ವರದಿ: ಸುರೇಶ ಲಮಾಣಿ

ಉತ್ತರಪ್ರಭ

ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮದ ರೈತರು ನಾದಿಗಟ್ಟಿ ಹದ್ದಿನಲ್ಲಿ ಬರುವ ಸರ್ವೇ ನಂ.27 .26/1ಎ 28/2 28/1 21/2 ಶೇತ್ಕಿ ಜಮೀನುಗಳಲ್ಲಿ ಅಕ್ರಮವಾಗಿ ಮಣ್ಣು ಹಾಗೂ ಮರಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ ಎಂದು ತಹಶಿಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಯವರಿಗೆ ಮನವಿ ಸಲ್ಲಿಸಿದರು.

     ನಂತರ ಮಾತನಾಡಿದ ಉಮೇಶ ಲಮಾಣಿ ನಮ್ಮ ಜವಳು ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಳ್ಳರು ಮರಳನ್ನು ತೆಗೆದು  ದೊಡ್ಡ ದೊಡ್ಡ ತೆಗ್ಗು, ಗುಂಡಿಗಳನ್ನ ಮಾಡಿದ್ದಾರೆ.

ಈ ಕುರಿತು ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ಪೊಲೀಸ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರು ಯಾವುದೆ ಪ್ರಯೋಜನವಾಗಿಲ್ಲ. ದಿನೇ ದಿನೇ ಅಕ್ರಮ ಮರಳುಗಳ್ಳರು ಮರಳನ್ನು ನಮ್ಮ ಜಮೀನುಗಳಲ್ಲಿ ಅಕ್ರಮವಾಗಿ ರಾತ್ರಿ ಹೋತ್ತಿನಲ್ಲಿ ಮರಳನ್ನು ಸಾಗಿಸುತ್ತಿದ್ದಾರೆ.

ಈಗಾಗಲೇ ಅಕ್ರಮ ಮರಳುಗಳ್ಳರ ಹೇಸರನ್ನು ಇಲಾಖೆಯವರಿಗೆ ತೀಳಿಸಿದ್ದರು ಯಾವುದೆ ಕ್ರಮ ಕೈಗೊಳ್ಳದ ಕಾರಣ ಇಂದು ತಹಸಿಲ್ದಾರರನ್ನು ಭೇಟಿಯಾಗಿ ಅಕ್ರಮ ಮರಳುಗಳ್ಳರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ಈನ್ನು ಎರಡು ಮೂರು ದಿನಗಳಲ್ಲಿ ತಹಸಿಲ್ದಾರರು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ತಹಸಿಲ್ದಾರ ಕಛೆರೀ ಮುಂದೆ ಉಗ್ರ ಹೋರಾಟ ಮಾಡಲಾಗುವದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಗೋಪಾಲ ಲಮಾಣಿ, ಉಮೇಶ ಲಮಾಣಿ, ನಿಂಗಪ್ಪ ಲಮಾಣಿ, ರವಿ ಲಮಾಣಿ, ಶೇಖಪ್ಪ ಲಮಾಣಿ, ರಮೇಶ ಲಮಾಣಿ, ಕೃಷ್ಣಪ್ಪ ಲಮಾಣಿ, ದೇವೇಂದ್ರ ಲಮಾಣಿ,ಕಮಲವ್ವ ಲಮಾಣಿ ಗಂಗವ್ವ ಲಮಾಣಿ ಲಕ್ಷ್ಮವ್ವ ಲಮಾಣಿ ಮಾನವ್ವ ಲಮಾಣಿ ರತ್ನವ್ವ ಲಮಾಣಿ. ಸೇರಿದಂತೆ ಅನೇಕ ರೈತರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ರೈತರಿಗೆ ಬೆಳೆವಿಮೆ ಮಾಹಿತಿ : ಯಾವ ಊರಿಗೆ, ಯಾವ ಬೆಳೆಗೆ, ಎಷ್ಟು ವಿಮೆ ಸಿಗಲಿದೆ..?

ಗದಗ: ಕರ್ನಾಟಕ ಸರ್ಕಾರವು 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ(ವಿಮಾ) ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಿರುತ್ತದೆ. ಈ ಯೋಜನೆಯ ರೂಪರೇಷೆ ಮತ್ತು ವಿವರಗಳನ್ನು ಇಲ್ಲಿ ನೀಡಲಾಗಿದೆ.

ಕೋವಿಡ್ ನಿಯಮ ಉಲ್ಲಂಘನೆ: ಗದಗ ಜಿಲ್ಲೆ ಗ್ರಾಮೀಣ ಭಾಗದಲ್ಲಿ ದಂಡ ವಸೂಲಿ

ಗದಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿAದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರೈಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಧಾರ್ಮಿಕ ಹಬ್ಬಗಳನ್ನು ನಿರ್ಭಂದಿಸಿ ಜಿಲ್ಲಾಡಳಿತ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೆöÊಡೆ ಹಬ್ಬಗಳ ಸಂದರ್ಭಗಳ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.