ಉತ್ತರಪ್ರಭ ಸುದ್ದಿ
ಗದಗ: ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ತಂತಿ ಬೇಲಿಯನ್ನು ಹಾಕಲು ಪದೇ ಪದೇ ರೈತರಿಗೆ ಕಿರುಕುಳ ನೀಡುತ್ತಿದ್ದು, ಈ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧೀವೇಶನದಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ಧರಾಮಯ್ಯನವರು ಚರ್ಚಿಸಲು ಉತ್ತರ ಕರ್ನಾಟಕ ಮಹಾಸಭಾ ರಾಜ್ಯಾಧಕ್ಷರಾದ ಶ್ರೀ ರವಿಕಾತ ಅಂಗಡಿಯವರು ಒತ್ತಾಯಿಸಿದ್ದಾರೆ. ಈ ಕೂಡಲೇ ಸರ್ಕಾರ ಬಗರ ಹುಕುಮ್ ಸಾಗುವಳಿದಾರರಿಗೆ ಹಕ್ಕುಪತ್ರವನ್ನು ನೀಡಬೇಕು ಇಲ್ಲವಾದಲ್ಲಿ ಉಗ್ರಹೋರಾಟ ಮಾಡಲಾಗುವುದು ಎಂದರು.
ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ಕಳೆದ ವರ್ಷ ತಂತಿ ಬೇಲಿ ಅಳವಡಿಸಲು ಹೊರಟ್ಟಿತ್ತು ಇದನ್ನು ಖಂಡಿಸಿ ಉತ್ತರ ಕರ್ನಾಟಕ ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ರವಿಕಾಂತ ಅಂಗಡಿಯವರ ನೇತೃತ್ವದಲ್ಲಿ ದೇವಿಹಾಳ ತಾಂಡಾದಿಂದ ಪಾದಯಾತ್ರೆ ಮೂಲಕ ಶಿರಹಟ್ಟಿಯ ತಹಶಿಲ್ದಾರ ಕಚೇರಿಯ ಮುಂದೆ ಸಾವಿರಾರು ರೈತರಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ಜಿಲ್ಲೆಯ ಬಗರ್ ಹುಕುಮ್ ಸಾಗುವಳಿ ರೈತರು ಪಾಲ್ಗೊಂಡಿದ್ದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿಗಳು ಪ್ರತಿಭಟನಾಕಾರರ ಬೇಡಿಕೆಯನ್ನು ಆಲಿಸಿ ಕೂಡಲೇ ಅರಣ್ಯ ಇಲಾಖೆಯ ತಂತಿ ಬೇಲಿ ಕಾರ್ಯವನ್ನು ಸ್ಥಗಿತಗೊಳಿಸಲಾಗುತ್ತದೆ, ಅದರೊಂದಿಗೆ ಅರಣ್ಯ ಇಲಾಖೆ ತಿರಸ್ಕರಿಸಿದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುತ್ತದೆ , ಬಗರ್ ಹುಕುಮ್ ಸಾಗುವಳಿ ರೈತರಿಗೆ ಯಾವುದೆ ರೀತಿಯ ತೊಂದರೆ ಕೊಡುವುದಿಲ್ಲ ಹೀಗೆ ತಮ್ಮೇಲ್ಲಾ ಬೇಡಿಕೆಗಳನ್ನು ಇಡೇರಿಸಲಾಗುವುದು ಹಾಗಾಗಿ ಪ್ರತಿಭಟನೆಯನ್ನು ಕೈಬಿಡಬೇಕೆಂದು ಮನವಿ ಮಾಡಿದ ನಂತರ ಪ್ರತಿಭಟನಾಕಾರು ಪ್ರತಿಭಟನೆಯನ್ನು ಕೈ ಬಿಟ್ಟರು.
ಪ್ರತಿಭಟನೆ ನಂತರ ಅನೇಕ ಭಾರಿ ಅರಣ್ಯ ಇಲಾಖೆಯಿಂದ ಅಲ್ಲಿಯ ನೀವಾಸಿಗಳಿಗೆ ನೋಟಿಸ್ ಕೊಡುವುದು ಮತ್ತು ತಂತಿ ಬೇಲಿ ಹಾಕಲು ಪ್ರಯತ್ನಿಸುತ್ತಾ ಬಂದಿದೆ. ಸದನದಲ್ಲಿ ಪ್ರಶ್ನೆಯನ್ನು ಕೇಳಿದ ನಂತರ ಮತ್ತು ಹೋರಾಟದ ನಂತರ ಇಲಾಖೆ ತನ್ನ ಕಾರ್ಯವನ್ನು ಸ್ಥಗಿತಗೊಳಿಸುತ್ತದೆ ಮತ್ತೆ ತನ್ನ ಕಾರ್ಯವನ್ನು ಮುಂದುವರಿಸುತ್ತದೆ
ಬಗರ ಹುಕುಮ್ ಸಾಗುವಳಿ ಹೋರಾಟಗಾರರು ಮತ್ತು ಉತ್ತರ ಕರ್ನಾಟಕ ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ರವಿಕಾಂತ ಅಂಗಡಿಯವರು ಬಗರ ಹುಕುಮ್ ಸಾಗುವಳಿದಾರರ ಸಮಸ್ಯೆ ಕುರಿತು ಅನೇಕ ಹೋರಾಟಗಳನ್ನು ಮಾಡುತ್ತಾ ಬಂದಿದ್ದು, ಈ ಹಿಂದೆ ಮಾಜಿ ಸಚಿವರು ಮತ್ತು ಗದಗ ಶಾಸಕರು ಮತ್ತು ಕಾಂಗ್ರೇಸ್ ಹಿರಿಯ ಮುಖಂಡರಾದ ಎಚ್ ಕೆ ಪಾಟೀಲರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದ್ದಾರೆ ಮತ್ತು ಅರಣ್ಯ ಅಧಿಕಾರಿಗಳು ಬಗರ ಹುಕುಮ್ ಸಾಗುವಳಿದಾರರಿಗೆ ತೊಂದರೆ ಕೊಡದಂತೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅನ್ನ ನೀರಿಲ್ಲದೆ ನಿತ್ರಾಣನಾದ ಆ ವೃದ್ಧ ಮನೆ ತಲುಪಿದ್ದು ಹೇಗೆ?

