ಉತ್ತರಪ್ರಭ
ರೋಣ:
ರೋಣ ಬಸ್ ನಿಲ್ದಾಣದಲ್ಲಿ ಬಾಗಲಕೋಟೆ ಘಟಕಕ್ಕೆ ಒಳಪಟ್ಟ ಬಸ್ ಹೈಕೋರ್ಟ್ ಆದೇಶದ ಮೇರೆಗೆ ವಶಕ್ಕೆ ಪಡೆದು ಕೊಂಡ ಘಟನೆ ಬುಧವಾರ ನಡೆದಿದೆ.

ಬಾಗಲಕೋಟೆ ಘಟಕದ ಬಸ್ ಚೊಳಚಗೊಡ್ಡದ ಕ್ರಾಸ್ ಬಳಿ 2014ರಲ್ಲಿ ಅಪಘಾತ ಸಂಭವಿಸಿ ನಾಲ್ಕು ಜನ ಮರಣ ಹೊಂದಿದ್ದರು, ಅವರಲ್ಲಿ ಇಬ್ಬರು ಮೃತರ ಸಂಬಂಧಿಕರು. ರೋಣ ಕೋರ್ಟಿನಲ್ಲಿ ಧಾವೆ ಹುಡಲಾಗಿ ಹೈಕೋರ್ಟ್, ಮೃತರ ಸಬಂಧಿಕರಿಗೆ ಅಸಲು, ಬಡ್ಡಿ ಸೇರಿ ಸುಮಾರು ಇಪತ್ತೊಂದು ಲಕ್ಷ ಪರಿಹಾರ ನೀಡಲು ಆದೇಶ ಮಾಡಿತ್ತು ,ಆದರೂ ಕೂಡಾ ಬಾಗಲಕೋಟೆ ಘಟಕ ಬರೀ ಹನ್ನೊಂದು ಲಕ್ಷ ಮಾತ್ರ ಪರಿಹಾರ ನೀಡಿ ಇನ್ನುಳಿದ ಹಣ ನೀಡಲು ಸತಾಯಿಸುತ್ತಿರುವ ಕಾರಣ. ಹಿರಿಯ ನ್ಯಾಯಾಧೀಶರ ಆದೇಶದ ಮೇರೆಗೆ ಈ ಬಸ್ಸನ್ನು ಜಪ್ತಿ ಮಾಡಿ ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಮೃತರ ವಾದಿಪರ ವಕೀಲ ಬಿ ಎಚ್ ಮಾಡಲಗೇರಿ ಹೇಳಿದರು.

ಈ ಸಂದರ್ಭದಲ್ಲಿ ಏನ್ ಪಿ ನದಾಫ್, ಎಸ್ ಈ ಕಾಳೆ , ಬಿ ಎಂ ಯಲಬುರ್ಗಿ ಧಿಲಿಪರು(ಅಮೀನರು ) ಉಪಸ್ಥಿತರಿದ್ದರು.

2 comments
Leave a Reply

Your email address will not be published. Required fields are marked *

You May Also Like

ಶಿಕ್ಷಕ ಶಾಂತಕುಮಾರ ಭಜಂತ್ರಿಗೆ ಭಾರತ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಗದಗ: ತಾಲೂಕಿನ ಲಿಂಗಧಾಳ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರು ಹಾಗೂ ಕನ್ನಡ ಜಾನಪದ ಪರಿಷತ್…

ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ದಾಳಿ ಮಾಡಿದ ಘಟನೆ ನಡೆದಿದೆ.

ಗರ್ಭಿಣಿಗೆ ಸೋಂಕು: ಗದಗ ಹೆರಿಗೆ ಆಸ್ಪತ್ರೆ ಸೀಲ್ ಡೌನ್

ಗದಗ: ನಗರದ ಕೆ.ಸಿ ರಾಣಿ ರಸ್ತೆಯಲ್ಲಿರುವ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಹಿಳೆಯೋರ್ವರ ಗಂಟಲುದ್ರವದ…

ಗದಗ ಜಿಲ್ಲೆಯ ಪೈಲ್ವಾನರ ಮಾಶಾಸನ ಬಿಡುಗಡೆಗೆ ಒತ್ತಾಯ

ಜಿಲ್ಲಾ ಪೈಲ್ವಾನರ ಮಾಶಾಸನ ಬಿಡುಗಡೆ ಮಾಡುವಂತೆ ಸಚಿವರಿಗೆ ಮನವಿ ನೀಡುವ ವೇಳೆ ಜಟಾಪಟಿ ನಡೆದ ಘಟನೆ ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ.