ಉತ್ತರಪ್ರಭ

ಹುಬ್ಬಳ್ಳಿ : ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ ಹಗಲು ರಾತ್ರಿ, ಮಳೆ, ಬಿಸಿಲು, ಚಳಿ ಲೆಕ್ಕಿಸದೇ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, (NSUI) ಕರ್ನಾಟಕ ವತಿಯಿಂದ ಪ್ರತಿಭಟನೆ ನಡೆಸುತ್ತಿದೆ, ಉಪವಾಸ ಸತ್ಯಾಗ್ರಹ ಕೈಗೊಂಡಿರುವ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ವೈದ್ಯಕೀಯ ಸಿಬ್ಬಂದಿಗಳು ಅವರ ತಪಾಸಣೆ ನಡೆಸಿದರು. ಮೂರು ವರ್ಷಗಳ ಕೋರ್ಸ್ ಮೂರು ವರ್ಷದಲ್ಲಿ ಮುಗಿಯಬೇಕು, ಐದು ವರ್ಷದ ಕೋರ್ಸ್ ಐದು ವರ್ಷದಲ್ಲಿ ಮುಗಿಯಬೇಕು ಕೂಡಲೇ ಕಾನೂನು ತರಗತಿಗಳು ಪ್ರಾರಂಭವಾಗಬೇಕು ಎಂಬುದು ಅವರ ಬೇಡಿಕೆಯಾಗಿದೆ.

ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ವೈದ್ಯಕೀಯ ಸಿಬ್ಬಂದಿಗಳು ಅವರ ತಪಾಸಣೆ ನಡೆಸಿದರು


KSLU ಕುಲಪತಿಗಳು ಉಪವಾಸ ನಿರತ ವಿದ್ಯಾರ್ಥಿಗಳಿಗೆ ಬೇಟಿನೀಡಿ ಡಿಸೆಂಬರ್ 15 ರಿಂದ ಪ್ರಾರಂಭವಾಗುವ ಪರೀಕ್ಷೆಗಳನ್ನು ತಡೆಹಿಡಿದಿದೆ, ನಾನು ಈ ವಿಷಯದ ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿಗೆ ಹೋಗುತ್ತಿದ್ದೇನೆ ಇನ್ನೆರಡು ದಿನಗಳಲ್ಲಿ ಇದರ ಬಗ್ಗೆ ಸ್ಪಷ್ಟನೆಯನ್ನು ನೀಡುತ್ತೇವೆ ಎಂದು ಹೇಳಿದರು. ಇದಕ್ಕೆ ಒಪ್ಪದ ಕಾನೂನು ವಿದ್ಯಾರ್ಥಿಗಳು ಪೂರ್ತಿ ಸ್ಪಷ್ಟನೆ ಸಿಗೋವರೆಗು ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ತಾಲೂಕಿನಲ್ಲಿ 7 ಜನ ಅವಿರೋಧ ಆಯ್ಕೆ: 167 ಸ್ಥಾನಗಳಿಗೆ ಚುನಾವಣೆ

ತಾಲ್ಲೂಕಿನಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣಾ ಕಣ ರಂಗೇರುತ್ತಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ಕೊವಿಡ್-19 ಸೋಂಕು: ಉಸಿರಾಟದ ಸಮಸ್ಯೆ ಸ್ಥಳದಲ್ಲೇ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಗದಗ : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ 9…

ಸರ್ಕಾರಿ ವಿವಿಗಳ ತಾತ್ಕಾಲಿಕ- ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತ ವಿಚಾರ ಸಂಕಿರಣ

ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.

ಭಾರತ: 7 ಲಕ್ಷ ದಾಟಿದ ಪಾಸಿಟಿವ್

ನವದೆಹಲಿ: ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದ ನಡುವಿನ 24 ಗಂಟೆಗಳಲ್ಲಿ 24,448 ಕೇಸುಗಳು ದಾಳಲಾಗುವ ಮೂಲಕ…