ಉತ್ತರಪ್ರಭ

ಲಕ್ಷ್ಮೇಶ್ವರ: ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಪ್ರಥಮ ಪ್ರಾಶಸ್ತ್ಯ ಮತಗಳಿಂದ ಜಯಗಳಿಸಿದ ಹಿನ್ನೆಲೆ ಲಕ್ಷ್ಮೇಶ್ವರ ತಾಲೂಕ ಬ್ಲಾಕ್ ಕಾಂಗ್ರೇಸ್ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಯುವ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮಾಡಲಾಯಿತು.

ಉದ್ದೇಶಿಸಿ ಮಾತನಾಡಿದ ಪುರಸಭೆ ಮಾಜಿ ಅದ್ಯೆಕ್ಷೆ ಹಾಗೂ ಹಾಲಿ ಸದಸ್ಯೆ ಜಯಕ್ಕ ಕಳ್ಳಿ ಹಾಗೂ ಕಾಂಗ್ರೇಸ್ ನಗರ ಘಟಕದ ಅದ್ಯಕ್ಷ ಅಮರೀಶ್ ತೆಂಬದಮನಿ ಮಾತನಾಡಿ ಸಲೀಂ ಅಹ್ಮದ್ ಅವರ ಗೆಲವು ಧಾರವಾಡ ವಿಧಾನ ಪರಿಷತ್ ಕ್ಷೇತ್ರದ ಜನರಿಗೆ ಹರ್ಷವನ್ನುಂಟು ಮಾಡಿದೆ. ಈ ಗೆಲುವಿನಿಂದ ನಾವೆಲ್ಲ ಕಾರ್ಯಕರ್ತರಿಗೆ ಹಿಗ್ಗುವಂತೆ ಮಾಡಿದೆ ಮುಂದಿನ ವಿಧಾನ ಸಭಾ ಚುನಾವಣೆ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಅತಿಹೆಚ್ಚು ಸ್ಥಾನಗಳು ಬರುವುದು ಖಚಿತ. ಅದಕ್ಕೆಲ್ಲ ನಾವೇಲ್ಲರೂ ಶ್ರಮಿಸುತ್ತೆವೆ. ಜನರ ನಡುವಲ್ಲಿ ನಮ್ಮ ಕಾಂಗ್ರೇಸ್ ಪಕ್ಷ ಇದ್ದು ರೈತರ, ಬಡವರ ಪರವಾಗಿ ಕೆಲಸ ಮಾಡುತ್ತ ಬಂದಿದ್ದೆವೆ ಆದ್ದರಿಂದ ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದು ಕಾಂಗ್ರೇಶ ಪಕ್ಷ ಆಡಳಿತಕ್ಕೆ ಬರುವುದು ಖಚಿತ ಎಂದರು

ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ನಂತರ ಕಾಂಗ್ರೇಸ್ ಕಾರ್ಯಕರ್ತರು ಸಿಹಿಹಂಚಿ, ಪಟಾಕಿ ಸಿಡಿಸಿ ಕಾಂಗ್ರೇಸ್ ಪರ , ಸಲೀಂ ಅಹ್ಮದ್ ಪರವಾದ ಘೋಷಣೆ ಕೂಗಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ಅಮರೀಶ್ ತೆಂಬದಮನಿ, ತಾಲೂಕ ಯುವ ಘಟಕ ಅಧ್ಯಕ್ಷ ಸರ್ಫರಾಜ ಸೂ ರಣಗಿ ಪುರಸಭೆ ಉಪಾಧ್ಯಕ್ಷ ರಾಮಣ್ಣ ಗಡದವರ, ಸದಸ್ಯ ಸಾಹೇಬ್ ಜಾನ ಹವಾಲ್ದಾರ್. ನಾಗರಾಜ್ ದೊಡ್ಡಮನಿ, ಅಣ್ಣಪ್ಪ ರಾಮಗೇರಿ, ಬಸವರಾಜ್ ಹಿರೇಮನಿ, ಬಸವರಾಜ ಹೊಳಲಾಪುರ,ನೀಲಪ್ಪ ಪಡಗೇರಿ,ವೀರೇಂದ್ರ ಭಜಂತ್ರಿ, ಗಣೇಶ ನಾಯಕ, ಸೋಮಪ್ಪ ಲಮಾಣಿ, ಮಾನಪ್ಪ ಲಮಾಣಿ, ಮುತ್ತಣ್ಣ ಗಡೆಪ್ಪನವರ,ಹನುಮಂತ ಶೇರಸೂರಿ,ಶಫಿಕ್ ಬಿಜಾಪುರ್, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಸರ್ಕಾರಿ ವಿವಿಗಳ ತಾತ್ಕಾಲಿಕ- ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತ ವಿಚಾರ ಸಂಕಿರಣ

ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.

ಕಪ್ಪತ್ತಗುಡ್ಡದ ಸಭೆ ಕಗ್ಗಂಟು: ಪ್ರಶ್ನೆಗಳು ನೂರೆಂಟು..!

ನಿನ್ನೆಯಷ್ಟೆ ನಿಮ್ಮ ಉತ್ತರಪ್ರಭ ಕಪ್ಪತ್ತಗುಡ್ಡದ ಬಗ್ಗೆ ಸದ್ಯದ ಬೆಳವಣಿಗೆ ಹಾಗೂ ಒಳಗೊಳಗೆ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಕುರಿತು ವಿಶೇಷ ವರದಿಯನ್ನು ನೀಡಿತ್ತು. ಇದರ ಬೆನ್ನಲ್ಲೆ ನಿನ್ನೆ ವಿಧಾನಸೌಧದಲ್ಲಿ ಕಪ್ಪತ್ತಗುಡ್ಡ ವನ್ಯಧಾಮಕ್ಕೆ ಸಂಬಂಧ ಪಟ್ಟಂತೆ ಸಭೆ ಕೂಡ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜೇನುಹುಳುಗಳಂತೆ ಬಂದ ಕುರುಬರು

ನಗರದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ (ಬಿಐಇಸಿ) ಆವರಣ ಭಾನುವಾರ ಕುರುಬರ ಶಕ್ತಿ ಪ್ರದರ್ಶನ ಕೇಂದ್ರದಂತೆ ಕಾಣುತ್ತಿತ್ತು. ರಾಜ್ಯದ ಮೂಲೆ-ಮೂಲೆಯಿಂದ ಜನಸಾಗರ ಸಮಾವೇಶಕ್ಕೆ ಹರಿದು ಬಂದಿತ್ತು.