ಉತ್ತರಪ್ರಭ ಸುದ್ದಿ

ಮುಳಗುಂದ: ಇಲ್ಲಿನ ಪಟ್ಟಣ ಪಂಚಾಯ್ತಿ ಕಾರ್ಯಾಲಯದಲ್ಲಿ ಸ್ಥಾಪಿಸಿದ ಧಾರವಾಡ ವಿಧಾನ ಪರಿಷತ್ ಚುನಾವಣೆಯ ಮತಗಟ್ಟೆ ಸಂಖ್ಯೆ 116 ರಲ್ಲಿ ಗದಗ ವಿಧಾನಸಭೆ ಕ್ಷೇತ್ರದ ಶಾಸಕ ಎಚ್.ಕೆ.ಪಾಟೀಲ ಅವರು ಶುಕ್ರವಾರ ಮುಂಜಾನೆ ಪಟ್ಟಣ ಪಂಚಾಯ್ತಿ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಧಾರವಾಡ ಒಳಗೊಂಡಂತೆ ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ ಅವರಿಗೆ ಪ್ರಥಮ ಪ್ರಾಶಸ್ತ್ಯದ ನಿರೀಕ್ಷೆಮೀರಿ ಹೆಚ್ಚಿನ ಮತಗಳು ಬರಲಿದ್ದು, ರಾಜ್ಯದ ವಿಧಾನ ಪರಿಷತ್ತಿನ 20 ಸ್ಥಾನಗಳಲ್ಲಿ 12 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೇನಾ ಹೆಲಿಕಾಪ್ಟರ್ ಪತನ ಉನ್ನತ ತನಿಖೆಯಾಗಲಿ:
ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಮೃತಪಟ್ಟ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಸೇನೆಯ ಅಧಿಕಾರಿಗಳ ಸಾವು ದೇಶಕ್ಕೆ ತುಂಬಲಾರದ ಹಾನಿ, ದೇಶ ಸೇವೆಗಾಗಿ ತಮ್ಮನ್ನು ಅರ್ಪಣೆಗೆ ಸಿದ್ದರಾಗಿ ದೇಶ ಸೇವೆ ಮಾಡಿದವರು. ರಾವತ್ ಅವರು ದೇಶದ ಅತ್ಯತ್ತಮ ಅಧಿಕಾರಿಯಾಗಿದ್ದರು. ಎಂದು ಸಂತಾಪ ವ್ಯಕ್ತಪಡಿಸಿದರು.
ಈ ದುರ್ಘಟನೆ ನಡೆದಿದ್ದರ ಬಗ್ಗೆ ಉನ್ನತ ತನಿಖೆ ಆಗಬೇಕು, ಭದ್ರತಾ ನಿರ್ವಹಣೆ ಕನಿಷ್ಟ ಇವೆ, ಯಾವರೀತಿ ನಿಷ್ಕ್ರಿಯೆ ನಡೆದಿದೆ ಎನ್ನುವುದಕ್ಕೆ ಇದು ಕನ್ನಡಿ ಇದ್ದಂತೆ, ಇದಕ್ಕೆ ಸಂಬಂಧಿಸಿದವರು ಎಚ್ಚೆತ್ತುಕೊಳ್ಳಬೇಕು. ಬಿಜೆಪಿ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸದೇ ಗಂಬೀರವಾಗಿ ತನಿಖೆ ಮತ್ತು ಘಟನೆಗಳು ಮರುಕಳಿಸದಂತೆ ಕ್ರಮಗಳನ್ನ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಮಹತ್ವದ ವ್ಯಕ್ತಿಗಳ ಭದ್ರತೆ ಮತ್ತು ದೇಶ ಸೇವೆಯಲ್ಲಿರುವವರನ್ನ ಸರ್ಕಾರ ಲಘುವಾಗಿ ಪರಿಗಣೆಗಣಿಸುತ್ತಿದೆ. ಮುಂದೆ ಇಂತಹ ದುರ್ಘಟನೆ ನಡೆಯದಂತೆ ಎಚ್ಚರ ವಹಿಸಬೇಕು. ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಸುಂಕಾಪೂರ,ಮುಖಂಡರಾದ ಎಸ್.ಎಂ.ನೀಲಗುಂದ, ಎಂ.ಡಿ.ಬಟ್ಟೂರ, ಬಿ.ಎಂ.ವಾಲಿ, ಅಶೋಕ ಸೋನಗೋಜಿ, ಅಶೋಕ ಹುಣಸಿಮರದ, ಸಿದ್ದು ಪಾಟೀಲ, ಜಿಲ್ಲಾ ಯುವ ಕಾಂಗ್ರಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಹಾಗೂ ಪಪಂ ಸದಸ್ಯರು ಇದ್ದರು.

Leave a Reply

Your email address will not be published. Required fields are marked *

You May Also Like

ಆಸ್ತಿ ತೆರಿಗೆ ಪರಿಷ್ಕರಣೆ ಮಸೂದೆ ; ವಿಧಾನ ಪರಿಷತ್ ಒಪ್ಪಿಗೆ

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ತಿದ್ಧುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಸೋಮವಾರ ಒಪ್ಪಿಗೆ ನೀಡಿದೆ. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ಮಸೂದೆ 2021 ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಡಿಸಿದರು.

ಪೊಲೀಸ್ ಸಿಬ್ಬಂದಿಗೂ ಕೊರೊನಾ – ಹಲವು ಠಾಣೆಗಳು ಸೀಲ್ ಡೌನ್!

ಬೆಂಗಳೂರು:  ನಗರದಲ್ಲಿ ಪೊಲೀಸ್ ಸಿಬ್ಬಂದಿಗೂ ಕೊರೊನಾ ಮಹಾಮಾರಿ ಬೆನ್ನು ಬಿದ್ದಿರುವುದಕ್ಕೆ ಇಲಾಖೆ ವಿಷಾದ ವ್ಯಕ್ತಪಡಿಸುತ್ತಿದೆ. ಸಶಸ್ತ್ರ…

ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