಿಲ್ ಚೆರ್ ನಲ್ಲಿ ಬಂದು ಮತಚಲಾಯಿಸಿದ ವೃದ್ದರು

ಗದಗ: ನಗರಸಭೆ ಯ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯ…

ಎಸ್‌ಡಿಎಂಸಿ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು : ಪಿ.ಸಿ.ಜೋಗರೆಡ್ಡಿ

ಶಾಲಾ ಮೇಲುಸ್ತುವಾರಿ ಸಮಿತಿ ಆಡಳಿತದಲ್ಲಿ ಶಾಲೆಯ ಅಭಿವೃದ್ಧಿ ಅಡಗಿದೆ ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಮದ್ಯೆ ಎಸ್‌ಡಿಎಂಸಿ ಸೇತುವೆಯಾಗಿಕಾರ್ಯ ನಿರ್ವಹಿಸಬೇಕಿದೆ ಎಂದು ಸಿಆರ್‌ಪಿ ಪಿ.ಸಿ.ಜೋಗರೆಡ್ಡಿ ಹೇಳಿದರು.

ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು

ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.

ಶೀಘ್ರವಾಗಿ ಎ.ಪಿ.ಎಂ.ಸಿ ಮಾರುಕಟ್ಟೆ ಪ್ರಾರಂಭಿಸಿಲು: ಮನವಿ

ಶಿರಹಟ್ಟಿ ಪಟ್ಟಣವು ತಾಲ್ಲೂಕು ಕೇಂದ್ರವಾಗಿದ್ದು, ಸ್ಥಳೀಯವಾಗಿ ಎಪಿಎಂಸಿ ಸ್ಥಾಪನೆ ಮಾಡಬೇಕೆಂದು ಮಂಗಳವಾರ ತಹಶಿಲ್ದಾರ ಮೂಲಕ ಕರ್ನಾಟಕ ಪ್ರಜಾಪರ ವೇದಿಕೆ ತಾಲೂಕ ಘಟಕದ ವತಿಯಿಂದ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.