ಲಾಕ್ ಡೌನ್ ಹಿನ್ನೆಲೆ ಅದೆಷ್ಟೋ ಜನ ಒಂದಲ್ಲ ಒಂದು ಕಾರಣಕ್ಕೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ವೃದ್ಧನೊಬ್ಬ ಗೋಳಾಟ ಇದಕ್ಕೊಂದು ಉದಾಹರಣೆ.

ರೋಣದ ವಿವಿಧ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ

ಉತ್ತರಪ್ರಭ ಸುದ್ದಿಗದಗ: 110/33/11 ಕೆವ್ಹಿ ರೋಣ, ವಿದ್ಯುತ್ ವಿತರಣಾ ಉಪ-ಕೇಂದ್ರದ 10 MVA ಪರಿವರ್ತಕದ ನಿರ್ವಹಣಾ…

ಜಾನುವಾರುಗಳ ಚಿಕಿತ್ಸೆಗೆ ಮನೆ ಬಾಗಿಲಿಗೆ ಬರಲಿದೆ ವಾಹನ: ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ರೈತರು ಇನ್ನಿಲ್ಲದ ಹರಸಾಹಸ ಪಡಬೇಕಾಗಿತ್ತು. ಆದರೆ ರಾಜ್ಯದಲ್ಲಿ ಇಂದಿನಿಂದ ಪಶುಸಂಜೀವಿನಿ ಯೋಜನೆಯನ್ನು…

ಬಿಸಿಯೂಟದ ಬದಲು ಅಹಾರ ನೀಡಿ : ಹೈಕೋರ್ಟ್ ಸೂಚನೆ

ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.