ಉತ್ತರಪ್ರಭ
ಹುಬ್ಬಳ್ಳಿ : ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ ಹಗಲು ರಾತ್ರಿ, ಮಳೆ, ಬಿಸಿಲು, ಚಳಿ ಲೆಕ್ಕಿಸದೇ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, (NSUI) ಕರ್ನಾಟಕ ವತಿಯಿಂದ ಪ್ರತಿಭಟನೆ ನಡೆಸುತ್ತಿದೆ, ಉಪವಾಸ ಸತ್ಯಾಗ್ರಹ ಕೈಗೊಂಡಿರುವ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ವೈದ್ಯಕೀಯ ಸಿಬ್ಬಂದಿಗಳು ಅವರ ತಪಾಸಣೆ ನಡೆಸಿದರು. ಮೂರು ವರ್ಷಗಳ ಕೋರ್ಸ್ ಮೂರು ವರ್ಷದಲ್ಲಿ ಮುಗಿಯಬೇಕು, ಐದು ವರ್ಷದ ಕೋರ್ಸ್ ಐದು ವರ್ಷದಲ್ಲಿ ಮುಗಿಯಬೇಕು ಕೂಡಲೇ ಕಾನೂನು ತರಗತಿಗಳು ಪ್ರಾರಂಭವಾಗಬೇಕು ಎಂಬುದು ಅವರ ಬೇಡಿಕೆಯಾಗಿದೆ.
KSLU ಕುಲಪತಿಗಳು ಉಪವಾಸ ನಿರತ ವಿದ್ಯಾರ್ಥಿಗಳಿಗೆ ಬೇಟಿನೀಡಿ ಡಿಸೆಂಬರ್ 15 ರಿಂದ ಪ್ರಾರಂಭವಾಗುವ ಪರೀಕ್ಷೆಗಳನ್ನು ತಡೆಹಿಡಿದಿದೆ, ನಾನು ಈ ವಿಷಯದ ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿಗೆ ಹೋಗುತ್ತಿದ್ದೇನೆ ಇನ್ನೆರಡು ದಿನಗಳಲ್ಲಿ ಇದರ ಬಗ್ಗೆ ಸ್ಪಷ್ಟನೆಯನ್ನು ನೀಡುತ್ತೇವೆ ಎಂದು ಹೇಳಿದರು. ಇದಕ್ಕೆ ಒಪ್ಪದ ಕಾನೂನು ವಿದ್ಯಾರ್ಥಿಗಳು ಪೂರ್ತಿ ಸ್ಪಷ್ಟನೆ ಸಿಗೋವರೆಗು ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದರು.