ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

ಗದಗ ಜಿಲ್ಲೆಯಲ್ಲಿ ಭಾಜಪದ ವತಿಯಿಂದ ಆಯೋಜಿಸಿದ್ದ ಚುನಾವಣಾ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

7 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿ ಕೆಲವೇ ದಿನಗಳ ನಂತರ ಅದನ್ನು 4 ಕೆಜಿಗೆ ಇಳಿಸಿದರು. 5 ವರ್ಷದ ಅವಧಿಯಲ್ಲಿ 3 ವರ್ಷ 4ಕೆಜಿ ಅಕ್ಕಿ ಮಾತ್ರ ನೀಡಿದ್ದಾರೆ. ಚುನಾವಣೆಗೆ ಒಂದು ವರ್ಷವಿದ್ದಾಗ ಪುನ: 7 ಕೆಜಿಗೆ ಏರಿಸಿದರು. ಕಾಂಗ್ರೆಸ್ ಸರ್ಕಾರ ಜನರಿಗೆ ಮನೆ ಹಾಗೂ ಅಕ್ಕಿ ನೀಡುವ ವಿಷಯದಲ್ಲಿ ಒಂದೇ ಧೋರಣೆಯನ್ನು ಅನುಸರಿಸಿದೆ. ಕಾಂಗ್ರೆಸ್ ಸರ್ಕಾರ ಮೊದಲು ಆಶ್ವಾಸನೆಗಳನ್ನು ನೀಡಿ ‘ಕೊಡ್ತೀವಿ’ ಅಂತಾರೆ, ನಂತರ ಅವುಗಳನ್ನು ತಾವು ಪೂರೈಸಲಾಗದೇ ‘ಕೊಡಿಸ್ತೀವಿ ಎನ್ನುತ್ತಾರೆ, ಕೊನೆಗೆ ತಾವು ಮಾಡಿದ ಪೊಳ್ಳು ಆಶ್ವಾಸನೆಗಳನ್ನು ಪೂರೈಸಲಾಗದೆ ‘ಕೊಡುವವರನ್ನು ತೋರಿಸ್ತೀವಿ’ ಅನ್ನುವ ಮೂಲಕ ಮುಂಬರುವ ಸರ್ಕಾರವನ್ನು ಬೆರಳು ಮಾಡಿ ತೋರಿಸುತ್ತಾರೆ. ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಸರಿಯಾದ ಜಾಗವನ್ನು ತೋರಿಸಬೇಕು ಎಂದು ಕರೆ ನೀಡಿದರು.

ಮಾತಿನ ಮಂಟಪ ಕಟ್ಟುವ ಕಾಂಗ್ರೆಸ್ :
ಸಿದ್ಧರಾಮಯ್ಯ ಅವರು ಬಿಜೆಪಿಯವರು ಜನರಿಗೆ ಒಂದು ಮನೆಯನ್ನಾದರೂ ಇದುವರೆಗೆ ನೀಡಿದ್ದಾರೆಯೇ ಎಂದು ಆರೋಪಿಸುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಚುನಾವಣೆಗೆ ಮೂರು ತಿಂಗಳಿದ್ದ ಸಂದರ್ಭದಲ್ಲಿ 15 ಲಕ್ಷ ಮನೆಗಳನ್ನು ನೀಡುತ್ತೇವೆ ಎಂದು ಘೋಷಣೆ ಮಾಡಿ ಒಂದು ಪೈಸೆಯನ್ನೂ ಯೋಜನೆಗೆ ನೀಡಲಿಲ್ಲ. ಮನೆ ನಿರ್ಮಾಣಕ್ಕೆ ಅನುದಾನ ನೀಡದೇ ಕಾಂಗ್ರೆಸ್ ಅವರು ಮಾತಿನ ಮಂಟಪ ಕಟ್ಟಬಹುದು ಆದರೆ ಜನರಿಗೆ ಮನೆಯನ್ನು ಕಟ್ಟಲು ಸಾಧ್ಯವಿಲ್ಲ. ಬಹುಶ: ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ಖಾತ್ರಿಯಿಂದಲೇ ಅಂತಹ ಘೋಷಣೆಯನ್ನು ಮಾಡಿದ್ದಿರಬಹುದು ಎಂದರು.

5 ಲಕ್ಷ ಮನೆಗಳ ನಿರ್ಮಾಣ :
ವಸತಿ ನಿರ್ಮಾಣ ಯೋಜನೆಗೆ ಸಮ್ಮಿಶ್ರ ಸರ್ಕಾರದಲ್ಲಿ ಸ್ವಲ್ಪ ಅನುದಾನ ಲಭಿಸಿತು ಹಾಗೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಒದಗಿಸಿ ಮನೆ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ನನ್ನ ಅವಧಿಯಲ್ಲಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಿದೆ. ಈ ವಸತಿ ಯೋಜನೆಗಳು ನಮ್ಮ ಅಧಿಕಾರಾವಧಿಯಲ್ಲಿಯೇ ಪೂರ್ಣಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇದು ನಮ್ಮ ಪಕ್ಷದ ಬದ್ಧತೆ ಹಾಗೂ ಆದ್ಯತೆ ಎಂದರು.

7500 ಸ್ತ್ರೀ ಶಕ್ತಿ ಸಂಘಕ್ಕೆ 1 ಲಕ್ಷ ರೂ. ಅನುದಾನ ಕೊಡುವ ಯೋಜನೆ, 75000 ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಸೃಷ್ಟಿ, ಗ್ರಾಮೀಣ ಪ್ರದೇಶದಲ್ಲಿ ಜಾರಿಯಾಗುವ ಯೋಜನೆಗಳು. ಇಲಾಖೆಗಳಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಗೊಳಿಸುವಲ್ಲಿ ಆರೋಗ್ಯಕರ ಪೈಪೋಟಿ ನಮ್ಮ ಸರ್ಕಾರದಲ್ಲಿದೆ ಎಂದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ 18 ಭ್ರಷ್ಟರ ಬೇಟೆಯಾಡಿದ ಎಸಿಬಿ: ಗದುಗಿನ ಬಸವಕುಮಾರ್ ಅಣ್ಣಿಗೇರಿಗೆ ಬಿಗ್ ಶಾಕ್

ಉತ್ತರಪ್ರಭರಾಜ್ಯ: ಇಂದು ರಾಜ್ಯಾದ್ಯಂತ ಭ್ರಷ್ಟರ ವಿರುದ್ಧ ಎಸಿಬಿ ದಾಳಿ ನಡೆಸಿದ್ದು, ಹಲವು ಇಲಾಖೆಗಳ 18 ಅಧಿಕಾರಿಗಳ…

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ : 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Two Day Heavy Rains in the State: Yellow Alert in 6 Districts

ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು!

ಹಾಸನ: ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವು, ವಾಂತಿ,…