ಉತ್ತರಪ್ರಭ ಸುದ್ದಿ

ಗೋನಾಳ ಗ್ರಾಮದಲ್ಲಿ ಆರೋಪಿ ರಮೇಶ ದುಂಡಪ್ಪ ತೇಲಿ ಇವನು ಹೆಂಡತಿ ಮೇಲೆ ಸಂಶಯ ಮಾಡುತ್ತಾ ಬಂದು ದಿನಾಂಕ: 08-05-2019 ರಂದು ರಾತ್ರಿ 09-30 ಗಂಟೆಯ ಸುಮಾರಿಗೆ ಹೆಂಡರಿಯೊoದಿಗೆ ಬಾಯಿ ಮಾತಿನ ಜಗಳ ಮಾಡಿದಾಗ, ಅವಳು ಏನು ಮಾಡಿಕೊತೀ ಮಾಡಕೋ ಅಂತಾ ಅಂದಿದ್ದಕ್ಕೆ ಅವಳು ಮಲಗಿದ ಮೇಲೆ ಕೊಡ್ಲಿಯಿಂದ ಹೊಡೆದು ಕೊಲೆ ಮಾಡಿದರಾಯಿತು ಅಂತಾ ಯೋಚಿಸಿ ಅವಳು ನಿದ್ದೆ ಮಾಡುತ್ತಿದ್ದನ್ನು ಖಾತ್ರಿ ಮಾಡಿಕೊಂಡು ದಿನಾಂಕ: 09-05-2019 ರ ಬೆಳಗಿನ ಜಾವಾ 03-00 ಗಂಟೆಗೆ ಮನೆಯಲ್ಲಿ ಇದ್ದ ಕೊಡ್ಲಿ ತೆಗೆದುಕೊಂಡು ಅದರ ತುಂಬಿನಿoದ ತನ್ನ ಹೆಂಡತಿಯ ತಲೆಗೆ ಹೊಡೆದು ಭಾರೀ ರಕ್ತಗಾಯ ಮಾಡಿ ಕೊಲೆ ಮಾಡಿ ನಂತರ ತನ್ನ ಆರು ತಿಂಗಳ ಮಗನ ಕುತ್ತಿಗೆಯ ಮೇಲೆ ಕಾಲಿಟ್ಟು ತುಳಿದು ಉಸಿರುಗಟ್ಟಿಸಿ ಕೊಲೆ ಮಾಡಿದ ಅಪರಾಧ ಕುರಿತು ಕಲಂ: 302 ಭಾ.ದಂ.ಸo ರಡಿಯಲ್ಲಿ ಅಪರಾಧ ಮಾಡಿದ್ದಕ್ಕೆ ಶಿರಹಟ್ಟಿ, ಸಿ.ಪಿ.ಐ ಬಾಲಚಂದ್ರ ಡಿ. ಲಕ್ಕಂ ಇವರು ತನಿಖೆ ಮಾಡಿ ಆರೋಪಿ ವಿರುದ್ಧ ಆರೋಪಣ ಪತ್ರವನ್ನು ನ್ಯಾಯಾಲಯದಲ್ಲಿ ಸಲ್ಲಿಸಲಾಗಿತ್ತು. ಸಾಕ್ಷಿ ವಿಚಾರಣೆ ನಡೆಸಿದ ಗದಗಿನ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಎಸ್ ಮಹಾಲಕ್ಷ್ಮಿ ನೇರಳೆ ಇವರು ಸದರ ಪ್ರಕರಣದಲ್ಲಿ ಆರೋಪ ರುಜುವಾತು ಆಗಿದ್ದರಿಂದ ಆರೋಪಿತನಾದ ರಮೇಶ ದುಂಡಪ್ಪ ತೇಲಿ ಇತನಿಗೆ ದಿನಾಂಕ: 24-11-2021 ರಂದು ಭಾ.ದಂ.ಸo 302 ರಡಿ ಜೀವಾವಧಿ ಶಿಕ್ಷೆ ಹಾಗೂ 10,000 / – ರೂ ದಂಡ, ದಂಡ ತುಂಬಲು ತಪ್ಪಿದ್ದಲ್ಲಿ 06 ತಿಂಗಳ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಶ್ರೀಮತಿ ಸವಿತಾ ಎಂ ಶಿಗ್ಲಿ ಸರಕಾರಿ ಅಭಿಯೋಜಕರು, ಗದಗ ಇವರು ವಾದವನ್ನು ಮಂಡಿಸಿದರು.

Leave a Reply

Your email address will not be published. Required fields are marked *

You May Also Like

ಪಂಚಮಸಾಲಿ 2ಎಗೆ ಸೇರಿಸಿದರೆ ಇತರೆ ಜಾತಿಗಳ ವಿರೋಧವೇಕೆ?

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿ ಸೌಲಭ್ಯ ನೀಡುವುದಕ್ಕೆ ಇದೇ ಪ್ರವರ್ಗದಡಿ ಬರುವ ಇತರೆ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಶಾಸಕ ಬಂಡಿ ಅವ್ರಿಗೆ ಯಾವುದೇ ಅಸಮಾಧಾನ ಇಲ್ಲಂತ, ಸಚಿವ ಸ್ಥಾನ ಕೊಟ್ರ ಬ್ಯಾಡನಲ್ಲಂತ!

ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ…

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ!

ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢವಾಗಿದೆ. ಪಿ-1307 ಕೇಸ್ ಪತ್ತೆಯಾಗಿದ್ದು 49 ವರ್ಷದ ಮಹಿಳೆ ಮುಂಬೈನಿಂದ ಇತ್ತಿಚೆಗಷ್ಟೆ ಬಂದಿದ್ದಳು ಎನ್ನಲಾಗಿದ್ದು

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.