ಉತ್ತರಪ್ರಭ ಸುದ್ದಿ

ಬಸವಾದಿ ಶರಣರ ತತ್ವಗಳನ್ನು ನಾಡಿನ ತುಂಬ ಪಸರಿಸಲು ತಮ್ಮ ಇಡೀ ಬದುಕನ್ನು ಮೀಸಲಿಟ್ಟಿದ್ದ ಡಾ. ಈಶ್ವರ ಮಂಟೂರ ಅವರಿಗೆ ಹೃದಯಾಘಾತ ಎಂದರೆ ನಂಬಲಾಗುತ್ತಿಲ್ಲ. ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ನಿಷ್ಠೆಯಿಂದ ಕಾಪಾಡಿಕೊಂಡು ಬಂದಿದ್ದ ಶರಣರದು ಶಿಸ್ತುಬದ್ಧ ಜೀವನ. ಜಮಖಂಡಿ ಹತ್ತಿರದ ಮದರಕಂಡಿ ಆಶ್ರಮದ ನಿರಂತರ ಚಟುವಟಿಕೆಗಳ ಮೂಲಕ ನಾಡಿನ ಗಮನ ಸೆಳೆದಿದ್ದರು. ಅನೇಕ ವೇದಿಕೆ ಮೇಲೆ ಒಟ್ಟಾಗಿ ಇದ್ದ ನೆನಪುಗಳು ಧಾವಿಸುತ್ತವೆ.

ಮುಖ್ಯವಾಗಿ ಇಲಕಲ್ಲಿನ ಮಹಾಂತ ಅಪ್ಪಗಳ ಪ್ರಭಾವದಿಂದಾಗಿ ತಮ್ಮ ವಿಶಿಷ್ಟ ಕಾರ್ಯ ಚಟುವಟಿಕೆಗಳನ್ನು ಕೈ ಗೊಳ್ಳುತ್ತಿದ್ದ ಶರಣರ ಪ್ರವಚನದ ದೇಸಿ ಸೊಗಡನ್ನು ಮರೆಯಲಾಗದು. ನಿರಂತರ ಶಿವಾನುಭವ, ಗಣ್ಯರ ಸಂಮಾನ, ಶಿವಯೋಗ ಶಿಬಿರಗಳು, ವಾರ್ಷಿಕ ಬೃಹತ್ ಕಾರ್ಯಕ್ರಮಗಳ ಜೊತೆಗೆ, ವೈಯಕ್ತಿಕ ಪ್ರವಚನ ನೀಡಲು ಇಡೀ ಲೋಕವನ್ನು ಸಂಚಾರ ಮಾಡುತ್ತಿದ್ದರು.

ಸಾಯುವ ವಯಸ್ಸೂ ಅವರದಲ್ಲ. ಎಮ್ಮವರಿಗೆ ಸಾವಿಲ್ಲ ಎಂಬ ಮಾತಿದೆ. ಆದರೂ ಇಷ್ಟೊಂದು ಅನಿರೀಕ್ಷಿತ ಸಾವು ಇದಾಗಬಾರದಿತ್ತು. ‘ಸಾವು’ ತನ್ನ ಶಕ್ತಿಯನ್ನು ಮತ್ತೆ ಮತ್ತೆ ಇಂತಹ ಸಾವುಗಳ ಮೂಲಕ ನಮಗೆ ಎಚ್ಚರಿಸುತ್ತಲೇ ಇರುತ್ತದೆ. ಹೋಗಿ ಬನ್ನಿ ಶರಣರೇ…

ಪ್ರೊ. ಸಿದ್ದು ಯಾಪಲಪರವಿ ಕಾರಟಗಿ.
Leave a Reply

Your email address will not be published. Required fields are marked *

You May Also Like

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು?

ಉತ್ತರಪ್ರಭ ಸುದ್ದಿನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ…

ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ – ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು?

ಮಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವಿಷಯವಾಗಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.

ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ/ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.