ಉತ್ತರಪ್ರಭ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಸಾಧನೆಯು ತಳಮಟ್ಟದಿಂದ ಪಕ್ಷದ ಬಲವರ್ಧನೆಗೆ ಸಾಕ್ಷಿಯಾಗಿದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 11 ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ.ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ಧರಾಮಯ್ಯ, ‘ಜನಸಾಮಾನ್ಯರ ಹಿತಕ್ಕಾಗಿ ಹೋರಾಟ ಮಾಡಲು ಕಾಂಗ್ರೆಸ್ಗೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ ಹಾಗೂ ಮುಂದಿನ ಚುನಾವಣೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಇದು ಉತ್ತೇಜನ ನೀಡುತ್ತದೆ. ಶೂನ್ಯ ಸಾಧನೆಯ ಆಧಾರದ ಮೇಲೆ ಯಾವುದೇ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ಈಗ ತಿಳಿದಿದೆ, ಹೀಗಾಗಿ ಅವರು ಚುನಾವಣಾ ಸಮಯದಲ್ಲಿ ಮತಾಂತರ ವಿರೋಧಿ ಕಾನೂನಿನ ಬಗ್ಗೆ ಮಾತನಾಡುತ್ತಿದ್ದಾರೆ.