ವರದಿ: ಸುರೇಶ ಲಮಾಣಿ

ಉತ್ತರಪ್ರಭ

ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮದ ರೈತರು ನಾದಿಗಟ್ಟಿ ಹದ್ದಿನಲ್ಲಿ ಬರುವ ಸರ್ವೇ ನಂ.27 .26/1ಎ 28/2 28/1 21/2 ಶೇತ್ಕಿ ಜಮೀನುಗಳಲ್ಲಿ ಅಕ್ರಮವಾಗಿ ಮಣ್ಣು ಹಾಗೂ ಮರಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ ಎಂದು ತಹಶಿಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಯವರಿಗೆ ಮನವಿ ಸಲ್ಲಿಸಿದರು.

     ನಂತರ ಮಾತನಾಡಿದ ಉಮೇಶ ಲಮಾಣಿ ನಮ್ಮ ಜವಳು ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಳ್ಳರು ಮರಳನ್ನು ತೆಗೆದು  ದೊಡ್ಡ ದೊಡ್ಡ ತೆಗ್ಗು, ಗುಂಡಿಗಳನ್ನ ಮಾಡಿದ್ದಾರೆ.

ಈ ಕುರಿತು ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ಪೊಲೀಸ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರು ಯಾವುದೆ ಪ್ರಯೋಜನವಾಗಿಲ್ಲ. ದಿನೇ ದಿನೇ ಅಕ್ರಮ ಮರಳುಗಳ್ಳರು ಮರಳನ್ನು ನಮ್ಮ ಜಮೀನುಗಳಲ್ಲಿ ಅಕ್ರಮವಾಗಿ ರಾತ್ರಿ ಹೋತ್ತಿನಲ್ಲಿ ಮರಳನ್ನು ಸಾಗಿಸುತ್ತಿದ್ದಾರೆ.

ಈಗಾಗಲೇ ಅಕ್ರಮ ಮರಳುಗಳ್ಳರ ಹೇಸರನ್ನು ಇಲಾಖೆಯವರಿಗೆ ತೀಳಿಸಿದ್ದರು ಯಾವುದೆ ಕ್ರಮ ಕೈಗೊಳ್ಳದ ಕಾರಣ ಇಂದು ತಹಸಿಲ್ದಾರರನ್ನು ಭೇಟಿಯಾಗಿ ಅಕ್ರಮ ಮರಳುಗಳ್ಳರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ಈನ್ನು ಎರಡು ಮೂರು ದಿನಗಳಲ್ಲಿ ತಹಸಿಲ್ದಾರರು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ತಹಸಿಲ್ದಾರ ಕಛೆರೀ ಮುಂದೆ ಉಗ್ರ ಹೋರಾಟ ಮಾಡಲಾಗುವದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಗೋಪಾಲ ಲಮಾಣಿ, ಉಮೇಶ ಲಮಾಣಿ, ನಿಂಗಪ್ಪ ಲಮಾಣಿ, ರವಿ ಲಮಾಣಿ, ಶೇಖಪ್ಪ ಲಮಾಣಿ, ರಮೇಶ ಲಮಾಣಿ, ಕೃಷ್ಣಪ್ಪ ಲಮಾಣಿ, ದೇವೇಂದ್ರ ಲಮಾಣಿ,ಕಮಲವ್ವ ಲಮಾಣಿ ಗಂಗವ್ವ ಲಮಾಣಿ ಲಕ್ಷ್ಮವ್ವ ಲಮಾಣಿ ಮಾನವ್ವ ಲಮಾಣಿ ರತ್ನವ್ವ ಲಮಾಣಿ. ಸೇರಿದಂತೆ ಅನೇಕ ರೈತರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಸೂರಣಗಿಯ ಬಾಲಕರಿಬ್ಬರು ತುಂಗಭದ್ರಾ ನದಿಯಲ್ಲಿ ಮುಳಗಿ ಸಾವು

ಶಿರಹಟ್ಟಿ : ಸಂಕ್ರಾಂತಿ ಹಬ್ಬ ದಂದು ಸೂರಣಗಿ ಗ್ರಾಮದ ಬಾಲಕರ ಪಾಲಿಗೆ ಕರಾಳ ಅಷ್ಟೇ ಅಲ್ಲದೇ…

ನೀರು ಪಾಲಾದ ಬಾಲಕನ ಮೃತದೇಹ ಪತ್ತೆ

ಪಟ್ಟಣದ ಅಗಸ್ತ್ಯತೀರ್ಥ ಬಾವಿಯಲ್ಲಿ ಈಜಲು ಹೋದ ಯುವಕ ನೀರುಪಾಲಾದ ಘಟನೆ ಗುರುವಾರ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿತ್ತು.

ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !

ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!

ತಂದೆ ಬರ್ತಡೆಗೆ ಕೇಕ್ ತರಲು ಬಂದವರ ಬೈಕ್ ಜಪ್ತಿ!

ಗದಗ: ಜೂ.1ರವರೆಗೆ ಗದಗ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದಾಗ್ಯೂ ಜನರು ಮಾತ್ರ ಅನಾವಶ್ಯಕ ಓಡಾಟ ನಿಲ್ಲಿಸುತ್ತಿಲ್ಲ. ತಂದೆಯ ಹುಟ್ಟು ಹಬ್ಬ ಹಿನ್ನೆಲೆ ಕೇಕ್ ತರಲು ಹೊರ ಬಂದವರನ್ನು ತಡೆದ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ.